ಕೋಟ್ಯಾಂತರ ಬೆಲೆ ಬಾಳುವ ಜಮೀನು ಜಿಲ್ಲಾಡಳಿತ ವಶಕ್ಕೆ…ತಹಸೀಲ್ದಾರ್ KM ಮಹೇಶ್ ಕುಮಾರ್ ನೇತೃತ್ವದಲ್ಲಿ ಕ್ರಮ…

ಕೋಟ್ಯಾಂತರ ಬೆಲೆ ಬಾಳುವ ಜಮೀನು ಜಿಲ್ಲಾಡಳಿತ ವಶಕ್ಕೆ…ತಹಸೀಲ್ದಾರ್ KM ಮಹೇಶ್ ಕುಮಾರ್ ನೇತೃತ್ವದಲ್ಲಿ ಕ್ರಮ…

ಮೈಸೂರು,ಜ3,Tv10 ಕನ್ನಡ

ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸುತ್ತಿದ್ದ ಕಟ್ಟಡ ಕಾಮಗಾರಿಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು ಇಂದು ಫಲಕ ಅಳವಡಿಸುವ ಮೂಲಕ ತನ್ನ ವಶಕ್ಕೆ ಪಡೆದಿದೆ.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ರವರ ಆದೇಶದಂತೆ ತಹಸೀಲ್ದಾರ್ KM ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ಬೆಲೆ ಬಾಳುವ ಆಸ್ತಿಯನ್ನ ವಶಕ್ಕೆ ಪಡೆದಿದ್ದಾರೆ

ಮೈಸೂರು ತಾಲೂಕು ಕಸಬಾ ಹೋಬಳಿ ಹೆಬ್ಬಾಳು ಗ್ರಾಮದ ಸರ್ವೆ ನಂ.221 ರ 1.25 ಎಕ್ರೆ ಜಮೀನು ಸರ್ಕಾರಕ್ಕೆ ಸೇರಿದ ಆಸ್ತಿ.ಸದರಿ ಆಸ್ತಿಯಲ್ಲಿ ಭೂಗಳ್ಳರು ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿದ್ದ ಮಾಹಿತಿ ಅರಿತ ತಹಸೀಲ್ದಾರ್ KM ಮಹೇಶ್ ಕುಮಾರ್ ದಾಖಲೆಗಳನ್ನ ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.ವಿಜಯನಗರ ಠಾಣೆಗೆ ಪತ್ರ ಬರೆದು ನಿರ್ಮಾಣ ಕಾರ್ಯ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದರು.ಇದರಂತೆ ನಿರ್ಮಾಣ ಕಾರ್ಯಕ್ಕೆ ಬ್ರೇಕ್ ಹಾಕಲಾಗಿತ್ತು.ಇಂದು ಸದರಿ ಜಾಗದಲ್ಲಿ ಫಲಕ ಅಳವಡಿಸುವ ಮೂಲಕ ತಮ್ಮ ವಶಕ್ಕೆ ಪಡೆದಿದ್ದಾರೆ.

ವಿಶೇಷ ಜಿಲ್ಲಾಧಿಕಾರಿಗಳ ಆದೇಶ ಸಂಖ್ಯೆ ULA 1135/76-77 ದಿನಾಂಕ 5-7-85 ರಂತೆ ಸದರಿ ಜಮೀನನ್ನ ಹೆಚ್ಚುವರಿ ನಗರಾಸ್ತಿ ಎಂದು ಘೋಷಿಸಿ RTC ಯಲ್ಲಿ ‘ಸರ್ಕಾರ’ ಎಂದು ಘೋಷಿಸಿ ನಮೂದಾಗಿದೆ.ದಾಖಲೆಗಳ ಪ್ರಕಾರ ಸರ್ಕಾರಕ್ಕೆ ಸೇರಿದ ಆಸ್ತಿಯಲ್ಲಿ ಭೂಗಳ್ಳರು ಅಕ್ರಮವಾಗಿ ಕಟ್ಟಡ ನಿರ್ಮಿಸಿ ಮಾರಾಟ ಮಾಡಲು ಯತ್ನಿಸಿದ್ದಾರೆಂದು ಆರೋಪಿಸಿ ತಹಸೀಲ್ದಾರ್ KM ಮಹೇಶ್ ಕುಮಾರ್ ರವರು ಪೊಲೀಸರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರು.ನಿನ್ನೆ ಕಟ್ಟಡ ಕಾಮಗಾರಿಯನ್ನ ಸ್ಥಗಿತಗೊಳಿಸಿದ KM ಮಹೇಶ್ ಕುಮಾರ್ ಇಂದು ಸದರಿ ಜಾಗದಲ್ಲಿ ಫಲಕ ಅಳವಡಿಸಿ ಜಿಲ್ಲಾಡಳಿತದ ವಶಕ್ಕೆ ಪಡೆದಿದ್ದಾರೆ.ಶೀಘ್ರದಲ್ಲೇ ಅಕ್ರಮ ಕಟ್ಟಡವನ್ನೂ ಸಹ ತೆರುವುಗೊಳಿಸುವುದಾಗಿ ತಹಸೀಲ್ದಾರ್ ತಿಳಿಸಿದ್ದಾರೆ.

ಇಂದಿನ ಕಾರ್ಯಾಚರಣೆಯಲ್ಲಿ ಆರ್.ಐ.ಹೇಮಂತ್ ಕುಮಾರ್,ಗ್ರಾಮ ಆಡಳಿತಾಧಿಕಾರಿಗಳಾದ ಮಹೇಶ್ .ಡಿ ಹಾಗೂ ಅಜೀಮ್ ಖಾನ್ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ….

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *