ಮತ್ತೊಬ್ಬ ಖೈದಿ ಸಾವು…ಮೃತರ ಸಂಖ್ಯೆ ಎರಡಕ್ಕೆ ಏರಿಕೆ…ಮತ್ತೋರ್ವನ ಸ್ಥಿತಿ ಗಂಭೀರ…

ಮತ್ತೊಬ್ಬ ಖೈದಿ ಸಾವು…ಮೃತರ ಸಂಖ್ಯೆ ಎರಡಕ್ಕೆ ಏರಿಕೆ…ಮತ್ತೋರ್ವನ ಸ್ಥಿತಿ ಗಂಭೀರ…

ಮೈಸೂರು,ಜ8,Tv10 ಕನ್ನಡ

ಬೇಕರಿ ಎಸೆನ್ಸ್ ಸೇವಿಸಿ ಆಸ್ಪತ್ರೆ ಸೇರಿದ್ದ ಮೂವರು ಖೈದಿಗಳ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ.ನಿನ್ನೆ ಓರ್ವ ಸಾವನ್ನಪ್ಪಿದ್ದು ಇಂದು ಮುಂಜಾನೆ ಮತ್ತೋರ್ವ ಖೈದಿ ಸಾವನ್ನಪ್ಪಿದ್ದಾನೆ.ಇನ್ನೊಬ್ಬ ಖೈದಿಯ ಸ್ಥಿತಿ ಸಹ ಗಂಭೀರ ಎಂದು ಹೇಳಲಾಗಿದೆ.
ಚಾಮರಾಜನಗರದ ನಾಗರಾಜು ಮೃತ ಖೈದಿ.
ಕೇಕ್ ತಯಾರಿಸಲು ತರಿಸಿದ್ದ ಎಸೆನ್ಸ್ ಕುಡಿದು ಅಸ್ವಸ್ಥರಾಗಿದ್ದ ಮೂವರು ಕೈದಿಗಳನ್ನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ
ಮೈಸೂರಿನ ಸಾತಗಳ್ಳಿಯ ಮಾದೇಶ್ ಮೃತಪಟ್ಟಿದ್ದ.
ರಮೇಶ್ ಹಾಗೂ ನಾಗರಾಜ್ ಸ್ಥಿತಿ ಗಂಭೀರವಾಗಿತ್ತು.
ಕಿಕ್‌ಗಾಗಿ ಎಸೆನ್ಸ್ ಕುಡಿದಿದ್ದ ಮೂವರು.
ಹೊಸವರ್ಷದ ಕೇಕ್ ತಯಾರಿಸಲು ತರಿಸಲಾಗಿದ್ದ ಎಸೆನ್ಸ್.
ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು.ಡಿ 28ರಂದು ಎಸೆನ್ಸ್ ಕುಡಿದು ಯಾರಿಗೂ ಹೇಳದೆ ಸುಮ್ಮನಾಗಿದ್ದರು.
ಮೂವರಿಗೂ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲಿನಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಹೊಟ್ಟೆ ನೋವು ಕಡಿಮೆಯಾಗದ ಹಿನ್ನೆಲೆ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಅಲ್ಲಿಯೂ ವಿಷಯ ಮುಚ್ಚಿಟ್ಟಿದ್ದರು.
ವೈದ್ಯರು ಈ ಬಗ್ಗೆ ಪ್ರಶ್ನಿಸಿದಾಗ ಸತ್ಯ ಹೇಳಿದರೆಂದು ಹೇಳಲಾಗಿದೆ.
ಅದಗಲೇ ಸಾಕಷ್ಟು ವಿಳಂಬವಾದ ಹಿನ್ನೆಲೆ
ಚಿಕಿತ್ಸೆ ಫಲಕಾರಿಯಾಗದೆ ಮಾದೇಶ ಹಾಗೂ ನಾಗರಾಜು ಸಾವನ್ನಪ್ಪಿದ್ದು
ಉಳಿದ ಮತ್ತೊಬ್ಬ ರಮೇಶ್ ಪರಿಸ್ಥಿತಿ ಸಹಾ ಗಂಭೀರವಾಗಿದೆ.ಈ ಕುರಿತಂತೆ ಹಿರಿ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *