ನಿಮ್ಮ ಜಾತಿ ಇರೋದು ಒಂದೇ ಕುಟುಂಬ…ಗ್ರಾಮ ಬಿಟ್ಟು ತೊಲಗಿ…ಕುಟುಂಬವೊಂದಕ್ಕೆ ಟಾರ್ಚರ್…ಜಾಗದ ವಿಚಾರದಲ್ಲಿ ಬೆದರಿಕೆ…ಮೂವರ ವಿರುದ್ದ FIR ದಾಖಲು…

ಮೈಸೂರು,ಜ3,Tv10 ಕನ್ನಡ

ಜಾಗವೊಂದರ ವಿವಾದ ವಿಚಾರ ನ್ಯಾಯಾಲಯದಲ್ಲಿ ದಾವೆ ಇದ್ದರೂ ಜಾತಿ ಹಸರು ಪ್ರಸ್ತಾಪಿಸಿ ಗ್ರಾಮ ಖಾಲಿ ಮಾಡುವಂತೆ ಕುಟುಂಬವೊಂದಕ್ಕೆ ಬೆದರಿಕೆ ಹಾಕಿರುವ ಘಟನೆ ಸಿಎಂ ತವರು ಜಿಲ್ಲೆ ವರುಣಾ ಹೋಬಳಿಯ ಆಶ್ರಮ ಹಂಚೆ ಗುಡುಮಾದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಂಗಳಗೌರಿ(49) ಎಂಬುವರ ಕುಟುಂಬಕ್ಕೆ ಇಂತಹ ಬೆದರಿಕೆ ಬಂದಿದೆ.ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಗಮ್ಮ,ಕೋಮಲ ಹಾಗೂ ರಾಘವೇಂದ್ರ ಎಂಬುವರ ವಿರುದ್ದ FIR ದಾಖಲಾಗಿದೆ.

ಜಾಗದ ವಿಚಾರದಲ್ಲಿ ಇಬ್ಬರ ನಡುವೆ ವ್ಯಾಜ್ಯವಿದ್ದು ನ್ಯಾಯಾಲಯದಲ್ಲಿ OS -120/2023 ಪ್ರಕರಣ ದಾಖಲಾಗಿ ಇನ್ನೂ ಇತ್ಯರ್ಥವಾಗಿರುವುದಿಲ್ಲ.ಇದೇ ವಿಚಾರದಲ್ಲಿ ನಾಗಮ್ಮ ಇವರ ಮಗಳು ಕೋಮಲ ಹಾಗೂ ಮೊಮ್ಮಗ ರಾಘವೇಂದ್ರ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ.ಪತಿ ಇಲ್ಲದಿರುವ ಸಮಯದಲ್ಲಿ ಬಂದು ಹಲ್ಲೆ ಮಾಡುವುದು,ಕೊಲೆ ಬೆದರಿಕೆ ಹಾಕುವುದು ನಡೆಯುತ್ತಿದೆ.31-12-2024 ರ ಸಂಜೆ ಏಕಾ ಏಕಿ ಮೂವರು ಆರೋಪಿಗಳು ಮನೆ ಬಳಿಗೆ ಬಂದು ಕ್ಯಾತೆ ತೆಗೆದಿದ್ದಾರೆ.ನಿಮ್ಮ ಜಾತಿಯವರು ಈ ಗ್ರಾಮದಲ್ಲಿ ಒಂದೇ ಕುಟುಂಬ ನೀವು ಕೀಳು ಜಾತಿ ಎಂದು ನೆಪವೊಡ್ಡಿ ಮಂಗಳಗೌರಿ ರವರ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನ ಹರಿದುಹಾಕಿ ಕೊಲೆ ಬೆದರಿಕೆ ಹಾಕಿದ್ದಾರೆ.ಗ್ರಾಮದಿಂದ ತೊಲಗುವಂತೆ ಧಂಕಿ ಹಾಕಿದ್ದಾರೆ.ಎಲ್ಲಾ ಬೆಳವಣಿಗೆಗಳನ್ನ ಮಂಗಳಗೌರಿ ರವರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.ಗ್ರಾಮದಲ್ಲಿ ಒಂದೇ ಕುಟುಂಬ ಇರುವುದರಿಂದ ಯಾವುದೇ ಬೆಂಬಲವಿಲ್ಲ,ಭಯದಲ್ಲಿ ವಾಸವಿದ್ದೇವೆ ಆದ್ದರಿಂದ ನಮ್ಮ ಕುಟುಂಬಕ್ಕೆ ರಕ್ಷಣೆ ಕೊಡಿ ಎಂದು ಮಂಗಳಗೌರಿ ರವರು ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಜಾತ್ಯಾತೀತ ಹೆಸರಲ್ಲಿ ಅಧಿಕಾರಕ್ಕೆ ಬಂದು ಸಿಎಂ ಗದ್ದುಗೆ ಹಿಡಿದ ಸಿದ್ದರಾಮಯ್ಯ ರವರ ಸ್ವಕ್ಷೇತ್ರದಲ್ಲೇ ಜಾತಿ ವಿಚಾರದಲ್ಲಿ ಒಂದು ಕುಟುಂಬಕ್ಕೆ ತೊಂದರೆ ಕೊಡುತ್ತಿರುವುದು ವಿಪರ್ಯಾಸ.ಕೂಡಲೇ ಪೊಲೀಸರು ಈ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *