ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಸಿಕ್ಕಿಬಿದ್ದ ಯುವಕ…ಕಂಬಕ್ಕೆ ಕಟ್ಟಿಹಾಕಿ ಗೂಸಾ…

ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಸಿಕ್ಕಿಬಿದ್ದ ಯುವಕ…ಕಂಬಕ್ಕೆ ಕಟ್ಟಿಹಾಕಿ ಗೂಸಾ…

ನಂಜನಗೂಡು,ಜ3,Tv10 ಕನ್ನಡ

ಪತಿಯನ್ನ ಕಳೆದುಕೊಂಡ ವಿಧವೆ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆ ನಂಜನಗೂಡು ತಾಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹರ್ಷ ಎಂಬಾತನೇ ಕಳ್ಳತನಕ್ಕೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ ಯುವಕ.ಸಿಕ್ಕಿಬಿದ್ದ ಯುವಕನನ್ನ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ.

ಬೊಕ್ಕಹಳ್ಳಿ ಗ್ರಾಮದ ಮಂಜುಳ ನಾಲ್ಕು ತಿಂಗಳ ಹಿಂದೆ ಪತಿ ಶಿವಕುಮಾರ್ ರನ್ನ ಕಳೆದುಕೊಂಡಿದ್ದಾರೆ.ಜೀವನೋಪಾಯಕ್ಕಾಗಿ ಮೈಸೂರಿನ ಬಿಸಿಎಂ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಾರೆ.ಇವರಿಗೆ ಇದ್ದ ಒಂದು ಎಕ್ರೆ ಜಮೀನನ್ನ ಭೋಗ್ಯಕ್ಕೆ ಹಾಕಿದ ಪರಿಣಾಮ ಮನೆಯಲ್ಲಿ 3 ಲಕ್ಷ ನಗದು ಇಟ್ಟುಕೊಂಡಿದ್ದಾರೆ.ಈ ಮಾಹಿತಿ ಅರಿತಿದ್ದ ಹರ್ಷ ಜನವರಿ 1 ರ ಮಧ್ಯ ರಾತ್ರಿ ಮನೆಗೆ ನುಗ್ಗಿದ್ದಾನೆ.ಶಬ್ದವಾದ ಹಿನ್ನಲೆ ಮಂಗಳ ಎಚ್ಚರಗೊಂಡು ಪರಿಶೀಲಿಸಿದಾಗ ಅತ್ತೆ ಚಿನ್ನಮ್ಮ ಮಲಗಿದ್ದ ಮಂಚದ ಕೆಳಗೆ ಹರ್ಷ ಅವಿತುಕೊಂಡಿರುವುದು ಗೊತ್ತಾಗಿದೆ.ಯುವಕನನ್ನ ಹಿಡಿದಾಗ ಮಂಗಳ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ.ಆಕೆಯ ಅಂಗಾಂಗಗಳನ್ನ ಮುಟ್ಟಿ ಪರಾರಿಯಾಗಿದ್ದಾನೆ.ಈ ವಿಚಾರ ಗ್ರಾಮಸ್ಥರಿಗೆ ತಿಳಿಸಿದಾಗ ಹರ್ಷನನ್ನ ಪತ್ತೆ ಹಚ್ಚಿ ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ.ಹಣ ಕಳ್ಳತನ ಮಾಡಲು ಮನೆಗೆ ನುಗ್ಗಿದ್ದಾಗಿ ಹರ್ಷ ಒಪ್ಪಿಕೊಂಡಿದ್ದಾನೆ.ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಹರ್ಷನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *