ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ 5 ನೇ ವರ್ಷದ ಪುಣ್ಯಸಂಸ್ಕರಣೆ…ಹೆಣ್ಣುಮಕ್ಕಳಿಗೆ ಹಣ್ಣುಹಂಪಲು ವಿತರಣೆ…

ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ 5 ನೇ ವರ್ಷದ ಪುಣ್ಯಸಂಸ್ಕರಣೆ…ಹೆಣ್ಣುಮಕ್ಕಳಿಗೆ ಹಣ್ಣುಹಂಪಲು ವಿತರಣೆ…

ಮೈಸೂರು,ಜ6,Tv10 ಕನ್ನಡ

ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ 5ನೇ ವರ್ಷದ ಪುಣ್ಯಸಂಸ್ಕರಣೆಯನ್ನ ಹೆಣ್ಣುಮಕ್ಕಳಿಗೆ ಹಣ್ಣುಹಂಪಲು ಹಾಗೂ ಓದುವ ಸಾಮಗ್ರಿಗಳನ್ನ ವಿತರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ನಗರದ ಕೃಷ್ಣಮೂರ್ತಿ ಪುರಂ ನಲ್ಲಿರುವ ಶಾರದಾ ನೆಲೆಯಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇದೇ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ಡಾ. ಕೆ. ರಘುರಾಮ್ ವಾಜಪೇಯಿ ಮಾತನಾಡಿ
ಪೇಜಾವರ ಸ್ವಾಮೀಜಿ ಎಲ್ಲರ ಪ್ರೀತಿ ಪಡೆದಿದ್ದರು
ಪೇಜಾವರ ಸ್ವಾಮೀಜಿ ಯಾವುದೇ ಜಾತಿಗೆ ಸೀಮಿತವಾಗದೆ ಎಲ್ಲ ವರ್ಗದ ಜನರ ಪ್ರೀತಿಗೆ ಪಾತ್ರರಾಗಿದ್ದವರು.
ಯತಿಗಳು ಸಾಮರಸ್ಯ ನಡಿಗೆ ಮೂಲಕ ಸಮಾಜದ ಒಗ್ಗಟ್ಟಿಗೆ ಶ್ರಮಿಸುವ ಕೆಲಸವನ್ನು ಮಾಡುವ ಜೊತೆಗೆ ಪ್ರಕೃತಿ ಸಂಕಷ್ಟ ಸಂದರ್ಭದಲ್ಲಿ ಅವರ ಸೇವೆಗೆ ಸದಾ ಸಿದ್ಧರಾಗಿ ಪಾದಯಾತ್ರೆ ನಡೆಸಿ ಜನರ ಬದುಕಿಗೆ ಚೈತನ್ಯ ತುಂಬುವ ಕೆಲಸ ಮಾಡುತ್ತಿದ್ದರು.ಯಾವುದೇ ಸಮಸ್ಯೆ ಎದುರಾದರೂ ಅದಕ್ಕೆ ಸೂಕ್ತ ಪರಿಹಾರ ಕೊಡುವ ಶಕ್ತಿ ಹೊಂದಿದ್ದರು ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ನಗರ ಪಾಲಿಕಾ ಸದಸ್ಯರಾದ ಮಾ.ವಿ. ರಾಮ್ ಪ್ರಸಾದ್ ಡಾ: ಬಿ. ಎಸ್. ಪ್ರೇಮ ಕುಮಾರಿ, ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ವಕೀಲ ಪಿ ಜೆ ರಾಘವೇಂದ್ರ,ಸುಚಿಂದ್ರ, ಮಿರ್ಲೆ ಪಣೀಶ್, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ನಿಲಯ ಪಾಲಕಿ ರೇವತಿ ,ವೀರಭದ್ರ ಸ್ವಾಮಿ, ಮಹದೇವ್, ಶ್ರೀಧರ್ ,ಮಹೇಶ್, ರಾಜೇಶ್ ಕುಮಾರ್, ನವನೀತ್ ಕುಮಾರ್, ಜಯಮ್ಮ , ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಇತರರು ಹಾಜರಿದ್ದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *