ನಜರಬಾದ್ ಠಾಣೆ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…7 ಲಕ್ಷ ಮೌಲ್ಯದ 12 ವಾಹನ ವಶ…

ನಜರಬಾದ್ ಠಾಣೆ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…7 ಲಕ್ಷ ಮೌಲ್ಯದ 12 ವಾಹನ ವಶ…

ಮೈಸೂರು,ಜ8,Tv10 ಕನ್ನಡ

ದ್ವಿಚಕ್ರವಾಹನಗಳನ್ನ ಕಳುವು ಮಾಡುತ್ತಿದ್ದ ಓರ್ವ ಖದೀಮನನ್ನ ಬಂಧಿಸುವಲ್ಲಿ ನಜರಬಾದ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 7 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.ನಂಜನಗೂಡಿನ ಕಾರ್ತಿಕ್ (21) ಬಂಧಿತ ಆರೋಪಿ.ಈ ಮೂಲಕ ನಜರಬಾದ್ ಠಾಣಾ ವ್ಯಾಪ್ತಿಯ 5,ಆಲನಹಳ್ಳಿ ಪೊಲೀಸ್ ಠಾಣೆಯ 4,ಕೆ.ಆರ್.ಪೊಲೀಸ್ ಠಾಣೆಯ 1,ನಂಜನಗೂಡು ಠಾಣೆಯ 1 ಪ್ರಕರಣಗಳು ಪತ್ತೆಯಾದಂತಾಗಿದೆ.ಆರೋಪಿ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು ಕಳ್ಳತನಕ್ಕೆ ಇಳಿದಿದ್ದ.ನಕಲಿ ಕೀ ಬಳಸಿ ವಾಹನಗಳನ್ನ ಕಳುವು ಮಾಡುತ್ತಿದ್ದ.ಗ್ರಾಮೀಣ ಪ್ರದೇಶಗಳಲ್ಲಿ ವಾಹನಗಳನ್ನ ಗಿರವಿ ಇಟ್ಟು ನಾಪತ್ತೆಯಾಗುತ್ತಿದ್ದ.

ದ್ವಿಚಕ್ರವಾಹನ ಕಳವು ಆರೋಪಿಯನ್ನ ಸೆರೆಹಿಡಿಯಲು ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ಮಾರ್ಗದರ್ಶನದಲ್ಲಿ,ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಉಸ್ತುವಾರಿಯಲ್ಲಿ,ನಜರಬಾದ್ ಠಾಣೆ ನಿರೀಕ್ಷಕರಾದ ಮಹದೇವಸ್ವಾಮಿ,ಉಪನಿರೀಕ್ಷಕರಾದ ಶ್ರೀನಿವಾಸ್ ಪಾಟೀಲ್,ನಟರಾಜ್, ಸಿಬ್ಬಂದಿಗಳಾದ ಪ್ರಕಾಶ್,ಸತೀಶ್ ಕುಮಾರ್,ರಮೇಶ್,ಸಂಜು ಎಂ ವೆಂಕಟೇಶ್,ಮೊಹಮದ್ ಇಸ್ಮಾಯಿಲ್,ಪಿಎಸ್ಸೈ ಚಂದ್ರಶೇಖರ್ ರಾವ್,ಪ್ರದೀಪ್,ಕುಮಾರ್ ರವರನ್ನೊಳಗೊಂಡ ತಂಡ ರಚಿಸಲಾಗಿತ್ತು.ಆರೋಪಿ ಸೆರೆ ಹಿಡಿದ ತಂಡಕ್ಕೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್,ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ಶ್ಲಾಘಿಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *