ಚರಂಡಿಯಲ್ಲಿ ನವಜಾತ ಶಿಶು ಪತ್ತೆಯಾದ ಪ್ರಕರಣ…ತಾಯಿ ಪತ್ತೆ…

ಚರಂಡಿಯಲ್ಲಿ ನವಜಾತ ಶಿಶು ಪತ್ತೆಯಾದ ಪ್ರಕರಣ…ತಾಯಿ ಪತ್ತೆ…

ಎಚ್.ಡಿ.ಕೋಟೆ,ಜ11,Tv10 ಕನ್ನಡ

ನಾಲ್ಕು ದಿನಗಳ ಹಿಂದೆ ನವಜಾತ ಗಂಡು‌ ಶಿಶುವಿನ ಪ್ರಕರಣದ ಸಂಭಂಧ ಇದೀಗ ಪಾಪಿ ತಾಯಿ ಪತ್ತೆಯಾಗಿದ್ದಾಳೆ.ಆರೋಗ್ಯ ಇಲಾಖೆ

ಅಧಿಕಾರಿಗಳು ಹರಸಾಹಸ ನಡೆಸಿ ತಾಯಿಯನ್ನ ಪತ್ತೆ ಮಾಡಿದ್ದಾರೆ.16 ವರ್ಷದ ಅಪ್ರಾಪ್ತ ಬಾಲಕಿಯೇ ಮಗುವಿನ ತಾಯಿ ಆಗಿದ್ದಾಳೆ.ಮದುವೆಯಾಗದೇ ಇದ್ದರೂ ಮಗು ಜನಿಸಿದ್ದರಿಂದ ಮಗು ಜೀವಂತವಾಗಿ ಚರಂಡಿಗೆ ಎಸೆದಿರುವುದಾಗಿ ಬಾಲಕಿ ಒಪ್ಪಿಕೊಂಡಿದ್ದಾಳೆ.ತಾಯಿ ಮಾಡಿದ ತಪ್ಪಿಗೆ ಮಗು ಅನಾಥವಾಗಿ ಜಿಲ್ಲಾಸ್ಪತ್ರೆಯ ಆಶ್ರಯದಲ್ಲಿದೆ.
ಎಚ್.ಡಿ.ಕೋಟೆ ತಾಲೋಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ಘಟನೆ ನಡೆದಿತ್ತು.ರಾಜೇಗೌಡನಹುಂಡಿ ಗ್ರಾಮದ ಅಪ್ರಾಪ್ತ ಬಾಲಕಿಯೇ ಮಗು ಚರಂಡಿಗೆಸಿದಿರುವುದು ಬೆಳಕಿಗೆ ಬಂದಿದೆ. ಮಗು ಚರಂಡಿಗೆಸೆದು ಖಾಸಗಿ ಆಸ್ಪತ್ರೆ ವೈದ್ಯರಲ್ಲಿ ಹೆರಿಗೆ ಮರೆಮಾಚಿ ಹೊಟ್ಟೆನೋವೆಂದು ಹೇಳಿ ಚಿಕಿತ್ಸೆ ಪಡೆದಿದ್ದಾಳೆ.ಕಳೆದ ವರ್ಷ ಬಾಲಕಿಗೆ ವಿವಾಹ ನೆರವೇರಿಸಲು ಸಿದ್ದತೆ ನಡೆದಿದ್ದು ಸಿಡಿಪಿಒ ಇಲಾಖೆ ಮಧ್ಯ ಪ್ರವೇಶದಿಂದ ತಡೆ ಹಿಡಿಯಲಾಗಿತ್ತು.
ಸಧ್ಯದ ಸ್ಥಿತಿಯಲ್ಲಿ ಎಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಮಗು ತಾಯಿ ಮಡಿಲಿಗೆ ಸೇರಿಸಲು ಅಧಿಕಾರಿಗಳ ಹರಸಾಹಸ ನಡೆಸುತ್ತಿದ್ದಾರೆ.ಮತ್ತೊಂದೆಡೆ ಮಗು ಬೇಡವೇ
ಬೇಡ ಎಂದು ತಾಯಿ ನಿರಾಕರಿಸುತ್ತಿದ್ದಾಳೆ.
ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ಜಿಲ್ಲೆಯಲ್ಲೇ ಬಾಲ್ಯವಿವಾಹದಲ್ಲಿ ಎಚ್.ಡಿ.ಕೋಟೆ ತಾಲೋಕು ಪ್ರಥಮ ಸ್ಥಾನದಲ್ಲಿದ್ದು ಇಂದಿಗೂ ತಾಲೋಕಿನಲ್ಲಿ ಕದ್ದುಮುಚ್ಚಿ ಬಾಲ್ಯವಿವಾಹಗಳು ನಡೆಯುತ್ತಿವೆ.
ಬಾಲ್ಯವಿವಾಹ ಅಪರಾಧ ಎಂದು ಕಾನೂನು ಅರಿವು ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನತೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *