ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಸಿಕ್ಕಿಬಿದ್ದ ಯುವಕ…ಕಂಬಕ್ಕೆ ಕಟ್ಟಿಹಾಕಿ ಗೂಸಾ…

ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಸಿಕ್ಕಿಬಿದ್ದ ಯುವಕ…ಕಂಬಕ್ಕೆ ಕಟ್ಟಿಹಾಕಿ ಗೂಸಾ…

ನಂಜನಗೂಡು,ಜ3,Tv10 ಕನ್ನಡ

ಪತಿಯನ್ನ ಕಳೆದುಕೊಂಡ ವಿಧವೆ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆ ನಂಜನಗೂಡು ತಾಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹರ್ಷ ಎಂಬಾತನೇ ಕಳ್ಳತನಕ್ಕೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ ಯುವಕ.ಸಿಕ್ಕಿಬಿದ್ದ ಯುವಕನನ್ನ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ.

ಬೊಕ್ಕಹಳ್ಳಿ ಗ್ರಾಮದ ಮಂಜುಳ ನಾಲ್ಕು ತಿಂಗಳ ಹಿಂದೆ ಪತಿ ಶಿವಕುಮಾರ್ ರನ್ನ ಕಳೆದುಕೊಂಡಿದ್ದಾರೆ.ಜೀವನೋಪಾಯಕ್ಕಾಗಿ ಮೈಸೂರಿನ ಬಿಸಿಎಂ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಾರೆ.ಇವರಿಗೆ ಇದ್ದ ಒಂದು ಎಕ್ರೆ ಜಮೀನನ್ನ ಭೋಗ್ಯಕ್ಕೆ ಹಾಕಿದ ಪರಿಣಾಮ ಮನೆಯಲ್ಲಿ 3 ಲಕ್ಷ ನಗದು ಇಟ್ಟುಕೊಂಡಿದ್ದಾರೆ.ಈ ಮಾಹಿತಿ ಅರಿತಿದ್ದ ಹರ್ಷ ಜನವರಿ 1 ರ ಮಧ್ಯ ರಾತ್ರಿ ಮನೆಗೆ ನುಗ್ಗಿದ್ದಾನೆ.ಶಬ್ದವಾದ ಹಿನ್ನಲೆ ಮಂಗಳ ಎಚ್ಚರಗೊಂಡು ಪರಿಶೀಲಿಸಿದಾಗ ಅತ್ತೆ ಚಿನ್ನಮ್ಮ ಮಲಗಿದ್ದ ಮಂಚದ ಕೆಳಗೆ ಹರ್ಷ ಅವಿತುಕೊಂಡಿರುವುದು ಗೊತ್ತಾಗಿದೆ.ಯುವಕನನ್ನ ಹಿಡಿದಾಗ ಮಂಗಳ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ.ಆಕೆಯ ಅಂಗಾಂಗಗಳನ್ನ ಮುಟ್ಟಿ ಪರಾರಿಯಾಗಿದ್ದಾನೆ.ಈ ವಿಚಾರ ಗ್ರಾಮಸ್ಥರಿಗೆ ತಿಳಿಸಿದಾಗ ಹರ್ಷನನ್ನ ಪತ್ತೆ ಹಚ್ಚಿ ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ.ಹಣ ಕಳ್ಳತನ ಮಾಡಲು ಮನೆಗೆ ನುಗ್ಗಿದ್ದಾಗಿ ಹರ್ಷ ಒಪ್ಪಿಕೊಂಡಿದ್ದಾನೆ.ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಹರ್ಷನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *