ಸರ್ಕಾರಿ ಜಾಗದಲ್ಲಿ ಬೃಹತ್ ಕಟ್ಟಡ…ಪರವಾನಗಿ ನೀಡಿದ ನಗರಸಭೆ…ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ಸರ್ಕಾರಿ ಜಾಗದಲ್ಲಿ ಬೃಹತ್ ಕಟ್ಟಡ…ಪರವಾನಗಿ ನೀಡಿದ ನಗರಸಭೆ…ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ಹುಣಸೂರು,ಜ5,Tv10 ಕನ್ನಡ

ಸರ್ಕಾರದ ಜಾಗದಲ್ಲಿ ಕಟ್ಟಡ ನಿರ್ಮಿಸಲು ನಗರಸಭೆಯೇ ಪರವಾನಗಿ ನೀಡಿರುವ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ.ತಡವಾಗಿ ಜ್ಞಾನೋದಯವಾಗಿ ಪರವಾನಗಿ ರದ್ದುಪಡಿಸಲು ಮುಂದಾಗಿದೆ.ನೆಪಮಾತ್ರಕ್ಕೆ ನೋಟೀಸ್ ನೀಡಿದ ಅಧಿಕಾರಿಗಳು ಜಾಣಕುರುಡರಂತೆ ವರ್ತಿಸುತ್ತಾ ಕಣ್ಮುಚ್ಚಿ ಕುಳಿತಿದ್ದಾರೆ.ಇತ್ತ ಕಟ್ಟಡ ಕಾಮಗಾರಿ ರಾಜಾರೋಷವಾಗಿ ಸಾಗುತ್ತಿದೆ.

ಹುಣಸೂರು ತಾಲೂಕು ಕಸಬಾ ಹೋಬಳಿ,ದೊಡ್ಡಹುಣಸೂರು ಗ್ರಾಮ ಸರ್ಕಾರಿ ಸರ್ವೆ ನಂ.250 ರ 16.39 ಎಕ್ರೆ ವ್ಯಾಪ್ತಿಯಲ್ಲಿ ಬರುವ ಖಾತೆ ನಂ.185/152/1 ಹಾಗೂ 184/151/1 ರ ನಿವೇಶನಗಳಲ್ಲಿ ವಾಣಿಜ್ಯ ಹಾಗೂ ವಸತಿ ಕಟ್ಟಡಗಳನ್ನ ನಿರ್ಮಿಸಲು ಹುಣಸೂರು ನಗರಸಭೆಯಿಂದ ಪರವಾನಗಿ ನೀಡಿದ್ದಾರೆ.ಆದ್ರೆ ದಾಖಲೆಗಳನ್ನ ಪರಿಶೀಲನೆ ಮಾಡಿದಾಗ ಸದರಿ ಜಾಗದ ಆರ್.ಟಿ.ಸಿ.ಯಲ್ಲಿ ಟೌನ್ ಮುನಿಸಿಪಾಲಿಟಿ ಹುಣಸೂರು ಎಂದು ದಾಖಲಾಗಿದೆ.ಈ ಹಿನ್ನಲೆ ಪರವಾನಗಿ ನೀಡಿರುವ ಬಗ್ಗೆ ಸಾಕಷ್ಟು ತಕರಾರುಗಳು ಮತ್ತು ಆಕ್ಷೇಪಣೆಗಳು ಬಂದಿದೆ.ಹೀಗಾಗಿ ಸದರಿ ಸರ್ವೆ ನಂ.ಗೆ ಪರವಾನಗಿ ನೀಡಿರುವ ಬಗ್ಗೆ ಮೈಸೂರು ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಂದ ತೆನಿಖೆ ಮಾಡಲು ತಂಡ ರಚಿಸಲಾಗಿದೆ.ಮುಂದಿನ ಆದೇಶದ ವರೆಗೆ ಯಾವುದೇ ಪರವಾನಗಿ ನೀಡಬಾರದೆಂದು ಹಾಗೂ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಬೇಕೆಂದು ಪೌರಾಯುಕ್ತರು ನೋಟೀಸ್ ನೀಡಿ ಈಗಾಗಲೇ ನೀಡಿರುವ ಪರವಾನಗಿಯನ್ನ ಹಿಂದಕ್ಕೆ ಪಡೆದಿದ್ದಾರೆ.ನಿರ್ಮಾಣ ಕಾರ್ಯ ಸ್ಥಗಿತಗೊಳಿಸುವಂತೆ ಮೂರು ನೋಟೀಸ್ ನೀಡಲಾಗಿದೆ.ಹೀಗಿದ್ದೂ ಸರ್ಕಾರಿ ಜಾಗದಲ್ಲಿ ರಾಜಾರೋಷವಾಗಿ ನಿರ್ಮಾಣ ಕಾರ್ಯ ಮುಂದುವರೆಯುತ್ತಿದೆ.ಅಧಿಕಾರಿಗಳು ನೆಪಮಾತ್ರಕ್ಕೆ ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತಿದ್ದಾರೆ.ಮೂರು ನೋಟೀಸ್ ಜಾರಿಯಾದ್ರೂ ಕಾಮಗಾರಿ ನಡೆಯುತ್ತಲೇ ಇದೆ.

ಸರ್ಕಾರಿ ಜಾಗಕ್ಕೆ ಪರವಾನಗಿ ನೀಡಿದ್ದು ಹೇಗೆ…?ಪರವಾನಗಿ ನೀಡುವ ಮುನ್ನ ದಾಖಲೆಗಳನ್ನ ಪರಿಶೀಲಿಸಲಿಲ್ಲವೇ…?ಆರ್.ಟಿ.ಸಿ.ಯಲ್ಲಿ ಟೌನ್ ಮುನಿಸಿಪಾಲಿಟಿ ಎಂದು ದಾಖಲಾಗಿದ್ದರೂ ಪರವಾನಗಿ ನೀಡಿದವರು ಯಾರು…? ಮೂರು ನೋಟೀಸ್ ಜಾರಿ ಮಾಡಿ ಕಣ್ಮುಚ್ಚಿ ಕುಳಿತಿರುವ ಕಾರಣವಾದ್ರೂ ಏನು..? ಎಂಬ ಪ್ರಶ್ನೆಗಳಿಗೆ ಪೌರಸಯುಕ್ತರು ಉತ್ತರ ನೀಡಬೇಕಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *