ಆರೋಪಿಯನ್ನ ಅರೆಸ್ಟ್ ಮಾಡಲು ತೆರಳಿದ ಪೊಲೀಸರಿಗೆ ಪ್ರತಿರೋಧ…ದಲಿತ ಸಂಘಟನೆ ಮುಖಂಡನ ವಿರುದ್ದ ಹೆಚ್.ಡಿ.ಕೋಟೆ ಇನ್ಸ್ಪೆಕ್ಟರ್ ರಿಂದ ದೂರು ದಾಖಲು…

ಆರೋಪಿಯನ್ನ ಅರೆಸ್ಟ್ ಮಾಡಲು ತೆರಳಿದ ಪೊಲೀಸರಿಗೆ ಪ್ರತಿರೋಧ…ದಲಿತ ಸಂಘಟನೆ ಮುಖಂಡನ ವಿರುದ್ದ ಹೆಚ್.ಡಿ.ಕೋಟೆ ಇನ್ಸ್ಪೆಕ್ಟರ್ ರಿಂದ ದೂರು ದಾಖಲು…

ಟಿ.ನರಸೀಪುರ,ಡಿ31,Tv10 ಕನ್ನಡ

ಆರೋಪಿಯೊಬ್ಬನನ್ನ ಅರೆಸ್ಟ್ ಮಾಡಲು ಬಂದ ಹೆಚ್.ಡಿ.ಕೋಟೆ ಪೊಲೀಸರ ವಿರುದ್ದ ತಿರುಗಿಬಿದ್ದ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.ಈ ಸಂಭಂಧ ಹೆಚ್.ಡಿ.ಕೋಟೆ ಠಾಣೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ರವರು ದಲಿತ ಸಂಘಟನೆ ಮುಖಂಡ ಸೋಮಣ್ಣ ಹಾಗೂ ಇತರರ ವಿರುದ್ದ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಭೂಮಿ ವಿವಾದ ಹಿನ್ನಲೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಜಮೀನು ಮಾಲೀಕ ಹಾಗೂ ಕುಟುಂಬದ ಮೇಲೆ ಹಲ್ಲೆ ನಡೆದಿತ್ತು.ದಲಿತ ಸಂಘಟನೆ ಮುಖಂಡ ಸಣ್ಣಕುಮಾರ ಹಾಗೂ ಇತರರ ಮೇಲೆ ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣ ನಡೆದು ಹಲವು ದಿನಗಳಾದರೂ ಆರೋಪಿಗಳನ್ನ ಪೊಲೀಸರ ಬಂಧಿಸಿರಲಿಲ್ಲ.ಈ ಸಂಭಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯ ಬಳಿ ಹಲ್ಲೆಗೊಳಗಾದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಒತ್ತಡ ಹೇರಿದ್ದರು.ಆರೋಪಿ ಸಣ್ಣಕುಮಾರ ಟಿ.ನರಸೀಪುರ ತಾಲೂಕು ಬನ್ನಳ್ಳಿಹುಂಡಿಯ ದಲಿತ ಸಂಘಟನೆಯ ಮುಖಂಡ ಸೋಮಣ್ಣ ಎಂಬುವರ ಮನೆಯಲ್ಲಿ ಇರುವ ಬಗ್ಗೆ ಹೆಚ್.ಡಿ.ಕೋಟೆ ಠಾಣೆ ಪೊಲೀಸರಿಗೆ ಬಂದಿತ್ತು.ಈ ಹಿನ್ನಲೆ ನಿನ್ನೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ಹಾಗೂ ಇತರರು ಸೋಮಣ್ಣ ಮನೆಗೆ ತೆರಳಿದಾಗ ಸಹಕರಿಸದೆ ಪ್ರತಿರೋಧ ಮಾಡಿದ್ದರು.ಹೀಗಾಗಿ ಪೊಲೀಸರು ಬರಿಗೈಲಿ ಹಿಂದಿರುಗಬೇಕಾಯಿತು.ಸಧ್ಯ ಪೊಲೀಸರ ಕರ್ತವ್ಯಕ್ಕೆ ಸಹಕರಿಸದ ಹಿನ್ನಲೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ರವರು ಸೋಮಣ್ಣ ಹಾಗೂ ಇತರರ ವಿರುದ್ದ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *