ಸಂಚಾರಿ ನಿಯಮ ಉಲ್ಲಂಘನೆ…ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ…ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ಭೂಪ…

ಸಂಚಾರಿ ನಿಯಮ ಉಲ್ಲಂಘನೆ…ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ…ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ಭೂಪ…

ಮೈಸೂರು,ಜ7,Tv10 ಕನ್ನಡ

ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದಾಗ ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ ಹಾಕಿದ ಯುವಕನೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.ಬೈಕ್ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿ ಪೊಲೀಸರನ್ನೇ ಯಾಮಾರಿಸಲು ಪ್ಲಾನ್ ಮಾಡಿ ಸಿಕ್ಕಿಬಿದ್ದಿದ್ದಾನೆ.ವಾಹನವನ್ನ ವಶಪಡಿಸಿಕೊಂಡ ವಿವಿ ಪುರಂ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆಸರೆ ಬಡಾವಣೆ ನಿವಾಸಿ ಮೊಹಮದ್ ಮುಜಾಹಿಲ್ ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಐನಾತಿ.ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ರಾಯಲ್ ಎನ್ಫೀಲ್ಡ್ ಇದೀಗ ವಿವಿಪುರಂ ಠಾಣೆ ವಶದಲ್ಲಿದೆ.

ನಿನ್ನೆ ವಿವಿಪುರಂ ಸಂಚಾರಿ ಪೊಲೀಸರು ಆಕಾಶವಾಣಿ ಜಂಕ್ಷನ್ ಬಳಿ ಕೋಬ್ರಾ ಗಸ್ತಿನಲ್ಲಿದ್ದಾಗ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿರುವ ರಾಯಲ್ ಎನ್ಫೀಲ್ಡ್ ಬಂದಿದೆ.ಬೈಕ್ ತಡೆಹಿಡಿದು ಯುವಕನನ್ನ ಪ್ರಶ್ನಿಸಿದಾಗ ತಬ್ಬಿಬ್ಬಾಗಿದ್ದಾನೆ.ನೊಂದಣಿ ಸಂಖ್ಯೆ KA09 EV4884 ಮೇಲೆ ಕೊನೆ ಮೂರು ನಂಬರ್ (884) ಗೆ ಕಪ್ಪು ಸ್ಟಿಕ್ಕರ್ ಅಂಟಿಸಿದ್ದಾನೆ.ವಾಹನವನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದ ವೇಳೆ ವಿಧಿಸುವ ದಂಡ ತಪ್ಪಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಸ್ಟಿಕ್ಕರ್ ಅಂಟಿಸಿರುವುದು ಖಚಿತವಾಗಿದೆ.ವಾಹನ ಮಾಲೀಕ ಮೊಹಮದ್ ಮುಜಾಹಿಲ್ ಸಮೇತ ರಾಯಲ್ ಎನ್ಫೀಲ್ಡ್ ನ ವಶಪಡಿಸಿಕೊಂಡ ಸಂಚಾರಿ ಠಾಣೆ ಎಎಸ್ಸೈ ವೀರಭದ್ರಪ್ಪ ನವರು ವಿವಿ ಪುರಂ ಠಾಣೆಗೆ ಒಪ್ಪಿಸಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *