ಸಂಚಾರಿ ನಿಯಮ ಉಲ್ಲಂಘನೆ…ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ…ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ಭೂಪ…

ಸಂಚಾರಿ ನಿಯಮ ಉಲ್ಲಂಘನೆ…ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ…ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ಭೂಪ…

ಮೈಸೂರು,ಜ7,Tv10 ಕನ್ನಡ

ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದಾಗ ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ ಹಾಕಿದ ಯುವಕನೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.ಬೈಕ್ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿ ಪೊಲೀಸರನ್ನೇ ಯಾಮಾರಿಸಲು ಪ್ಲಾನ್ ಮಾಡಿ ಸಿಕ್ಕಿಬಿದ್ದಿದ್ದಾನೆ.ವಾಹನವನ್ನ ವಶಪಡಿಸಿಕೊಂಡ ವಿವಿ ಪುರಂ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆಸರೆ ಬಡಾವಣೆ ನಿವಾಸಿ ಮೊಹಮದ್ ಮುಜಾಹಿಲ್ ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಐನಾತಿ.ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ರಾಯಲ್ ಎನ್ಫೀಲ್ಡ್ ಇದೀಗ ವಿವಿಪುರಂ ಠಾಣೆ ವಶದಲ್ಲಿದೆ.

ನಿನ್ನೆ ವಿವಿಪುರಂ ಸಂಚಾರಿ ಪೊಲೀಸರು ಆಕಾಶವಾಣಿ ಜಂಕ್ಷನ್ ಬಳಿ ಕೋಬ್ರಾ ಗಸ್ತಿನಲ್ಲಿದ್ದಾಗ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿರುವ ರಾಯಲ್ ಎನ್ಫೀಲ್ಡ್ ಬಂದಿದೆ.ಬೈಕ್ ತಡೆಹಿಡಿದು ಯುವಕನನ್ನ ಪ್ರಶ್ನಿಸಿದಾಗ ತಬ್ಬಿಬ್ಬಾಗಿದ್ದಾನೆ.ನೊಂದಣಿ ಸಂಖ್ಯೆ KA09 EV4884 ಮೇಲೆ ಕೊನೆ ಮೂರು ನಂಬರ್ (884) ಗೆ ಕಪ್ಪು ಸ್ಟಿಕ್ಕರ್ ಅಂಟಿಸಿದ್ದಾನೆ.ವಾಹನವನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದ ವೇಳೆ ವಿಧಿಸುವ ದಂಡ ತಪ್ಪಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಸ್ಟಿಕ್ಕರ್ ಅಂಟಿಸಿರುವುದು ಖಚಿತವಾಗಿದೆ.ವಾಹನ ಮಾಲೀಕ ಮೊಹಮದ್ ಮುಜಾಹಿಲ್ ಸಮೇತ ರಾಯಲ್ ಎನ್ಫೀಲ್ಡ್ ನ ವಶಪಡಿಸಿಕೊಂಡ ಸಂಚಾರಿ ಠಾಣೆ ಎಎಸ್ಸೈ ವೀರಭದ್ರಪ್ಪ ನವರು ವಿವಿ ಪುರಂ ಠಾಣೆಗೆ ಒಪ್ಪಿಸಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *