ಸಂಚಾರಿ ನಿಯಮ ಉಲ್ಲಂಘನೆ…ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ…ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ಭೂಪ…

ಸಂಚಾರಿ ನಿಯಮ ಉಲ್ಲಂಘನೆ…ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ…ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ಭೂಪ…

ಮೈಸೂರು,ಜ7,Tv10 ಕನ್ನಡ

ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದಾಗ ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ ಹಾಕಿದ ಯುವಕನೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.ಬೈಕ್ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿ ಪೊಲೀಸರನ್ನೇ ಯಾಮಾರಿಸಲು ಪ್ಲಾನ್ ಮಾಡಿ ಸಿಕ್ಕಿಬಿದ್ದಿದ್ದಾನೆ.ವಾಹನವನ್ನ ವಶಪಡಿಸಿಕೊಂಡ ವಿವಿ ಪುರಂ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆಸರೆ ಬಡಾವಣೆ ನಿವಾಸಿ ಮೊಹಮದ್ ಮುಜಾಹಿಲ್ ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಐನಾತಿ.ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ರಾಯಲ್ ಎನ್ಫೀಲ್ಡ್ ಇದೀಗ ವಿವಿಪುರಂ ಠಾಣೆ ವಶದಲ್ಲಿದೆ.

ನಿನ್ನೆ ವಿವಿಪುರಂ ಸಂಚಾರಿ ಪೊಲೀಸರು ಆಕಾಶವಾಣಿ ಜಂಕ್ಷನ್ ಬಳಿ ಕೋಬ್ರಾ ಗಸ್ತಿನಲ್ಲಿದ್ದಾಗ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿರುವ ರಾಯಲ್ ಎನ್ಫೀಲ್ಡ್ ಬಂದಿದೆ.ಬೈಕ್ ತಡೆಹಿಡಿದು ಯುವಕನನ್ನ ಪ್ರಶ್ನಿಸಿದಾಗ ತಬ್ಬಿಬ್ಬಾಗಿದ್ದಾನೆ.ನೊಂದಣಿ ಸಂಖ್ಯೆ KA09 EV4884 ಮೇಲೆ ಕೊನೆ ಮೂರು ನಂಬರ್ (884) ಗೆ ಕಪ್ಪು ಸ್ಟಿಕ್ಕರ್ ಅಂಟಿಸಿದ್ದಾನೆ.ವಾಹನವನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದ ವೇಳೆ ವಿಧಿಸುವ ದಂಡ ತಪ್ಪಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಸ್ಟಿಕ್ಕರ್ ಅಂಟಿಸಿರುವುದು ಖಚಿತವಾಗಿದೆ.ವಾಹನ ಮಾಲೀಕ ಮೊಹಮದ್ ಮುಜಾಹಿಲ್ ಸಮೇತ ರಾಯಲ್ ಎನ್ಫೀಲ್ಡ್ ನ ವಶಪಡಿಸಿಕೊಂಡ ಸಂಚಾರಿ ಠಾಣೆ ಎಎಸ್ಸೈ ವೀರಭದ್ರಪ್ಪ ನವರು ವಿವಿ ಪುರಂ ಠಾಣೆಗೆ ಒಪ್ಪಿಸಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *