ಸಂಚಾರಿ ನಿಯಮ ಉಲ್ಲಂಘನೆ…ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ…ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ಭೂಪ…

ಸಂಚಾರಿ ನಿಯಮ ಉಲ್ಲಂಘನೆ…ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ…ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ಭೂಪ…

ಮೈಸೂರು,ಜ7,Tv10 ಕನ್ನಡ

ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದಾಗ ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ ಹಾಕಿದ ಯುವಕನೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.ಬೈಕ್ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿ ಪೊಲೀಸರನ್ನೇ ಯಾಮಾರಿಸಲು ಪ್ಲಾನ್ ಮಾಡಿ ಸಿಕ್ಕಿಬಿದ್ದಿದ್ದಾನೆ.ವಾಹನವನ್ನ ವಶಪಡಿಸಿಕೊಂಡ ವಿವಿ ಪುರಂ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆಸರೆ ಬಡಾವಣೆ ನಿವಾಸಿ ಮೊಹಮದ್ ಮುಜಾಹಿಲ್ ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಐನಾತಿ.ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ರಾಯಲ್ ಎನ್ಫೀಲ್ಡ್ ಇದೀಗ ವಿವಿಪುರಂ ಠಾಣೆ ವಶದಲ್ಲಿದೆ.

ನಿನ್ನೆ ವಿವಿಪುರಂ ಸಂಚಾರಿ ಪೊಲೀಸರು ಆಕಾಶವಾಣಿ ಜಂಕ್ಷನ್ ಬಳಿ ಕೋಬ್ರಾ ಗಸ್ತಿನಲ್ಲಿದ್ದಾಗ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿರುವ ರಾಯಲ್ ಎನ್ಫೀಲ್ಡ್ ಬಂದಿದೆ.ಬೈಕ್ ತಡೆಹಿಡಿದು ಯುವಕನನ್ನ ಪ್ರಶ್ನಿಸಿದಾಗ ತಬ್ಬಿಬ್ಬಾಗಿದ್ದಾನೆ.ನೊಂದಣಿ ಸಂಖ್ಯೆ KA09 EV4884 ಮೇಲೆ ಕೊನೆ ಮೂರು ನಂಬರ್ (884) ಗೆ ಕಪ್ಪು ಸ್ಟಿಕ್ಕರ್ ಅಂಟಿಸಿದ್ದಾನೆ.ವಾಹನವನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದ ವೇಳೆ ವಿಧಿಸುವ ದಂಡ ತಪ್ಪಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಸ್ಟಿಕ್ಕರ್ ಅಂಟಿಸಿರುವುದು ಖಚಿತವಾಗಿದೆ.ವಾಹನ ಮಾಲೀಕ ಮೊಹಮದ್ ಮುಜಾಹಿಲ್ ಸಮೇತ ರಾಯಲ್ ಎನ್ಫೀಲ್ಡ್ ನ ವಶಪಡಿಸಿಕೊಂಡ ಸಂಚಾರಿ ಠಾಣೆ ಎಎಸ್ಸೈ ವೀರಭದ್ರಪ್ಪ ನವರು ವಿವಿ ಪುರಂ ಠಾಣೆಗೆ ಒಪ್ಪಿಸಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *