ನ್ಯೂ ಇಯರ್ ಸೆಲೆಬ್ರೇಷನ್ ಎಫೆಕ್ಟ್…ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿ ಕೊಲೆ…ಕುಡಿಯಲು ಹಣ ನೀಡದ ಹಿನ್ನಲೆ ಕೃತ್ಯ…

ನ್ಯೂ ಇಯರ್ ಸೆಲೆಬ್ರೇಷನ್ ಎಫೆಕ್ಟ್…ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿ ಕೊಲೆ…ಕುಡಿಯಲು ಹಣ ನೀಡದ ಹಿನ್ನಲೆ ಕೃತ್ಯ…

ನಂಜನಗೂಡು,ಜ2,Tv10 ಕನ್ನಡ

ಹೊಸವರ್ಷಾಚರಣೆ ಆಚರಿಸುವ ಮತ್ತಿನಲ್ಲಿ ಕುಡಿಯಲು ಹಣ ನೀಡದ ಹಿನ್ನಲೆ ವ್ಯಕ್ತಿಯೊಬ್ಬರನ್ನ ನಡು ರಸ್ತೆಯಲ್ಲಿ ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಂಜನಗೂಡಿನ ಸರಸ್ವತಿ ಕಾಲೋನಿಯಲ್ಲಿ ನಡೆದಿದೆ.ಮಹದೇವನಗರದ ನಿವಾಸಿ ರಫೀಕ್(40) ಮೃತ ದುರ್ದೈವಿ.ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿದ ಸಲೀಂ ಹಾಗೂ ಈತನ ಸ್ನೇಹಿತ ಪರಾರಿಯಾಗಿದ್ದಾರೆ.

ಹೊಸವರ್ಷದ ಮೊದಲ ದಿನ ರಫೀಕ್ ರವರು ಸರಸ್ವತಿ ಕಾಲೋನಿಯಲ್ಲಿ ತಮ್ಮ ಮನೆಗೆ ತಡರಾತ್ರಿಯಲ್ಲಿ ನಡೆದು ಹೋಗುತ್ತಿದ್ದಾಗ.ನೀಲಕಂಠನಗರದ ನಿವಾಸಿ ಸಲೀಂ ತನ್ನ ಸ್ನೇಹಿತನ ಜೊತೆ ಬಂದು ಕುಡಿಯಲು ಹಣ ಕೊಡುವಂತೆ ರಫೀಕ್ ಗೆ ಕೇಳಿದ್ದಾನೆ.ಹಣ ಕೊಡಲು ರಫೀಕ್ ನಿರಾಕರಿಸಿದ್ದಾರೆ.ಈ ವೇಳೆ ಸಲೀಂ ಹಾಗೂ ಸ್ನೇಹಿತ ಬಿಯರ್ ಬಾಟೆಲ್ ನಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡು ಬಿದ್ದಿದ್ದ ರಫೀಕ್ ರನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ರಫೀಕ್ ಇಂದು ಮೃತಪಟ್ಟಿದ್ದಾರೆ.ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *