ಲಾರಿ ಹರಿದು ಬೈಕ್ ಸವಾರ ಸಾವು…ರಸ್ತೆಯಲ್ಲೇ ಶವ ಇಟ್ಟು ಆಕ್ರೋಷ…

ಲಾರಿ ಹರಿದು ಬೈಕ್ ಸವಾರ ಸಾವು…ರಸ್ತೆಯಲ್ಲೇ ಶವ ಇಟ್ಟು ಆಕ್ರೋಷ…

ಮೈಸೂರು,ಡಿ29,Tv10 ಕನ್ನಡ

ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ
ಮೈಸೂರು ಗದ್ದಿಗೆ ಮುಖ್ಯ ರಸ್ತೆಯ ಮಾರೇಗೌಡನಹಳ್ಳಿ ಗೇಟ್ ಸಮೀಪ ನಡೆದಿದೆ.
ಹೆಚ್ ಡಿ ಕೋಟೆ ತಾಲೂಕಿನ ಕೆ.ಬೆಳ್ತೂರು ಗ್ರಾಮದ ತಿಮ್ಮನಾಯಕ ಪುತ್ರ ಸತೀಶ್ (27) ಮೃತ‌ ದುರ್ದೈವಿ.
ಮೃತ ಸತೀಶ್ ಅಕ್ಕನ ಮಗ ಶಿವು (13) ಗಂಭೀರ ಗಾಯಗೊಂಡಿದ್ದಾನೆ.
ಬೈಕ್ ನಲ್ಲಿ ಅಕ್ಕನ ಮಗನ ಜೊತೆ ಮೈಸೂರಿನಿಂದ ಸ್ವಗ್ರಾಮಕ್ಕೆ ತೆರಳುವಾಗ ದುರ್ಘಟನೆ ನಡೆದಿದೆ.
ರೋಡ್ ರೋಲರ್ ಹೊತ್ತು ಗದ್ದಿಗೆ ಕಡೆಯಿಂದ ಬರುತ್ತಿದ್ದ ಲಾರಿ ತಿರುವಿನಲ್ಲಿ ಬಂದು ಬೈಕ್ ಮೇಲೆ ಹರಿದಿದೆ.
ಚಾಲಕ ಜಾವೀದ್ ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಸ್ತೆಯಲ್ಲೇ ಶವ ಇಟ್ಟು ಮೃತನ ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು- ಗದ್ದಿಗೆ ಮುಖ್ಯರಸ್ತೆ ತಡೆದು ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ್ದಾರೆ.
ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸ್ಥಳಕ್ಕೆ ಡಿವೈಎಸ್ಪಿಗಳಾದ ರಘು, ಕರೀಂ ರಾವತರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಮೈಸೂರು,ಮೇ9,Tv10 ಕನ್ನಡ ಪಾಕ್ ಉಗ್ರರ ಮೇಲೆ ಭಾರತದ ಸೈನಿಕರಿಂದ ಸಿಂಧೂರ್ ಆಪರೇಷನ್ಯೋಧರ ಹೆಸರಿನಲ್ಲಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.ಮೈಸೂರಿನ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರುಕೋಟೆ ಆಂಜನೇಯ ದೇವಸ್ಥಾನದಲ್ಲಿ ಸೈನಿಕರ…
ಸಿಡಿಯಮ್ಮನ ಜಾತ್ರಾ ಮಹೋತ್ಸವ ಸಂಭ್ರಮ…ಸಂಸದ ಯದುವೀರ್ ಭಾಗಿ…ವಿಶೇಷ ಪೂಜೆ…

ಸಿಡಿಯಮ್ಮನ ಜಾತ್ರಾ ಮಹೋತ್ಸವ ಸಂಭ್ರಮ…ಸಂಸದ ಯದುವೀರ್ ಭಾಗಿ…ವಿಶೇಷ ಪೂಜೆ…

ಹುಣಸೂರು,ಮೇ2,Tv10 ಕನ್ನಡ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಸಿಡಿಯಮ್ಮನ ಜಾತ್ರಾ ಮಹೋತ್ಸವ ಅದ್ದೂರಿಯಿಂದ ನೆರವೇರಿತು.ಹಲವಾರು ಐತಿಹ್ಯವುಳ್ಳ, ರಾಜ್ಯಾದ್ಯಂತ ಭಕ್ತರನ್ನು ಹೊಂದಿರುವ, ಪವಾಡದ ಜಾತ್ರೆಯೆಂದೇ ಪ್ರತಿಬಿಂಬಿತವಾಗಿರುವ ಗ್ರಾಮದೇವತೆ ಜಾತ್ರಾ ಮಹೋತ್ಸವದಲ್ಲಿ…
ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು ಮುರಿತ…

ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು…

ಮಂಡ್ಯ,ಏ30,Tv10 ಕನ್ನಡ ಅರಳಿ ಮರದ ಕೆಳಗೆ ವಿರಮಿಸುತ್ತಿದ್ದ ರೈತನ ಕಾಲುಗಳ ಮೇಲೆ ಟಿಪ್ಪರ್ ಹರಿದ ಮಂಡ್ಯ ಜಿಲ್ಲೆ ಕೆ.ಆರ್‌‌.ಪೇಟೆ ತಾಲೂಕಿನ ಆಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪುಟ್ಟೇಗೌಡ ಎಂಬುವವರ ಮೇಲೆ ಹರಿದ…

Leave a Reply

Your email address will not be published. Required fields are marked *