ಸರ್ಕಾರಿ ಜಾಗದಲ್ಲಿ ಬೃಹತ್ ಕಟ್ಟಡ…ಪರವಾನಗಿ ನೀಡಿದ ನಗರಸಭೆ…ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ಸರ್ಕಾರಿ ಜಾಗದಲ್ಲಿ ಬೃಹತ್ ಕಟ್ಟಡ…ಪರವಾನಗಿ ನೀಡಿದ ನಗರಸಭೆ…ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ಹುಣಸೂರು,ಜ5,Tv10 ಕನ್ನಡ

ಸರ್ಕಾರದ ಜಾಗದಲ್ಲಿ ಕಟ್ಟಡ ನಿರ್ಮಿಸಲು ನಗರಸಭೆಯೇ ಪರವಾನಗಿ ನೀಡಿರುವ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ.ತಡವಾಗಿ ಜ್ಞಾನೋದಯವಾಗಿ ಪರವಾನಗಿ ರದ್ದುಪಡಿಸಲು ಮುಂದಾಗಿದೆ.ನೆಪಮಾತ್ರಕ್ಕೆ ನೋಟೀಸ್ ನೀಡಿದ ಅಧಿಕಾರಿಗಳು ಜಾಣಕುರುಡರಂತೆ ವರ್ತಿಸುತ್ತಾ ಕಣ್ಮುಚ್ಚಿ ಕುಳಿತಿದ್ದಾರೆ.ಇತ್ತ ಕಟ್ಟಡ ಕಾಮಗಾರಿ ರಾಜಾರೋಷವಾಗಿ ಸಾಗುತ್ತಿದೆ.

ಹುಣಸೂರು ತಾಲೂಕು ಕಸಬಾ ಹೋಬಳಿ,ದೊಡ್ಡಹುಣಸೂರು ಗ್ರಾಮ ಸರ್ಕಾರಿ ಸರ್ವೆ ನಂ.250 ರ 16.39 ಎಕ್ರೆ ವ್ಯಾಪ್ತಿಯಲ್ಲಿ ಬರುವ ಖಾತೆ ನಂ.185/152/1 ಹಾಗೂ 184/151/1 ರ ನಿವೇಶನಗಳಲ್ಲಿ ವಾಣಿಜ್ಯ ಹಾಗೂ ವಸತಿ ಕಟ್ಟಡಗಳನ್ನ ನಿರ್ಮಿಸಲು ಹುಣಸೂರು ನಗರಸಭೆಯಿಂದ ಪರವಾನಗಿ ನೀಡಿದ್ದಾರೆ.ಆದ್ರೆ ದಾಖಲೆಗಳನ್ನ ಪರಿಶೀಲನೆ ಮಾಡಿದಾಗ ಸದರಿ ಜಾಗದ ಆರ್.ಟಿ.ಸಿ.ಯಲ್ಲಿ ಟೌನ್ ಮುನಿಸಿಪಾಲಿಟಿ ಹುಣಸೂರು ಎಂದು ದಾಖಲಾಗಿದೆ.ಈ ಹಿನ್ನಲೆ ಪರವಾನಗಿ ನೀಡಿರುವ ಬಗ್ಗೆ ಸಾಕಷ್ಟು ತಕರಾರುಗಳು ಮತ್ತು ಆಕ್ಷೇಪಣೆಗಳು ಬಂದಿದೆ.ಹೀಗಾಗಿ ಸದರಿ ಸರ್ವೆ ನಂ.ಗೆ ಪರವಾನಗಿ ನೀಡಿರುವ ಬಗ್ಗೆ ಮೈಸೂರು ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಂದ ತೆನಿಖೆ ಮಾಡಲು ತಂಡ ರಚಿಸಲಾಗಿದೆ.ಮುಂದಿನ ಆದೇಶದ ವರೆಗೆ ಯಾವುದೇ ಪರವಾನಗಿ ನೀಡಬಾರದೆಂದು ಹಾಗೂ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಬೇಕೆಂದು ಪೌರಾಯುಕ್ತರು ನೋಟೀಸ್ ನೀಡಿ ಈಗಾಗಲೇ ನೀಡಿರುವ ಪರವಾನಗಿಯನ್ನ ಹಿಂದಕ್ಕೆ ಪಡೆದಿದ್ದಾರೆ.ನಿರ್ಮಾಣ ಕಾರ್ಯ ಸ್ಥಗಿತಗೊಳಿಸುವಂತೆ ಮೂರು ನೋಟೀಸ್ ನೀಡಲಾಗಿದೆ.ಹೀಗಿದ್ದೂ ಸರ್ಕಾರಿ ಜಾಗದಲ್ಲಿ ರಾಜಾರೋಷವಾಗಿ ನಿರ್ಮಾಣ ಕಾರ್ಯ ಮುಂದುವರೆಯುತ್ತಿದೆ.ಅಧಿಕಾರಿಗಳು ನೆಪಮಾತ್ರಕ್ಕೆ ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತಿದ್ದಾರೆ.ಮೂರು ನೋಟೀಸ್ ಜಾರಿಯಾದ್ರೂ ಕಾಮಗಾರಿ ನಡೆಯುತ್ತಲೇ ಇದೆ.

ಸರ್ಕಾರಿ ಜಾಗಕ್ಕೆ ಪರವಾನಗಿ ನೀಡಿದ್ದು ಹೇಗೆ…?ಪರವಾನಗಿ ನೀಡುವ ಮುನ್ನ ದಾಖಲೆಗಳನ್ನ ಪರಿಶೀಲಿಸಲಿಲ್ಲವೇ…?ಆರ್.ಟಿ.ಸಿ.ಯಲ್ಲಿ ಟೌನ್ ಮುನಿಸಿಪಾಲಿಟಿ ಎಂದು ದಾಖಲಾಗಿದ್ದರೂ ಪರವಾನಗಿ ನೀಡಿದವರು ಯಾರು…? ಮೂರು ನೋಟೀಸ್ ಜಾರಿ ಮಾಡಿ ಕಣ್ಮುಚ್ಚಿ ಕುಳಿತಿರುವ ಕಾರಣವಾದ್ರೂ ಏನು..? ಎಂಬ ಪ್ರಶ್ನೆಗಳಿಗೆ ಪೌರಸಯುಕ್ತರು ಉತ್ತರ ನೀಡಬೇಕಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *