ಚಾಮುಂಡಿಪುರಂ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ನೆನಪು

ಚಾಮುಂಡಿಪುರಂ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ನೆನಪು

ಕನ್ನಡ ಚಿತ್ರರಂಗದ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಗರದ ಚಾಮುಂಡಿ ಪುರಂ ವೃತ್ತದಲ್ಲಿ ಶ್ರೀರಾಮ ಗೆಳೆಯರ ಬಳಗದ ವತಿಯಿಂದ ವಿಷ್ಣುವರ್ಧನ್ ರವರ ಭಾವಚಿತ್ರ ಹಿಡಿದು ಮೊಂಬತ್ತಿ ಬೆಳಗಿ ಗೌರವ ಸಲ್ಲಿಸಲಾಯಿತು ನಂತರದಲ್ಲಿ ವಿಷ್ಣುವರ್ಧನ್ ರವರ ಚಿತ್ರಗೀತೆಗಳನ್ನು ಕಾರ್ಯಕ್ರಮದಲ್ಲಿ ಕೇಳಿಸಲಾಯಿತು

ಇದೇ ಸಂಧರ್ಭದಲ್ಲಿ ಸಂದೀಪ್ ರವರು ಮಾತನಾಡಿ ಸಾಹಸಸಿಂಹ ವಿಷ್ಣುವರ್ಧನ್ ರವರ ಚಿತ್ರಗಳು ಕೌಟುಂಬಿಕ ಪ್ರಧಾನವಾದುದು ಸಾಮಾಜಿಕ ಸಂದೇಶ ನೀಡುತ್ತಿದ್ದವು, ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ರವರ ಗರಡಿಯಿಂದ ಗುರುತಿಸಿಕೊಂಡ ಸಾಹಸಸಿಂಹ ವಿಷ್ಣುವರ್ಧನ್ ರೆಬಲ್ ಸ್ಟಾರ್ ಅಂಬರೀಶ್ ಜೈಜಗದೀಶ್ ರವರಿಗೆ ಚಾಮುಂಡಿಪುರಂ ಅಚ್ಚುಮೆಚ್ಚಿನ ವೃತ್ತವಾಗಿತ್ತು, ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗಲೆಲ್ಲಾ ಒಮ್ಮೆ ಚಾಮುಂಡಿಪುರಂ ವೃತ್ತಕ್ಕೆ ಬಂದು ತಮ್ಮ ಬಾಲ್ಯದ ದಿನಗಳು ನೆನೆದು ಅಭಿಮಾನಿಗಳನ್ನ ಭೇಟಿ ಮಾಡಿ ಹೋಗುತ್ತಿದ್ದರು

ಈ ಪುಣ್ಯ ಸ್ಮರಣ್ಯ ಕಾರ್ಯಕ್ರಮದಲ್ಲಿ ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷರಾದ ಸಂದೀಪ್, ಮಾಜಿನಗರ ಪಾಲಿಕೆ ಸದಸ್ಯರಾದ ಪಾರ್ಥಸಾರಥಿ, ನಿರೂಪಕ ಅಜಯ್ ಶಾಸ್ತ್ರಿ ಮುಖಂಡರಾದ ಅಂಬಳೆ ಶಿವಣ್ಣ, ಧರ್ಮೇಂದ್ರ, ಪುರುಷೋತ್ತಮ್, ವಿಕ್ರಮ ಅಯ್ಯಂಗಾರ್, ಪ್ರಭು, ಅರವಿಂದ, ಅಭಿನಂದನ್ ಅರಸ್, ಲೋಕೇಶ್, ಅರ್ಜುನ್ ಅರಸ್, ಸುಬ್ರಹ್ಮಣ್ಯ, ಗುರು, ರಾಜೇಶ್, ಮಹೇಶ್ ಅರಸ್, ಶೇಖರ್, ಸುರೇಶ್, ತೀರ್ಥ, ಸಂತೋಷ್, ಲತಾ, ಸುಶೀಲ, ಭುವನಾಕ್ಷಿ, ಕುಮಾರ್ ಸ್ವಾಮಿ, ವೀಣಾ, ಬಸವರಾಜು, ಕಿರಣ್, ಸೂರಜ್, ಲಿಖಿತ್, ಪವನ್, ಶಿವರಾಜು ಮುಂತಾದವರು ಹಾಜರಿದ್ದರು

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *