ಆಸ್ತಿವಿವಾದ…ಕಚೇರಿಗೆ ನುಗ್ಗಿ ಗೂಂಡಾ ವರ್ತನೆ…ಪೀಠೋಪಕರಣಗಳು ಲೂಟಿ…50 ಮಂದಿ ವಿರುದ್ದ FIR ದಾಖಲು…

ಆಸ್ತಿವಿವಾದ…ಕಚೇರಿಗೆ ನುಗ್ಗಿ ಗೂಂಡಾ ವರ್ತನೆ…ಪೀಠೋಪಕರಣಗಳು ಲೂಟಿ…50 ಮಂದಿ ವಿರುದ್ದ FIR ದಾಖಲು…

ಮೈಸೂರು,ಜ8,Tv10 ಕನ್ನಡ

ಆಸ್ತಿ ವಿವಾದ ಹಿನ್ನಲೆ 40 ರಿಂದ 50 ಮಂದಿ ಕಚೇರಿಗೆ ನುಗ್ಗಿ ಗೂಂಡಾಗಳಂತೆ ವರ್ತಿಸಿ ಸಿಸಿ ಕ್ಯಾಮರಾ,ಗೇಟ್ ಗಳನ್ನ ಮುರಿದು ಮ್ಯಾನೇಜರ್ ಮೇಲೆ ಹಲ್ಲೆಗೆ ಯತ್ನಿಸಿ ಪೀಠೋಪಕರಣಗಳೊಂದಿಗೆ ಪರಾರಿಯಾದ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಈ ಸಂಭಂಧ ಕಂಪನಿ ಮ್ಯಾನೇಜರ್ ಸಂದೀಪ್ ಎಂಬುವರು ಅಕ್ಷಯ್ ಎಂಬಾತ ಸೇರಿದಂತೆ 50 ಮಂದಿ ವಿರುದ್ದ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಡೆಸಿಫರ್ ಹೆಲ್ತ್ ರೆಕಾರ್ಡ್ ಕಂಪನಿಯು ಸರ್ವೆ ನಂ 80/A ನ 35 ಗುಂಟೆ ಪ್ರದೇಶದಲ್ಲಿ ಸ್ಥಾಪನೆಯಾಗಿದೆ.ಇದರ ಮಾಲೀಕರಾದ ವಿನಾಯಕ ಶಂಕರ್ ಹಾಗೂ ಅಕ್ಷಯ್,ಚಿತ್ರಕಲಾ ಎಂಬುವರ ನಡುವೆ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದೆ.ಹೀಗಿದ್ದ ವೇಳೆ ಅಕ್ಷಯ್ ಸುಮಾರು 40 ರಿಂದ 50 ಮಂದಿ ಗುಂಪನ್ನ ಕಟ್ಟಿಕೊಂಡು ಡಿಸೆಂಬರ್ 11 ರಂದು ನುಗ್ಗಿ ಗೂಂಡಾ ವರ್ತನೆ ಪ್ರದರ್ಶಿಸಿದ್ದಾನೆ.ಇದನ್ನ ಪ್ರಶ್ನಿಸಿದ ಮ್ಯಾನೇಜರ್ ಸಂದೀಪ್ ರನ್ನ ಕಚೇರಿಯಿಂದ ಹೊರದಬ್ಬಿ ಗೇಟ್ ಗಳನ್ನ ಸಿಸಿ ಕ್ಯಾಮರಾ ಮುರಿದುಹಾಕಿದ್ದಾನೆ.ಈ ಸಂಭಂಧ ಪೊಲೀಸರ ಗಮನಕ್ಕೆ ತರುವಷ್ಟರಲ್ಲಿ ಕಚೇರಿಯಲ್ಲಿದ್ದ ಬಹುತೇಕ ಪೀಠೋಪಕರಣಗಳನ್ನ ಹೊತ್ತೊಯ್ದಿದ್ದಾನೆ.ಏರ್ ಕಂಡೀಷನರ್,ಟೇಬಲ್ ಗಳು,ಟಿವಿ,ಐರನ್ ಪೈಪ್ ಗಳು,ಗ್ರಿಲ್ಸ್ ಗಳು,ಗೇಟ್ ಗಳು,ಕಾನ್ಫರೆನ್ಸ್ ಟೇಬಲ್ ಗಳು ಸೇರಿದಂತೆ ಹಲವು ಪೀಠೋಪಕರಣಗಳನ್ನ ಕಚೇರಿ ಸಿಬ್ಬಂದಿಗಳ ಮುಂದೆಯೇ ರಾಜಾರೋಷವಾಗಿ ಹೊತ್ತು ಪರಾರಿಯಾಗಿದ್ದಾನೆ.ಹೀಗೆ ಹಲವು ಬಾರಿ ಅಕ್ಷಯ್ ಕಚೇರಿಗೆ ಬಂದು ಗೂಂಡಾ ವರ್ತನೆ ಮಾಡಿರುವುದಾಗಿ ಮ್ಯಾನೇಜರ್ ಸಂದೀಪ್ ಆರೋಪಿಸಿದ್ದಾರೆ.ಸಧ್ಯ ಅಕ್ಷಯ್ ಹಾಗೂ 50 ಸಹಚರರ ವಿರುದ್ದ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *