ಸರ್ಕಾರಿ ಜಾಗದಲ್ಲಿ ಬೃಹತ್ ಕಟ್ಟಡ…ಪರವಾನಗಿ ನೀಡಿದ ನಗರಸಭೆ…ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ಸರ್ಕಾರಿ ಜಾಗದಲ್ಲಿ ಬೃಹತ್ ಕಟ್ಟಡ…ಪರವಾನಗಿ ನೀಡಿದ ನಗರಸಭೆ…ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ಹುಣಸೂರು,ಜ5,Tv10 ಕನ್ನಡ

ಸರ್ಕಾರದ ಜಾಗದಲ್ಲಿ ಕಟ್ಟಡ ನಿರ್ಮಿಸಲು ನಗರಸಭೆಯೇ ಪರವಾನಗಿ ನೀಡಿರುವ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ.ತಡವಾಗಿ ಜ್ಞಾನೋದಯವಾಗಿ ಪರವಾನಗಿ ರದ್ದುಪಡಿಸಲು ಮುಂದಾಗಿದೆ.ನೆಪಮಾತ್ರಕ್ಕೆ ನೋಟೀಸ್ ನೀಡಿದ ಅಧಿಕಾರಿಗಳು ಜಾಣಕುರುಡರಂತೆ ವರ್ತಿಸುತ್ತಾ ಕಣ್ಮುಚ್ಚಿ ಕುಳಿತಿದ್ದಾರೆ.ಇತ್ತ ಕಟ್ಟಡ ಕಾಮಗಾರಿ ರಾಜಾರೋಷವಾಗಿ ಸಾಗುತ್ತಿದೆ.

ಹುಣಸೂರು ತಾಲೂಕು ಕಸಬಾ ಹೋಬಳಿ,ದೊಡ್ಡಹುಣಸೂರು ಗ್ರಾಮ ಸರ್ಕಾರಿ ಸರ್ವೆ ನಂ.250 ರ 16.39 ಎಕ್ರೆ ವ್ಯಾಪ್ತಿಯಲ್ಲಿ ಬರುವ ಖಾತೆ ನಂ.185/152/1 ಹಾಗೂ 184/151/1 ರ ನಿವೇಶನಗಳಲ್ಲಿ ವಾಣಿಜ್ಯ ಹಾಗೂ ವಸತಿ ಕಟ್ಟಡಗಳನ್ನ ನಿರ್ಮಿಸಲು ಹುಣಸೂರು ನಗರಸಭೆಯಿಂದ ಪರವಾನಗಿ ನೀಡಿದ್ದಾರೆ.ಆದ್ರೆ ದಾಖಲೆಗಳನ್ನ ಪರಿಶೀಲನೆ ಮಾಡಿದಾಗ ಸದರಿ ಜಾಗದ ಆರ್.ಟಿ.ಸಿ.ಯಲ್ಲಿ ಟೌನ್ ಮುನಿಸಿಪಾಲಿಟಿ ಹುಣಸೂರು ಎಂದು ದಾಖಲಾಗಿದೆ.ಈ ಹಿನ್ನಲೆ ಪರವಾನಗಿ ನೀಡಿರುವ ಬಗ್ಗೆ ಸಾಕಷ್ಟು ತಕರಾರುಗಳು ಮತ್ತು ಆಕ್ಷೇಪಣೆಗಳು ಬಂದಿದೆ.ಹೀಗಾಗಿ ಸದರಿ ಸರ್ವೆ ನಂ.ಗೆ ಪರವಾನಗಿ ನೀಡಿರುವ ಬಗ್ಗೆ ಮೈಸೂರು ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಂದ ತೆನಿಖೆ ಮಾಡಲು ತಂಡ ರಚಿಸಲಾಗಿದೆ.ಮುಂದಿನ ಆದೇಶದ ವರೆಗೆ ಯಾವುದೇ ಪರವಾನಗಿ ನೀಡಬಾರದೆಂದು ಹಾಗೂ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಬೇಕೆಂದು ಪೌರಾಯುಕ್ತರು ನೋಟೀಸ್ ನೀಡಿ ಈಗಾಗಲೇ ನೀಡಿರುವ ಪರವಾನಗಿಯನ್ನ ಹಿಂದಕ್ಕೆ ಪಡೆದಿದ್ದಾರೆ.ನಿರ್ಮಾಣ ಕಾರ್ಯ ಸ್ಥಗಿತಗೊಳಿಸುವಂತೆ ಮೂರು ನೋಟೀಸ್ ನೀಡಲಾಗಿದೆ.ಹೀಗಿದ್ದೂ ಸರ್ಕಾರಿ ಜಾಗದಲ್ಲಿ ರಾಜಾರೋಷವಾಗಿ ನಿರ್ಮಾಣ ಕಾರ್ಯ ಮುಂದುವರೆಯುತ್ತಿದೆ.ಅಧಿಕಾರಿಗಳು ನೆಪಮಾತ್ರಕ್ಕೆ ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತಿದ್ದಾರೆ.ಮೂರು ನೋಟೀಸ್ ಜಾರಿಯಾದ್ರೂ ಕಾಮಗಾರಿ ನಡೆಯುತ್ತಲೇ ಇದೆ.

ಸರ್ಕಾರಿ ಜಾಗಕ್ಕೆ ಪರವಾನಗಿ ನೀಡಿದ್ದು ಹೇಗೆ…?ಪರವಾನಗಿ ನೀಡುವ ಮುನ್ನ ದಾಖಲೆಗಳನ್ನ ಪರಿಶೀಲಿಸಲಿಲ್ಲವೇ…?ಆರ್.ಟಿ.ಸಿ.ಯಲ್ಲಿ ಟೌನ್ ಮುನಿಸಿಪಾಲಿಟಿ ಎಂದು ದಾಖಲಾಗಿದ್ದರೂ ಪರವಾನಗಿ ನೀಡಿದವರು ಯಾರು…? ಮೂರು ನೋಟೀಸ್ ಜಾರಿ ಮಾಡಿ ಕಣ್ಮುಚ್ಚಿ ಕುಳಿತಿರುವ ಕಾರಣವಾದ್ರೂ ಏನು..? ಎಂಬ ಪ್ರಶ್ನೆಗಳಿಗೆ ಪೌರಸಯುಕ್ತರು ಉತ್ತರ ನೀಡಬೇಕಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *