ಸರ್ಕಾರಿ ಜಾಗದಲ್ಲಿ ಬೃಹತ್ ಕಟ್ಟಡ…ಪರವಾನಗಿ ನೀಡಿದ ನಗರಸಭೆ…ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ಸರ್ಕಾರಿ ಜಾಗದಲ್ಲಿ ಬೃಹತ್ ಕಟ್ಟಡ…ಪರವಾನಗಿ ನೀಡಿದ ನಗರಸಭೆ…ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ಹುಣಸೂರು,ಜ5,Tv10 ಕನ್ನಡ

ಸರ್ಕಾರದ ಜಾಗದಲ್ಲಿ ಕಟ್ಟಡ ನಿರ್ಮಿಸಲು ನಗರಸಭೆಯೇ ಪರವಾನಗಿ ನೀಡಿರುವ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ.ತಡವಾಗಿ ಜ್ಞಾನೋದಯವಾಗಿ ಪರವಾನಗಿ ರದ್ದುಪಡಿಸಲು ಮುಂದಾಗಿದೆ.ನೆಪಮಾತ್ರಕ್ಕೆ ನೋಟೀಸ್ ನೀಡಿದ ಅಧಿಕಾರಿಗಳು ಜಾಣಕುರುಡರಂತೆ ವರ್ತಿಸುತ್ತಾ ಕಣ್ಮುಚ್ಚಿ ಕುಳಿತಿದ್ದಾರೆ.ಇತ್ತ ಕಟ್ಟಡ ಕಾಮಗಾರಿ ರಾಜಾರೋಷವಾಗಿ ಸಾಗುತ್ತಿದೆ.

ಹುಣಸೂರು ತಾಲೂಕು ಕಸಬಾ ಹೋಬಳಿ,ದೊಡ್ಡಹುಣಸೂರು ಗ್ರಾಮ ಸರ್ಕಾರಿ ಸರ್ವೆ ನಂ.250 ರ 16.39 ಎಕ್ರೆ ವ್ಯಾಪ್ತಿಯಲ್ಲಿ ಬರುವ ಖಾತೆ ನಂ.185/152/1 ಹಾಗೂ 184/151/1 ರ ನಿವೇಶನಗಳಲ್ಲಿ ವಾಣಿಜ್ಯ ಹಾಗೂ ವಸತಿ ಕಟ್ಟಡಗಳನ್ನ ನಿರ್ಮಿಸಲು ಹುಣಸೂರು ನಗರಸಭೆಯಿಂದ ಪರವಾನಗಿ ನೀಡಿದ್ದಾರೆ.ಆದ್ರೆ ದಾಖಲೆಗಳನ್ನ ಪರಿಶೀಲನೆ ಮಾಡಿದಾಗ ಸದರಿ ಜಾಗದ ಆರ್.ಟಿ.ಸಿ.ಯಲ್ಲಿ ಟೌನ್ ಮುನಿಸಿಪಾಲಿಟಿ ಹುಣಸೂರು ಎಂದು ದಾಖಲಾಗಿದೆ.ಈ ಹಿನ್ನಲೆ ಪರವಾನಗಿ ನೀಡಿರುವ ಬಗ್ಗೆ ಸಾಕಷ್ಟು ತಕರಾರುಗಳು ಮತ್ತು ಆಕ್ಷೇಪಣೆಗಳು ಬಂದಿದೆ.ಹೀಗಾಗಿ ಸದರಿ ಸರ್ವೆ ನಂ.ಗೆ ಪರವಾನಗಿ ನೀಡಿರುವ ಬಗ್ಗೆ ಮೈಸೂರು ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಂದ ತೆನಿಖೆ ಮಾಡಲು ತಂಡ ರಚಿಸಲಾಗಿದೆ.ಮುಂದಿನ ಆದೇಶದ ವರೆಗೆ ಯಾವುದೇ ಪರವಾನಗಿ ನೀಡಬಾರದೆಂದು ಹಾಗೂ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಬೇಕೆಂದು ಪೌರಾಯುಕ್ತರು ನೋಟೀಸ್ ನೀಡಿ ಈಗಾಗಲೇ ನೀಡಿರುವ ಪರವಾನಗಿಯನ್ನ ಹಿಂದಕ್ಕೆ ಪಡೆದಿದ್ದಾರೆ.ನಿರ್ಮಾಣ ಕಾರ್ಯ ಸ್ಥಗಿತಗೊಳಿಸುವಂತೆ ಮೂರು ನೋಟೀಸ್ ನೀಡಲಾಗಿದೆ.ಹೀಗಿದ್ದೂ ಸರ್ಕಾರಿ ಜಾಗದಲ್ಲಿ ರಾಜಾರೋಷವಾಗಿ ನಿರ್ಮಾಣ ಕಾರ್ಯ ಮುಂದುವರೆಯುತ್ತಿದೆ.ಅಧಿಕಾರಿಗಳು ನೆಪಮಾತ್ರಕ್ಕೆ ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತಿದ್ದಾರೆ.ಮೂರು ನೋಟೀಸ್ ಜಾರಿಯಾದ್ರೂ ಕಾಮಗಾರಿ ನಡೆಯುತ್ತಲೇ ಇದೆ.

ಸರ್ಕಾರಿ ಜಾಗಕ್ಕೆ ಪರವಾನಗಿ ನೀಡಿದ್ದು ಹೇಗೆ…?ಪರವಾನಗಿ ನೀಡುವ ಮುನ್ನ ದಾಖಲೆಗಳನ್ನ ಪರಿಶೀಲಿಸಲಿಲ್ಲವೇ…?ಆರ್.ಟಿ.ಸಿ.ಯಲ್ಲಿ ಟೌನ್ ಮುನಿಸಿಪಾಲಿಟಿ ಎಂದು ದಾಖಲಾಗಿದ್ದರೂ ಪರವಾನಗಿ ನೀಡಿದವರು ಯಾರು…? ಮೂರು ನೋಟೀಸ್ ಜಾರಿ ಮಾಡಿ ಕಣ್ಮುಚ್ಚಿ ಕುಳಿತಿರುವ ಕಾರಣವಾದ್ರೂ ಏನು..? ಎಂಬ ಪ್ರಶ್ನೆಗಳಿಗೆ ಪೌರಸಯುಕ್ತರು ಉತ್ತರ ನೀಡಬೇಕಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *