ಚರಂಡಿಯಲ್ಲಿ ನವಜಾತ ಶಿಶು ಪತ್ತೆಯಾದ ಪ್ರಕರಣ…ತಾಯಿ ಪತ್ತೆ…

ಚರಂಡಿಯಲ್ಲಿ ನವಜಾತ ಶಿಶು ಪತ್ತೆಯಾದ ಪ್ರಕರಣ…ತಾಯಿ ಪತ್ತೆ…

ಎಚ್.ಡಿ.ಕೋಟೆ,ಜ11,Tv10 ಕನ್ನಡ

ನಾಲ್ಕು ದಿನಗಳ ಹಿಂದೆ ನವಜಾತ ಗಂಡು‌ ಶಿಶುವಿನ ಪ್ರಕರಣದ ಸಂಭಂಧ ಇದೀಗ ಪಾಪಿ ತಾಯಿ ಪತ್ತೆಯಾಗಿದ್ದಾಳೆ.ಆರೋಗ್ಯ ಇಲಾಖೆ

ಅಧಿಕಾರಿಗಳು ಹರಸಾಹಸ ನಡೆಸಿ ತಾಯಿಯನ್ನ ಪತ್ತೆ ಮಾಡಿದ್ದಾರೆ.16 ವರ್ಷದ ಅಪ್ರಾಪ್ತ ಬಾಲಕಿಯೇ ಮಗುವಿನ ತಾಯಿ ಆಗಿದ್ದಾಳೆ.ಮದುವೆಯಾಗದೇ ಇದ್ದರೂ ಮಗು ಜನಿಸಿದ್ದರಿಂದ ಮಗು ಜೀವಂತವಾಗಿ ಚರಂಡಿಗೆ ಎಸೆದಿರುವುದಾಗಿ ಬಾಲಕಿ ಒಪ್ಪಿಕೊಂಡಿದ್ದಾಳೆ.ತಾಯಿ ಮಾಡಿದ ತಪ್ಪಿಗೆ ಮಗು ಅನಾಥವಾಗಿ ಜಿಲ್ಲಾಸ್ಪತ್ರೆಯ ಆಶ್ರಯದಲ್ಲಿದೆ.
ಎಚ್.ಡಿ.ಕೋಟೆ ತಾಲೋಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ಘಟನೆ ನಡೆದಿತ್ತು.ರಾಜೇಗೌಡನಹುಂಡಿ ಗ್ರಾಮದ ಅಪ್ರಾಪ್ತ ಬಾಲಕಿಯೇ ಮಗು ಚರಂಡಿಗೆಸಿದಿರುವುದು ಬೆಳಕಿಗೆ ಬಂದಿದೆ. ಮಗು ಚರಂಡಿಗೆಸೆದು ಖಾಸಗಿ ಆಸ್ಪತ್ರೆ ವೈದ್ಯರಲ್ಲಿ ಹೆರಿಗೆ ಮರೆಮಾಚಿ ಹೊಟ್ಟೆನೋವೆಂದು ಹೇಳಿ ಚಿಕಿತ್ಸೆ ಪಡೆದಿದ್ದಾಳೆ.ಕಳೆದ ವರ್ಷ ಬಾಲಕಿಗೆ ವಿವಾಹ ನೆರವೇರಿಸಲು ಸಿದ್ದತೆ ನಡೆದಿದ್ದು ಸಿಡಿಪಿಒ ಇಲಾಖೆ ಮಧ್ಯ ಪ್ರವೇಶದಿಂದ ತಡೆ ಹಿಡಿಯಲಾಗಿತ್ತು.
ಸಧ್ಯದ ಸ್ಥಿತಿಯಲ್ಲಿ ಎಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಮಗು ತಾಯಿ ಮಡಿಲಿಗೆ ಸೇರಿಸಲು ಅಧಿಕಾರಿಗಳ ಹರಸಾಹಸ ನಡೆಸುತ್ತಿದ್ದಾರೆ.ಮತ್ತೊಂದೆಡೆ ಮಗು ಬೇಡವೇ
ಬೇಡ ಎಂದು ತಾಯಿ ನಿರಾಕರಿಸುತ್ತಿದ್ದಾಳೆ.
ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ಜಿಲ್ಲೆಯಲ್ಲೇ ಬಾಲ್ಯವಿವಾಹದಲ್ಲಿ ಎಚ್.ಡಿ.ಕೋಟೆ ತಾಲೋಕು ಪ್ರಥಮ ಸ್ಥಾನದಲ್ಲಿದ್ದು ಇಂದಿಗೂ ತಾಲೋಕಿನಲ್ಲಿ ಕದ್ದುಮುಚ್ಚಿ ಬಾಲ್ಯವಿವಾಹಗಳು ನಡೆಯುತ್ತಿವೆ.
ಬಾಲ್ಯವಿವಾಹ ಅಪರಾಧ ಎಂದು ಕಾನೂನು ಅರಿವು ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನತೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *