ಲೆಕ್ಚರರ್ ಜೊತೆ ಸ್ಟೂಡೆಂಟ್ ಎಸ್ಕೇಪ್…ಪಾಠ ಹೇಳಿಕೊಟ್ಟ ಮೇಷ್ಟ್ರನ್ನ ವರಿಸಿದ ವಿಧ್ಯಾರ್ಥಿನಿ…ಹಾಸಿಗೆ ಹಿಡಿದ ತಂದೆ…ವಿದ್ಯೆ ಹೇಳಿಕೊಡುವ ಗುರು ಕೆಲಸವಾ ಇದು…?

ಲೆಕ್ಚರರ್ ಜೊತೆ ಸ್ಟೂಡೆಂಟ್ ಎಸ್ಕೇಪ್…ಪಾಠ ಹೇಳಿಕೊಟ್ಟ ಮೇಷ್ಟ್ರನ್ನ ವರಿಸಿದ ವಿಧ್ಯಾರ್ಥಿನಿ…ಹಾಸಿಗೆ ಹಿಡಿದ ತಂದೆ…ವಿದ್ಯೆ ಹೇಳಿಕೊಡುವ ಗುರು ಕೆಲಸವಾ ಇದು…?

ಹುಣಸೂರು,ಡಿ31,Tv10 ಕನ್ನಡ

ಶಿಕ್ಷಕಿಯಾಗಲು ಬಿಎಡ್ ಕಾಲೇಜ್ ಗೆ ಸೇರಿದ ಯುವತಿ ಪಾಠ ಹೇಳಿಕೊಟ್ಟ ಗುರುವಿನ ಜೊತೆಗೆ ಓಡಿ ಹೋಗಿ ಮದುವೆ ಆದ ಘಟನೆ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.ಮನೆಯವರ ವಿರೋಧ ಲೆಕ್ಕಿಸದೆ ತನಗಿಂತ 15 ವರ್ಷ ಹಿರಿಯನಾದ ಲೆಕ್ಚರ್ ನ್ನ ಮದುವೆ ಆಗಿದ್ದಲ್ಲದೆ ರಕ್ಷಣೆ ಕೋರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.ಮಗಳ ವರ್ತನೆಗೆ ಬೇಸತ್ತ ಪೋಷಕರು ಶಾಕ್ ಗೆ ಒಳಗಾಗಿದ್ದಾರೆ.ಮಗಳ ಯೋಚನೆಯಲ್ಲಿ ತಂದೆ ಹಾಸಿಗೆ ಹಿಡಿದಿದ್ದಾರೆ.

ಹುಣಸೂರಿನ ನಿವಾಸಿ ಪೂರ್ಣಿಮ(24) ಎಂಎ ಮುಗಿಸಿ ಬಿಎಡ್ ಗಾಗಿ ಹುಣಸೂರಿನ ಮಹಾವೀರ್ ಕಾಲೇಜ್ ಆಫ್ ಎಜುಕೇಷನ್ ಗೆ ಸೇರಿದ್ದಾಳೆ.ಪಾಠ ಕಲಿಯುವ ಜೊತೆಗೆ ಲೆಕ್ಚರರ್ ಯಶೋದಕುಮಾರ್(39) ಜೊತೆ ಲವ್ವಿಡವ್ವಿ ಶುರುವಾಗಿದೆ.ಈ ವಿಚಾರ ಮನೆಯವರ ಗಮನಕ್ಕೆ ಬಂದಿದೆ.ಇಬ್ಬರು ಪ್ರೇಮಿಗಳು ಮದುವೆ ಆಗಲು ತೀರ್ಮಾನಿಸಿದ್ದಾರೆ.ಪೂರ್ಣಿಮ ಮನೆಯಲ್ಲಿ ವಿರೋಧ ವ್ಯಕ್ತವಾಗಿದೆ.ಕಾಲೇಜಿಗೆ ಹೋಗದಂತೆ ತಡೆ ಒಡ್ಡಿದ್ದಾರೆ.ಆದ್ರೆ ಮೊಬೈಲ್ ನಲ್ಲೇ ಇವರ ಪ್ರೇಮಕತೆ ಮುಂದುವರೆದಿದೆ.ಡಿ.26 ರಂದು ಸರ್ಟಿಫಿಕೇಟ್ ತರುವುದಾಗಿ ತಿಳಿಸಿ ಮನೆ ಬಿಟ್ಟ ಪೂರ್ಣಿಮ ಹಿಂದಿರುಗಿಲ್ಲ.ಮೊಬೈಲ್ ನಲ್ಲಿ ಮದುವೆ ಆಗಿರುವುದಾಗಿ ಮೆಸೇಜ್ ಹಾಕಿದ್ದಾಳೆ.ನಮ್ಮಿಬ್ಬರಿಗೂ ತೊಂದರೆ ನೀಡಬಾರದೆಂಬ ಉದ್ದೇಶದಿಂದ ರಕ್ಷಣೆಗಾಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದಾಗಿ ತಿಳಿಸಿದ್ದಾಳೆ.ಮಕ್ಕಳಿಗೆ ಪಾಠ ಹೇಳಿಕೊಟ್ಟು ಬುದ್ದಿ ಕಲಿಸಬೇಕಿದ್ದ ಶಿಕ್ಷಕರೇ ಹಾದಿ ತಪ್ಪಿದ್ದಾರೆ.

ಬೀದಿಬದಿ ಸೊಪ್ಪುಮಾರಿ 2 ಲಕ್ಷ ಸಾಲ ಮಾಡಿ ಕಾಲೇಜ್ ಗೆ ಸೇರಿಸಿದ ಮಗಳು ಮಾಡಿದ ಕೆಲಸಕ್ಕೆ ಹೆತ್ತವರು ಶಾಕ್ ಆಗಿದ್ದಾರೆ.ಪಾಠ ಹೇಳಿಕೊಡಬೇಕಾದ ಗುರುವಿನ ಕೆಲಸ ಇದೇನಾ ಎಂದು ತಾಯಿ ಮಹದೇವಮ್ಮ ಹಿಡಿ ಶಾಪ ಹಾಕುತ್ತಿದ್ದಾರೆ.ಹಾಸಿಗೆ ಹಿಡಿದ ತಂದೆ ಸಜ್ಜೇಗೌಡ ಎರಡು ಲಕ್ಷ ಸಾಲ ಮಾಡಿ ಓದಿಸಿ ಮುಂದಿನ ದಿನಗಳಲ್ಲಿ ನಮ್ಮ ನೆರವಿಗೆ ಬರುತ್ತಾಳೆ ಎಂದುಕೊಂಡ್ರೆ ಹೀಗಾ ಮಾಡೋದು ಎಂದು ನೊಂದಿದ್ದಾರೆ.ಒಟ್ಟಾರೆ.ಪೂರ್ಣಿಮಾ ಕೊಟ್ಟ ಶಾಕ್ ಸಜ್ಜೇಗೌಡ ಕುಟುಂಬದಲ್ಲಿ ಬಿರುಗಾಳಿ ಬೀಸಿದಂತಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *