ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು ಪ್ರಕರಣ…ಮುರಾರ್ಜಿ ವಸತಿ ಕಾಲೇಜು ಪ್ರಾಂಶುಪಾಲೆ ಮತ್ತು ವಾರ್ಡನ್ ಸಸ್ಪೆಂಡ್…

ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು ಪ್ರಕರಣ…ಮುರಾರ್ಜಿ ವಸತಿ ಕಾಲೇಜು ಪ್ರಾಂಶುಪಾಲೆ ಮತ್ತು ವಾರ್ಡನ್ ಸಸ್ಪೆಂಡ್…

ಚಾಮರಾಜನಗರ,ಜ5,Tv10 ಕನ್ನಡ

ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಭಂಧಿಸಿದಂತೆ ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಹಾಗೂ ವಾರ್ಡನ್ ನ ಸಸ್ಪೆಂಡ್ ಮಾಡಲಾಗಿದೆ.ಗುಂಡ್ಲುಪೇಟೆ ತಾಲೂಕು ಬೇಗೂರು ಸಮೀಪವಿರುವ ಯಡವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ಶಾಲೆಯಲ್ಲಿ ಘಟನೆ ನಡೆದಿತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಮಣಿತ್(17)ಎರಡನೇ ಮಹಡಿಯ ಕಿಟಕಿ ಬಳಿಯಿಂದ ಮಧ್ಯರಾತ್ರಿ 2 ಗಂಟೆ ವೇಳೆ ಬಿದ್ದು ಗಂಭೀರ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದ. ಮಣಿತ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ.ಮಧ್ಯೆ ರಾತ್ರಿ 2 ಗಂಟೆಯಲ್ಲಿ ಬಿದ್ದ ಮಣಿತ್ ನನ್ನು ಮರುದಿನ ಬೆಳಿಗ್ಗೆ 8 ಗಂಟೆಯಲ್ಲಿ ಸಹ ವಿಧ್ಯಾರ್ಥಿಗಳು ಗಮನಿಸಿ ವಸತಿ ಶಾಲೆಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ.ಕೂಡಲೇ ಗಾಯಗೊಂಡು ನರಳುತ್ತಿದ್ದ ಮಣಿತ್ ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಘಟನೆಯ ವಿಚಾರವಾಗಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪ ನಾಗ್ ಮತ್ತು ಅಪಾರ ಜಿಲ್ಲಾಧಿಕಾರಿ ಗೀತಾ ಹುಡೇದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಮುನಿರಾಜು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಬಳಿಕ ಮೇಲ್ನೋಟಕ್ಕೆ ಕಾಲೇಜು ಪ್ರಾಂಶುಪಾಲೆ ರಾಜೇಶ್ವರಿ ಮತ್ತು ಮೇಲ್ವಿಚಾರಕ ಚಿಂತನ್ ಎಂಬುವರನ್ನು ಅಮಾನತು ಮಾಡಿದ್ದಾರೆ.
ಪ್ರತ್ಯೇಕವಾಗಿ ಹೆಚ್ಚಿನ ತನಿಖೆಗೆ ಎಂದು ಮೂರು ಜನ ಅಧಿಕಾರಿಗಳ ಸಮಿತಿ ತಂಡದಿಂದ ಭೇಟಿ ನೀಡಿ ಕುಲಂಕುಶವಾಗಿ ಪರಿಶೀಲನೆ ಮಾಡಿದ ಬಳಿಕ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ. ಎರಡು ಗಂಟೆ ಸಮಯದಲ್ಲಿ ಬಿಲ್ಡಿಂಗ್ ಮೇಲೆ ಏರಲು ಕಾರಣವೇನು ? ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ಅಳವಡಿಸಿರುವ ಸಿಸಿಟಿವಿ ವೈರ್ ಗಳು ಕಟ್ಟಾಗಿ ಸ್ಥಗಿತವಾಗಿರುವುದು ಸಾಕಷ್ಟು ಅನುಮಾನಗಳಿಗೆ ಮಾಡಿಕೊಟ್ಟಿದೆ.ಬಾಲಕ ಮತ್ತು ಬಾಲಕಿಯರ ಕಾಲೇಜು ವಸತಿ ಶಾಲೆಯಲ್ಲಿ ಜಾಗೃತಿಯಿಂದ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಲು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮತ್ತು ಶಿಕ್ಷಕರು ಉಪನ್ಯಾಸಕರು ಸೇರಿದಂತೆ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಇನ್ನಷ್ಟು ಹೆಚ್ಚಿನ ತನಿಖೆ ಮಾಡಿ ಸಂಬಂಧಪಟ್ಟವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಮುಂದಾಗುತ್ತೇವೆ ಹಾಗೂ ಮೃತಪಟ್ಟಿರುವ ವಿದ್ಯಾರ್ಥಿಯ ಸಂಪೂರ್ಣ ವಿಚಾರವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಅಲ್ಲಿಯ ಮೇಲಾಧಿಕಾರಿಗಳ ಆದೇಶದ ಮೇರೆಗೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ತಿಳಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *