ಆರೋಪಿಯನ್ನ ಅರೆಸ್ಟ್ ಮಾಡಲು ತೆರಳಿದ ಪೊಲೀಸರಿಗೆ ಪ್ರತಿರೋಧ…ದಲಿತ ಸಂಘಟನೆ ಮುಖಂಡನ ವಿರುದ್ದ ಹೆಚ್.ಡಿ.ಕೋಟೆ ಇನ್ಸ್ಪೆಕ್ಟರ್ ರಿಂದ ದೂರು ದಾಖಲು…

ಆರೋಪಿಯನ್ನ ಅರೆಸ್ಟ್ ಮಾಡಲು ತೆರಳಿದ ಪೊಲೀಸರಿಗೆ ಪ್ರತಿರೋಧ…ದಲಿತ ಸಂಘಟನೆ ಮುಖಂಡನ ವಿರುದ್ದ ಹೆಚ್.ಡಿ.ಕೋಟೆ ಇನ್ಸ್ಪೆಕ್ಟರ್ ರಿಂದ ದೂರು ದಾಖಲು…

ಟಿ.ನರಸೀಪುರ,ಡಿ31,Tv10 ಕನ್ನಡ

ಆರೋಪಿಯೊಬ್ಬನನ್ನ ಅರೆಸ್ಟ್ ಮಾಡಲು ಬಂದ ಹೆಚ್.ಡಿ.ಕೋಟೆ ಪೊಲೀಸರ ವಿರುದ್ದ ತಿರುಗಿಬಿದ್ದ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.ಈ ಸಂಭಂಧ ಹೆಚ್.ಡಿ.ಕೋಟೆ ಠಾಣೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ರವರು ದಲಿತ ಸಂಘಟನೆ ಮುಖಂಡ ಸೋಮಣ್ಣ ಹಾಗೂ ಇತರರ ವಿರುದ್ದ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಭೂಮಿ ವಿವಾದ ಹಿನ್ನಲೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಜಮೀನು ಮಾಲೀಕ ಹಾಗೂ ಕುಟುಂಬದ ಮೇಲೆ ಹಲ್ಲೆ ನಡೆದಿತ್ತು.ದಲಿತ ಸಂಘಟನೆ ಮುಖಂಡ ಸಣ್ಣಕುಮಾರ ಹಾಗೂ ಇತರರ ಮೇಲೆ ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣ ನಡೆದು ಹಲವು ದಿನಗಳಾದರೂ ಆರೋಪಿಗಳನ್ನ ಪೊಲೀಸರ ಬಂಧಿಸಿರಲಿಲ್ಲ.ಈ ಸಂಭಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯ ಬಳಿ ಹಲ್ಲೆಗೊಳಗಾದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಒತ್ತಡ ಹೇರಿದ್ದರು.ಆರೋಪಿ ಸಣ್ಣಕುಮಾರ ಟಿ.ನರಸೀಪುರ ತಾಲೂಕು ಬನ್ನಳ್ಳಿಹುಂಡಿಯ ದಲಿತ ಸಂಘಟನೆಯ ಮುಖಂಡ ಸೋಮಣ್ಣ ಎಂಬುವರ ಮನೆಯಲ್ಲಿ ಇರುವ ಬಗ್ಗೆ ಹೆಚ್.ಡಿ.ಕೋಟೆ ಠಾಣೆ ಪೊಲೀಸರಿಗೆ ಬಂದಿತ್ತು.ಈ ಹಿನ್ನಲೆ ನಿನ್ನೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ಹಾಗೂ ಇತರರು ಸೋಮಣ್ಣ ಮನೆಗೆ ತೆರಳಿದಾಗ ಸಹಕರಿಸದೆ ಪ್ರತಿರೋಧ ಮಾಡಿದ್ದರು.ಹೀಗಾಗಿ ಪೊಲೀಸರು ಬರಿಗೈಲಿ ಹಿಂದಿರುಗಬೇಕಾಯಿತು.ಸಧ್ಯ ಪೊಲೀಸರ ಕರ್ತವ್ಯಕ್ಕೆ ಸಹಕರಿಸದ ಹಿನ್ನಲೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ರವರು ಸೋಮಣ್ಣ ಹಾಗೂ ಇತರರ ವಿರುದ್ದ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *