ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು…ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ…ಆತ್ಮಹತ್ಯೆಯೋ…ಆಕಸ್ಮಿಕವೋ…?

ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು…ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ…ಆತ್ಮಹತ್ಯೆಯೋ…ಆಕಸ್ಮಿಕವೋ…?

ಚಾಮರಾಜನಗರ,ಜ2,Tv10 ಕನ್ನಡ

ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ವಿಧ್ಯಾರ್ಥಿನಿಯರ ವಸತಿ ನಿಲಯದ ಕಟ್ಟಡದಿಂದ ವಿಧ್ಯಾರ್ಥಿಯೋರ್ವ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜನಗರ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಮಣಿತ್(17) ಮೃತ ವಿಧ್ಯಾರ್ಥಿ.ಎರಡನೇ ಮಹಡಿಯ ಕಿಟಕಿ ಬಳಿಯಿಂದ ಮಧ್ಯರಾತ್ರಿ 2 ಗಂಟೆ ವೇಳೆ ಬಿದ್ದು ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದ ಮಣಿತ್ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.ಮಧ್ಯೆ ರಾತ್ರಿ 2 ಗಂಟೆಯಲ್ಲಿ ಬಿದ್ದ ಮಣಿತ್ ನನ್ನು ಬೆಳಿಗ್ಗೆ 8 ಗಂಟೆಯಲ್ಲಿ ಸಹ ವಿಧ್ಯಾರ್ಥಿಗಳು ಗಮನಿಸಿ ವಸತಿ ಶಾಲೆಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ.ಕೂಡಲೇ ಗಾಯಗೊಂಡು ನರಳುತ್ತಿದ್ದ ಮಣಿತ್ ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಒಂದೇ ಆವರಣದಲ್ಲಿ ವಿಧ್ಯಾರ್ಥಿನಿಯರ ಹಾಗೂ ವಿಧ್ಯಾರ್ಥಿಗಳ ಪದವಿ ಪೂರ್ವ ಕಾಲೇಜಿನ ಪ್ರತ್ಯೇಕ ವಸತಿ ನಿಲಯಗಳಿವೆ.ವಿಧ್ಯಾರ್ಥಿನಿಯರ ವಸತಿ ನಿಲಯಕ್ಕೆ ಮಣಿತ್ ಹೋದ ಉದ್ದೇಶವೇನು ಗೊತ್ತಿಲ್ಲ,ವಿಧ್ಯಾರ್ಥಿನಿಯೋರ್ವಳ ಕೊಠಡಿಯ ಕಿಟಕಿ ಬಳಿಯಿಂದ ಮಣಿತ್ ಬಿದ್ದಿದ್ದಾನೆ.ಮಧ್ಯರಾತ್ರಿಯಲ್ಲಿ ಮಣಿತ್ ಗೆ ವಿಧ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ಕೆಲಸವೇನಿತ್ತು..? ಮಧ್ಯರಾತ್ರಿ ವಿಧ್ಯಾರ್ಥಿನಿಯರ ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿದ್ದು ಹೇಗೆ..? ವಾಚ್ ಮೆನ್ ಗಳು ಗಮನಿಸಲಿಲ್ಲವೇ…?ಪ್ರಿನ್ಸಿಪಾಲ್ ಮುನ್ನೆಚ್ಚರಿಕೆ ತೆಗೆದುಕೊಂಡಿರಲಿಲ್ಲವೇ…? ಯಾರು ಬೇಕಾದ್ರೂ ವಿಧ್ಯಾರ್ಥಿನಿಯರ ಹಾಸ್ಟೆಲ್ ಗೆ ಮಧ್ಯರಾತ್ರಿ ಪ್ರವೇಶಿಸಬಹುದೇ..?ಹಾಗಿದ್ದಲ್ಲಿ ಇಲ್ಲಿ ತಂಗಿರುವ ವಿಧ್ಯಾರ್ಥಿಗಳ ರಕ್ಷಣೆ ಹೇಗೆ..? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿಲ್ಲ.ಮಧ್ಯರಾತ್ರಿ ಬಿದ್ದು ನರಳಾಡುತ್ತಿದ್ದರೂ ಯಾರ ಗಮನಕ್ಕೂ ಬಂದಿಲ್ಲವೆಂದರೆ ಅಲ್ಲಿನ ವ್ಯವಸ್ಥೆ ಹೇಗಿದೆ ಎಂಬ ಅನುಮಾನಗಳು ಕಾಡುತ್ತಿವೆ.ಎರಡನೇ ಮಹಡಿ ಏರಿ ವಿಧ್ಯಾರ್ಥಿನಿ ಕೊಠಡಿ ಬಳಿ ತಲುಪಿದ ಕಾರಣಾವಾದ್ರೂ ಏನು…?ವಿಧ್ಯಾರ್ಥಿನಿಯರನ್ನ ಮಧ್ಯರಾತ್ರಿ ನೋಡುವ ಕೆಟ್ಟ ಚಟವೇ…? ಅಥವಾ ಪ್ರೇಮ ಪ್ರಸಂಗವೇ…? ತನ್ನಿಷ್ಟದಂತೆ ನಡೆಯಲಿಲ್ಲವೆಂದು ಬಿದ್ದು ಆತ್ಮಹತ್ಯೆ ಮಾಡಿಕೊಂಡನೇ..? ಅಥವಾ ಆಕಸ್ಮಿಕವಾಗಿ ಜಾರಿ ಬಿದ್ದನೇ…? ಇವೆಲ್ಲಾ ಪ್ರಶ್ನೆಗಳಿಗೆ ಉತ್ತರ ದೊರೆಯಬೇಕಿದೆ.

ಸಂಭಂಧ ಪಟ್ಟ ಇಲಾಖೆ ಅಧಿಕಾರಿಗಳು ಘಟನೆ ಬಗ್ಗೆ ಕೂಲಂಕುಷ ತೆನಿಖೆ ನಡೆಸಬೇಕಿದೆ.ಬಡ ವಿಧ್ಯಾರ್ಥಿಗಳು ಒಳ್ಳೆಯ ಭವಿಷ್ಯದ ದೃಷ್ಟಿಯಿಂದ ಇಲ್ಲಿ ಪ್ರವೇಶ ಪಡೆಯುತ್ತಾರೆ.ಅವರ ರಕ್ಷಣೆ ಹೇಗೆ ಎಂಬ ಪ್ರಶ್ನೆಯೂ ಉದ್ಭವವಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *