ಠಾಣೆ ಕ್ಯಾಂಟೀನ್ ನಲ್ಲಿ ಬರ್ತ್ ಡೇ ಪಾರ್ಟಿ…ದುರುಪಯೋಗವಾಗುತ್ತಿದ್ರೂ ಕೇಳುವವರಿಲ್ಲ…!!

ಠಾಣೆ ಕ್ಯಾಂಟೀನ್ ನಲ್ಲಿ ಬರ್ತ್ ಡೇ ಪಾರ್ಟಿ…ದುರುಪಯೋಗವಾಗುತ್ತಿದ್ರೂ ಕೇಳುವವರಿಲ್ಲ…!!

ನಂಜನಗೂಡು,ಜ8,Tv10 ಕನ್ನಡ

ಠಾಣೆ ಆವರಣದಲ್ಲಿರುವ ಕ್ಯಾಂಟೀನ್ ನಲ್ಲಿ ಖಾಸಗಿ ವ್ಯಕ್ತಿಗಳು ಬರ್ತ್ ಡೇ ಪಾರ್ಟಿ ಆಚರಿಸುವ ಮೂಲಕ ಸರ್ಕಾರದ ಜಾಗವನ್ನ ದುರುಪಯೋಗ ಪಡಿಸಿಕೊಳ್ಳುತ್ತಿರುವ ಸಂಗತಿಯೊಂದು ಬೆಳಕಿಗೆ ಬಂದಿದೆ.ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಸೇರಿದ ಕ್ಯಾಂಟೀನ್ ದುರುಪಯೋಗವಾಗುತ್ತಿರುವ ಆರೋಪ ಕೇಳಿ ಬಂದಿದೆ.ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಠಾಣೆಗೆ ಬರುವ ಸಾರ್ವಜನಿಕರಿಗೆ ಉಪಯೋಗವಾಗಲೆಂದು ಈ ಕ್ಯಾಂಟೀನ್ ತೆರೆಯಲಾಗಿದೆ.ಖಾಸಗಿ ವ್ಯಕ್ತಿಯೊಬ್ಬ ಗುತ್ತಿಗೆ ಪಡೆದು ಕ್ಯಾಂಟೀನ್ ನಡೆಸುತ್ತಿದ್ದಾನೆ.ಖಾಸಗಿ ವ್ಯಕ್ತಿಗಳು ಯಾವುದೇ ರೀತಿಯ ಕಾರ್ಯಕ್ರಮಗಳನ್ನ ನಡೆಸಬಾರದೆಂದ ನಿಯಮಗಳಿವೆ.ಆದ್ರೆ ಈ ಕ್ಯಾಂಟೀನ್ ನಲ್ಲಿ ನಿಯಮಗಳನ್ನ ಗಾಳಿಗೆ ತೂರಿ ಬರ್ತ್ ಡೇ ಪಾರ್ಟಿ ಆಚರಿಸಲಾಗಿದೆ.ಕೇಕ್ ಕತ್ತರಿಸಿ ಸಂಭ್ರಮಿಸಲಾಗಿದೆ.

ಈ ಹಿಂದೆ ಈ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಯೊಬ್ಬರು ಕ್ಯಾಂಟೀನ್ ನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಅಪಸ್ವರವೆತ್ತಿ ಸ್ಥಗಿತಗೊಳಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗೆ ಪತ್ರ ಬರೆದಿದ್ದರೆಂದು ಹೇಳಲಾಗಿದೆ.ಹೀಗಿದ್ದರೂ ಸಂಭಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ.ಇಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಮೇಲೆ ನಿಗಾ ಇಡುತ್ತಿಲ್ಲದಿರುವುದು ಇದೀಗ ಖಚಿತವಾಗಿದೆ.ಠಾಣೆ ಆವರಣದಲ್ಲಿರುವ ಕ್ಯಾಂಟೀನ್ ಹೀಗೆ ದುರುಪಯೋಗವಾದ್ರೆ ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ.ಈ ಕಾರ್ಯಕ್ರಮ ನಡೆದಿರುವುದು ಠಾಣಾಧಿಕಾರಿ ಗಮನಕ್ಕೆ ಬಂದಿಲ್ಲವೇ…? ಬಂದಿದ್ದರೂ ನಡೆಸಲು ಅನುಮತಿ ನೀಡಿದ್ದು ಏಕೆ…?ಠಾಣಾಧಿಕಾರಿ ಅನುಮತಿ ಇಲ್ಲದೆ ಇಂತಹ ಕಾರ್ಯಕ್ರಮಗಳು ನಡೆಯಲು ಸಾಧ್ಯವೇ…? ಇದುವರೆಗೆ ಏಕೆ ಕ್ರಮ ಕೈಗೊಂಡಿಲ್ಲ…? ಎಂಬ ಪ್ರಶ್ನೆಗಳಿಗೆ ಠಾಣಾಧಿಕಾರಿ ಉತ್ತರ ನೀಡಬೇಕಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *