ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಸಿಕ್ಕಿಬಿದ್ದ ಯುವಕ…ಕಂಬಕ್ಕೆ ಕಟ್ಟಿಹಾಕಿ ಗೂಸಾ…

ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಸಿಕ್ಕಿಬಿದ್ದ ಯುವಕ…ಕಂಬಕ್ಕೆ ಕಟ್ಟಿಹಾಕಿ ಗೂಸಾ…

ನಂಜನಗೂಡು,ಜ3,Tv10 ಕನ್ನಡ

ಪತಿಯನ್ನ ಕಳೆದುಕೊಂಡ ವಿಧವೆ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆ ನಂಜನಗೂಡು ತಾಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹರ್ಷ ಎಂಬಾತನೇ ಕಳ್ಳತನಕ್ಕೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ ಯುವಕ.ಸಿಕ್ಕಿಬಿದ್ದ ಯುವಕನನ್ನ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ.

ಬೊಕ್ಕಹಳ್ಳಿ ಗ್ರಾಮದ ಮಂಜುಳ ನಾಲ್ಕು ತಿಂಗಳ ಹಿಂದೆ ಪತಿ ಶಿವಕುಮಾರ್ ರನ್ನ ಕಳೆದುಕೊಂಡಿದ್ದಾರೆ.ಜೀವನೋಪಾಯಕ್ಕಾಗಿ ಮೈಸೂರಿನ ಬಿಸಿಎಂ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಾರೆ.ಇವರಿಗೆ ಇದ್ದ ಒಂದು ಎಕ್ರೆ ಜಮೀನನ್ನ ಭೋಗ್ಯಕ್ಕೆ ಹಾಕಿದ ಪರಿಣಾಮ ಮನೆಯಲ್ಲಿ 3 ಲಕ್ಷ ನಗದು ಇಟ್ಟುಕೊಂಡಿದ್ದಾರೆ.ಈ ಮಾಹಿತಿ ಅರಿತಿದ್ದ ಹರ್ಷ ಜನವರಿ 1 ರ ಮಧ್ಯ ರಾತ್ರಿ ಮನೆಗೆ ನುಗ್ಗಿದ್ದಾನೆ.ಶಬ್ದವಾದ ಹಿನ್ನಲೆ ಮಂಗಳ ಎಚ್ಚರಗೊಂಡು ಪರಿಶೀಲಿಸಿದಾಗ ಅತ್ತೆ ಚಿನ್ನಮ್ಮ ಮಲಗಿದ್ದ ಮಂಚದ ಕೆಳಗೆ ಹರ್ಷ ಅವಿತುಕೊಂಡಿರುವುದು ಗೊತ್ತಾಗಿದೆ.ಯುವಕನನ್ನ ಹಿಡಿದಾಗ ಮಂಗಳ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ.ಆಕೆಯ ಅಂಗಾಂಗಗಳನ್ನ ಮುಟ್ಟಿ ಪರಾರಿಯಾಗಿದ್ದಾನೆ.ಈ ವಿಚಾರ ಗ್ರಾಮಸ್ಥರಿಗೆ ತಿಳಿಸಿದಾಗ ಹರ್ಷನನ್ನ ಪತ್ತೆ ಹಚ್ಚಿ ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ.ಹಣ ಕಳ್ಳತನ ಮಾಡಲು ಮನೆಗೆ ನುಗ್ಗಿದ್ದಾಗಿ ಹರ್ಷ ಒಪ್ಪಿಕೊಂಡಿದ್ದಾನೆ.ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಹರ್ಷನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *