ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ 5 ನೇ ವರ್ಷದ ಪುಣ್ಯಸಂಸ್ಕರಣೆ…ಹೆಣ್ಣುಮಕ್ಕಳಿಗೆ ಹಣ್ಣುಹಂಪಲು ವಿತರಣೆ…

ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ 5 ನೇ ವರ್ಷದ ಪುಣ್ಯಸಂಸ್ಕರಣೆ…ಹೆಣ್ಣುಮಕ್ಕಳಿಗೆ ಹಣ್ಣುಹಂಪಲು ವಿತರಣೆ…

ಮೈಸೂರು,ಜ6,Tv10 ಕನ್ನಡ

ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ 5ನೇ ವರ್ಷದ ಪುಣ್ಯಸಂಸ್ಕರಣೆಯನ್ನ ಹೆಣ್ಣುಮಕ್ಕಳಿಗೆ ಹಣ್ಣುಹಂಪಲು ಹಾಗೂ ಓದುವ ಸಾಮಗ್ರಿಗಳನ್ನ ವಿತರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ನಗರದ ಕೃಷ್ಣಮೂರ್ತಿ ಪುರಂ ನಲ್ಲಿರುವ ಶಾರದಾ ನೆಲೆಯಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇದೇ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ಡಾ. ಕೆ. ರಘುರಾಮ್ ವಾಜಪೇಯಿ ಮಾತನಾಡಿ
ಪೇಜಾವರ ಸ್ವಾಮೀಜಿ ಎಲ್ಲರ ಪ್ರೀತಿ ಪಡೆದಿದ್ದರು
ಪೇಜಾವರ ಸ್ವಾಮೀಜಿ ಯಾವುದೇ ಜಾತಿಗೆ ಸೀಮಿತವಾಗದೆ ಎಲ್ಲ ವರ್ಗದ ಜನರ ಪ್ರೀತಿಗೆ ಪಾತ್ರರಾಗಿದ್ದವರು.
ಯತಿಗಳು ಸಾಮರಸ್ಯ ನಡಿಗೆ ಮೂಲಕ ಸಮಾಜದ ಒಗ್ಗಟ್ಟಿಗೆ ಶ್ರಮಿಸುವ ಕೆಲಸವನ್ನು ಮಾಡುವ ಜೊತೆಗೆ ಪ್ರಕೃತಿ ಸಂಕಷ್ಟ ಸಂದರ್ಭದಲ್ಲಿ ಅವರ ಸೇವೆಗೆ ಸದಾ ಸಿದ್ಧರಾಗಿ ಪಾದಯಾತ್ರೆ ನಡೆಸಿ ಜನರ ಬದುಕಿಗೆ ಚೈತನ್ಯ ತುಂಬುವ ಕೆಲಸ ಮಾಡುತ್ತಿದ್ದರು.ಯಾವುದೇ ಸಮಸ್ಯೆ ಎದುರಾದರೂ ಅದಕ್ಕೆ ಸೂಕ್ತ ಪರಿಹಾರ ಕೊಡುವ ಶಕ್ತಿ ಹೊಂದಿದ್ದರು ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ನಗರ ಪಾಲಿಕಾ ಸದಸ್ಯರಾದ ಮಾ.ವಿ. ರಾಮ್ ಪ್ರಸಾದ್ ಡಾ: ಬಿ. ಎಸ್. ಪ್ರೇಮ ಕುಮಾರಿ, ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ವಕೀಲ ಪಿ ಜೆ ರಾಘವೇಂದ್ರ,ಸುಚಿಂದ್ರ, ಮಿರ್ಲೆ ಪಣೀಶ್, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ನಿಲಯ ಪಾಲಕಿ ರೇವತಿ ,ವೀರಭದ್ರ ಸ್ವಾಮಿ, ಮಹದೇವ್, ಶ್ರೀಧರ್ ,ಮಹೇಶ್, ರಾಜೇಶ್ ಕುಮಾರ್, ನವನೀತ್ ಕುಮಾರ್, ಜಯಮ್ಮ , ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಇತರರು ಹಾಜರಿದ್ದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *