ನಿಮ್ಮ ಜಾತಿ ಇರೋದು ಒಂದೇ ಕುಟುಂಬ…ಗ್ರಾಮ ಬಿಟ್ಟು ತೊಲಗಿ…ಕುಟುಂಬವೊಂದಕ್ಕೆ ಟಾರ್ಚರ್…ಜಾಗದ ವಿಚಾರದಲ್ಲಿ ಬೆದರಿಕೆ…ಮೂವರ ವಿರುದ್ದ FIR ದಾಖಲು…

ಮೈಸೂರು,ಜ3,Tv10 ಕನ್ನಡ

ಜಾಗವೊಂದರ ವಿವಾದ ವಿಚಾರ ನ್ಯಾಯಾಲಯದಲ್ಲಿ ದಾವೆ ಇದ್ದರೂ ಜಾತಿ ಹಸರು ಪ್ರಸ್ತಾಪಿಸಿ ಗ್ರಾಮ ಖಾಲಿ ಮಾಡುವಂತೆ ಕುಟುಂಬವೊಂದಕ್ಕೆ ಬೆದರಿಕೆ ಹಾಕಿರುವ ಘಟನೆ ಸಿಎಂ ತವರು ಜಿಲ್ಲೆ ವರುಣಾ ಹೋಬಳಿಯ ಆಶ್ರಮ ಹಂಚೆ ಗುಡುಮಾದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಂಗಳಗೌರಿ(49) ಎಂಬುವರ ಕುಟುಂಬಕ್ಕೆ ಇಂತಹ ಬೆದರಿಕೆ ಬಂದಿದೆ.ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಗಮ್ಮ,ಕೋಮಲ ಹಾಗೂ ರಾಘವೇಂದ್ರ ಎಂಬುವರ ವಿರುದ್ದ FIR ದಾಖಲಾಗಿದೆ.

ಜಾಗದ ವಿಚಾರದಲ್ಲಿ ಇಬ್ಬರ ನಡುವೆ ವ್ಯಾಜ್ಯವಿದ್ದು ನ್ಯಾಯಾಲಯದಲ್ಲಿ OS -120/2023 ಪ್ರಕರಣ ದಾಖಲಾಗಿ ಇನ್ನೂ ಇತ್ಯರ್ಥವಾಗಿರುವುದಿಲ್ಲ.ಇದೇ ವಿಚಾರದಲ್ಲಿ ನಾಗಮ್ಮ ಇವರ ಮಗಳು ಕೋಮಲ ಹಾಗೂ ಮೊಮ್ಮಗ ರಾಘವೇಂದ್ರ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ.ಪತಿ ಇಲ್ಲದಿರುವ ಸಮಯದಲ್ಲಿ ಬಂದು ಹಲ್ಲೆ ಮಾಡುವುದು,ಕೊಲೆ ಬೆದರಿಕೆ ಹಾಕುವುದು ನಡೆಯುತ್ತಿದೆ.31-12-2024 ರ ಸಂಜೆ ಏಕಾ ಏಕಿ ಮೂವರು ಆರೋಪಿಗಳು ಮನೆ ಬಳಿಗೆ ಬಂದು ಕ್ಯಾತೆ ತೆಗೆದಿದ್ದಾರೆ.ನಿಮ್ಮ ಜಾತಿಯವರು ಈ ಗ್ರಾಮದಲ್ಲಿ ಒಂದೇ ಕುಟುಂಬ ನೀವು ಕೀಳು ಜಾತಿ ಎಂದು ನೆಪವೊಡ್ಡಿ ಮಂಗಳಗೌರಿ ರವರ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನ ಹರಿದುಹಾಕಿ ಕೊಲೆ ಬೆದರಿಕೆ ಹಾಕಿದ್ದಾರೆ.ಗ್ರಾಮದಿಂದ ತೊಲಗುವಂತೆ ಧಂಕಿ ಹಾಕಿದ್ದಾರೆ.ಎಲ್ಲಾ ಬೆಳವಣಿಗೆಗಳನ್ನ ಮಂಗಳಗೌರಿ ರವರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.ಗ್ರಾಮದಲ್ಲಿ ಒಂದೇ ಕುಟುಂಬ ಇರುವುದರಿಂದ ಯಾವುದೇ ಬೆಂಬಲವಿಲ್ಲ,ಭಯದಲ್ಲಿ ವಾಸವಿದ್ದೇವೆ ಆದ್ದರಿಂದ ನಮ್ಮ ಕುಟುಂಬಕ್ಕೆ ರಕ್ಷಣೆ ಕೊಡಿ ಎಂದು ಮಂಗಳಗೌರಿ ರವರು ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಜಾತ್ಯಾತೀತ ಹೆಸರಲ್ಲಿ ಅಧಿಕಾರಕ್ಕೆ ಬಂದು ಸಿಎಂ ಗದ್ದುಗೆ ಹಿಡಿದ ಸಿದ್ದರಾಮಯ್ಯ ರವರ ಸ್ವಕ್ಷೇತ್ರದಲ್ಲೇ ಜಾತಿ ವಿಚಾರದಲ್ಲಿ ಒಂದು ಕುಟುಂಬಕ್ಕೆ ತೊಂದರೆ ಕೊಡುತ್ತಿರುವುದು ವಿಪರ್ಯಾಸ.ಕೂಡಲೇ ಪೊಲೀಸರು ಈ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *