ಮೂರು ತಲೆಮಾರುಗಳಿಂದ ವಾಸವಿದ್ದ 4 ಕುಟುಂಬ ಬೀದಿಪಾಲು ಪ್ರಕರಣ…ತಾಲೂಕು ಆಡಳಿತ ಸ್ಪಂದನೆ…

ಮೂರು ತಲೆಮಾರುಗಳಿಂದ ವಾಸವಿದ್ದ 4 ಕುಟುಂಬ ಬೀದಿಪಾಲು ಪ್ರಕರಣ…ತಾಲೂಕು ಆಡಳಿತ ಸ್ಪಂದನೆ…

ನಂಜನಗೂಡು,ಜ6,Tv10 ಕನ್ನಡ

ಮೂರು ತಲೆಮಾರುಗಳಿಂದ ವಾಸವಿದ್ದ ಹಂದಿಜೋಗಿ ಜನಾಂಗದ 4 ಕುಟುಂಬವನ್ನ ರಾತ್ರೋರಾತ್ರಿ ಬೀದಿಪಾಲು ಮಾಡಿದ ಪ್ರಕರಣಕ್ಕೆ ನಂಜನಗೂಡು ತಾಲೂಕು ಆಡಳಿತ ಸ್ಪಂದಿಸಿದೆ.ಜಮೀನಿನ ಮಾಲಿಕ ಶಿವಾನಂದ ಮತ್ತು ಬಿಳಿಗೆರೆ ಪೊಲೀಸ್ ಠಾಣೆ ಪಿಎಸ್ಐ ಅಮಾನತಿಗಾಗಿ ಒತ್ತಡ ಹೇರಲಾಗಿದೆ.ನಂಜನಗೂಡು ತಾಲೂಕು ಹೊರಳವಾಡಿ ಹೊಸೂರು ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ವಾಸವಿದ್ದ ಮನೆಗಳನ್ನ ತೆರುವುಗೊಳಿಸಿದ ಪರಿಣಾಮ ದಾರಿ ಕಾಣದೆ 4 ಕುಟುಂಬ ಬೀದಿಯನ್ನೇ ಆಶ್ರಯಿಸಿದೆ ನ್ಯಾಯ ದೊರೆಯದಿದ್ದಲ್ಲಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ಧರಿಸಿದೆ.ಈ ಮಾಹಿತಿ ಅರಿತ ನಂತರ ನೊಂದ ಕುಟುಂಬದ ಬಳಿ ಜನಪ್ರತಿನಿಧಿಗಳು ಸಂತ್ರಸ್ಥ ಕುಟುಂಬದವರನ್ನ ಭೇಟಿ ಮಾಡಿದ್ದಾರೆ.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಬಿಜೆಪಿ ಪಕ್ಷದ ಮಾಜಿ ಮಂತ್ರಿ ಎನ್ ಮಹೇಶ್ ಭೇಟಿ ನೀಡಿದ್ದಾರೆ.ಸಂತ್ರಸ್ಥರಿಂದ ಮಾಹಿತಿ ಪಡೆದ ಮಹೇಶ್ ತಹಸೀಲ್ದಾರ್ ಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ನಂಜನಗೂಡಿನ ತಹಸಿಲ್ದಾರ್ ಶಿವಕುಮಾರ್ ಕಾಸನೂರು ಇ ಓ ಜೆರಾಲ್ಡ್ ರಾಜೇಶ್ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಭೀಮರಾಯ ವಡ್ಡರ್ ಸೇರಿದಂತೆ ತಾಲೂಕು ಮಟ್ಟದ ಸಾಕಷ್ಟು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಬೀದಿಪಾಲು ಮಾಡಿದವರ ವಿರುದ್ದ ಕಾನೂನು ಬದ್ಧವಾಗಿ ಅಟ್ರಾಸಿಟಿ ಪ್ರಕರಣ ದಾಖಲಾಗಿ ನಮ್ಮ ಭೂಮಿ ನಮಗೆ ಸಿಗುವ ತನಕ ಹೋರಾಟ ಮಾಡುತ್ತೇವೆ ಎಂದು ನೊಂದ ಕುಟುಂಬಸ್ಥರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬಳಿ ಅಳಲು ತೋಡಿಕೊಂಡಿದ್ದಾರೆ. ಹಂದಿ ಜೋಗಿ ಕುಟುಂಬಸ್ಥರಿಗೆ ಸೂಕ್ತವಾದ ನ್ಯಾಯ ಒದಗಿಸಿ ಕೊಡದಿದ್ದಲ್ಲಿ ನಾನೇ ಸಂತ್ರಸ್ಥರ ಜೊತೆ ಕುಳಿತು ಹೋರಾಟಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಎನ್ ಮಹೇಶ್ ಎಚ್ಚರಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *