ಆರೋಪಿಯನ್ನ ಅರೆಸ್ಟ್ ಮಾಡಲು ತೆರಳಿದ ಪೊಲೀಸರಿಗೆ ಪ್ರತಿರೋಧ…ದಲಿತ ಸಂಘಟನೆ ಮುಖಂಡನ ವಿರುದ್ದ ಹೆಚ್.ಡಿ.ಕೋಟೆ ಇನ್ಸ್ಪೆಕ್ಟರ್ ರಿಂದ ದೂರು ದಾಖಲು…

ಆರೋಪಿಯನ್ನ ಅರೆಸ್ಟ್ ಮಾಡಲು ತೆರಳಿದ ಪೊಲೀಸರಿಗೆ ಪ್ರತಿರೋಧ…ದಲಿತ ಸಂಘಟನೆ ಮುಖಂಡನ ವಿರುದ್ದ ಹೆಚ್.ಡಿ.ಕೋಟೆ ಇನ್ಸ್ಪೆಕ್ಟರ್ ರಿಂದ ದೂರು ದಾಖಲು…

ಟಿ.ನರಸೀಪುರ,ಡಿ31,Tv10 ಕನ್ನಡ

ಆರೋಪಿಯೊಬ್ಬನನ್ನ ಅರೆಸ್ಟ್ ಮಾಡಲು ಬಂದ ಹೆಚ್.ಡಿ.ಕೋಟೆ ಪೊಲೀಸರ ವಿರುದ್ದ ತಿರುಗಿಬಿದ್ದ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.ಈ ಸಂಭಂಧ ಹೆಚ್.ಡಿ.ಕೋಟೆ ಠಾಣೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ರವರು ದಲಿತ ಸಂಘಟನೆ ಮುಖಂಡ ಸೋಮಣ್ಣ ಹಾಗೂ ಇತರರ ವಿರುದ್ದ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಭೂಮಿ ವಿವಾದ ಹಿನ್ನಲೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಜಮೀನು ಮಾಲೀಕ ಹಾಗೂ ಕುಟುಂಬದ ಮೇಲೆ ಹಲ್ಲೆ ನಡೆದಿತ್ತು.ದಲಿತ ಸಂಘಟನೆ ಮುಖಂಡ ಸಣ್ಣಕುಮಾರ ಹಾಗೂ ಇತರರ ಮೇಲೆ ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣ ನಡೆದು ಹಲವು ದಿನಗಳಾದರೂ ಆರೋಪಿಗಳನ್ನ ಪೊಲೀಸರ ಬಂಧಿಸಿರಲಿಲ್ಲ.ಈ ಸಂಭಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯ ಬಳಿ ಹಲ್ಲೆಗೊಳಗಾದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಒತ್ತಡ ಹೇರಿದ್ದರು.ಆರೋಪಿ ಸಣ್ಣಕುಮಾರ ಟಿ.ನರಸೀಪುರ ತಾಲೂಕು ಬನ್ನಳ್ಳಿಹುಂಡಿಯ ದಲಿತ ಸಂಘಟನೆಯ ಮುಖಂಡ ಸೋಮಣ್ಣ ಎಂಬುವರ ಮನೆಯಲ್ಲಿ ಇರುವ ಬಗ್ಗೆ ಹೆಚ್.ಡಿ.ಕೋಟೆ ಠಾಣೆ ಪೊಲೀಸರಿಗೆ ಬಂದಿತ್ತು.ಈ ಹಿನ್ನಲೆ ನಿನ್ನೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ಹಾಗೂ ಇತರರು ಸೋಮಣ್ಣ ಮನೆಗೆ ತೆರಳಿದಾಗ ಸಹಕರಿಸದೆ ಪ್ರತಿರೋಧ ಮಾಡಿದ್ದರು.ಹೀಗಾಗಿ ಪೊಲೀಸರು ಬರಿಗೈಲಿ ಹಿಂದಿರುಗಬೇಕಾಯಿತು.ಸಧ್ಯ ಪೊಲೀಸರ ಕರ್ತವ್ಯಕ್ಕೆ ಸಹಕರಿಸದ ಹಿನ್ನಲೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ರವರು ಸೋಮಣ್ಣ ಹಾಗೂ ಇತರರ ವಿರುದ್ದ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *