ಆಸ್ತಿವಿವಾದ…ಕಚೇರಿಗೆ ನುಗ್ಗಿ ಗೂಂಡಾ ವರ್ತನೆ…ಪೀಠೋಪಕರಣಗಳು ಲೂಟಿ…50 ಮಂದಿ ವಿರುದ್ದ FIR ದಾಖಲು…

ಆಸ್ತಿವಿವಾದ…ಕಚೇರಿಗೆ ನುಗ್ಗಿ ಗೂಂಡಾ ವರ್ತನೆ…ಪೀಠೋಪಕರಣಗಳು ಲೂಟಿ…50 ಮಂದಿ ವಿರುದ್ದ FIR ದಾಖಲು…

ಮೈಸೂರು,ಜ8,Tv10 ಕನ್ನಡ

ಆಸ್ತಿ ವಿವಾದ ಹಿನ್ನಲೆ 40 ರಿಂದ 50 ಮಂದಿ ಕಚೇರಿಗೆ ನುಗ್ಗಿ ಗೂಂಡಾಗಳಂತೆ ವರ್ತಿಸಿ ಸಿಸಿ ಕ್ಯಾಮರಾ,ಗೇಟ್ ಗಳನ್ನ ಮುರಿದು ಮ್ಯಾನೇಜರ್ ಮೇಲೆ ಹಲ್ಲೆಗೆ ಯತ್ನಿಸಿ ಪೀಠೋಪಕರಣಗಳೊಂದಿಗೆ ಪರಾರಿಯಾದ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಈ ಸಂಭಂಧ ಕಂಪನಿ ಮ್ಯಾನೇಜರ್ ಸಂದೀಪ್ ಎಂಬುವರು ಅಕ್ಷಯ್ ಎಂಬಾತ ಸೇರಿದಂತೆ 50 ಮಂದಿ ವಿರುದ್ದ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಡೆಸಿಫರ್ ಹೆಲ್ತ್ ರೆಕಾರ್ಡ್ ಕಂಪನಿಯು ಸರ್ವೆ ನಂ 80/A ನ 35 ಗುಂಟೆ ಪ್ರದೇಶದಲ್ಲಿ ಸ್ಥಾಪನೆಯಾಗಿದೆ.ಇದರ ಮಾಲೀಕರಾದ ವಿನಾಯಕ ಶಂಕರ್ ಹಾಗೂ ಅಕ್ಷಯ್,ಚಿತ್ರಕಲಾ ಎಂಬುವರ ನಡುವೆ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದೆ.ಹೀಗಿದ್ದ ವೇಳೆ ಅಕ್ಷಯ್ ಸುಮಾರು 40 ರಿಂದ 50 ಮಂದಿ ಗುಂಪನ್ನ ಕಟ್ಟಿಕೊಂಡು ಡಿಸೆಂಬರ್ 11 ರಂದು ನುಗ್ಗಿ ಗೂಂಡಾ ವರ್ತನೆ ಪ್ರದರ್ಶಿಸಿದ್ದಾನೆ.ಇದನ್ನ ಪ್ರಶ್ನಿಸಿದ ಮ್ಯಾನೇಜರ್ ಸಂದೀಪ್ ರನ್ನ ಕಚೇರಿಯಿಂದ ಹೊರದಬ್ಬಿ ಗೇಟ್ ಗಳನ್ನ ಸಿಸಿ ಕ್ಯಾಮರಾ ಮುರಿದುಹಾಕಿದ್ದಾನೆ.ಈ ಸಂಭಂಧ ಪೊಲೀಸರ ಗಮನಕ್ಕೆ ತರುವಷ್ಟರಲ್ಲಿ ಕಚೇರಿಯಲ್ಲಿದ್ದ ಬಹುತೇಕ ಪೀಠೋಪಕರಣಗಳನ್ನ ಹೊತ್ತೊಯ್ದಿದ್ದಾನೆ.ಏರ್ ಕಂಡೀಷನರ್,ಟೇಬಲ್ ಗಳು,ಟಿವಿ,ಐರನ್ ಪೈಪ್ ಗಳು,ಗ್ರಿಲ್ಸ್ ಗಳು,ಗೇಟ್ ಗಳು,ಕಾನ್ಫರೆನ್ಸ್ ಟೇಬಲ್ ಗಳು ಸೇರಿದಂತೆ ಹಲವು ಪೀಠೋಪಕರಣಗಳನ್ನ ಕಚೇರಿ ಸಿಬ್ಬಂದಿಗಳ ಮುಂದೆಯೇ ರಾಜಾರೋಷವಾಗಿ ಹೊತ್ತು ಪರಾರಿಯಾಗಿದ್ದಾನೆ.ಹೀಗೆ ಹಲವು ಬಾರಿ ಅಕ್ಷಯ್ ಕಚೇರಿಗೆ ಬಂದು ಗೂಂಡಾ ವರ್ತನೆ ಮಾಡಿರುವುದಾಗಿ ಮ್ಯಾನೇಜರ್ ಸಂದೀಪ್ ಆರೋಪಿಸಿದ್ದಾರೆ.ಸಧ್ಯ ಅಕ್ಷಯ್ ಹಾಗೂ 50 ಸಹಚರರ ವಿರುದ್ದ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *