ಚರಂಡಿಯಲ್ಲಿ ನವಜಾತ ಶಿಶು ಪತ್ತೆಯಾದ ಪ್ರಕರಣ…ತಾಯಿ ಪತ್ತೆ…

ಚರಂಡಿಯಲ್ಲಿ ನವಜಾತ ಶಿಶು ಪತ್ತೆಯಾದ ಪ್ರಕರಣ…ತಾಯಿ ಪತ್ತೆ…

ಎಚ್.ಡಿ.ಕೋಟೆ,ಜ11,Tv10 ಕನ್ನಡ

ನಾಲ್ಕು ದಿನಗಳ ಹಿಂದೆ ನವಜಾತ ಗಂಡು‌ ಶಿಶುವಿನ ಪ್ರಕರಣದ ಸಂಭಂಧ ಇದೀಗ ಪಾಪಿ ತಾಯಿ ಪತ್ತೆಯಾಗಿದ್ದಾಳೆ.ಆರೋಗ್ಯ ಇಲಾಖೆ

ಅಧಿಕಾರಿಗಳು ಹರಸಾಹಸ ನಡೆಸಿ ತಾಯಿಯನ್ನ ಪತ್ತೆ ಮಾಡಿದ್ದಾರೆ.16 ವರ್ಷದ ಅಪ್ರಾಪ್ತ ಬಾಲಕಿಯೇ ಮಗುವಿನ ತಾಯಿ ಆಗಿದ್ದಾಳೆ.ಮದುವೆಯಾಗದೇ ಇದ್ದರೂ ಮಗು ಜನಿಸಿದ್ದರಿಂದ ಮಗು ಜೀವಂತವಾಗಿ ಚರಂಡಿಗೆ ಎಸೆದಿರುವುದಾಗಿ ಬಾಲಕಿ ಒಪ್ಪಿಕೊಂಡಿದ್ದಾಳೆ.ತಾಯಿ ಮಾಡಿದ ತಪ್ಪಿಗೆ ಮಗು ಅನಾಥವಾಗಿ ಜಿಲ್ಲಾಸ್ಪತ್ರೆಯ ಆಶ್ರಯದಲ್ಲಿದೆ.
ಎಚ್.ಡಿ.ಕೋಟೆ ತಾಲೋಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ಘಟನೆ ನಡೆದಿತ್ತು.ರಾಜೇಗೌಡನಹುಂಡಿ ಗ್ರಾಮದ ಅಪ್ರಾಪ್ತ ಬಾಲಕಿಯೇ ಮಗು ಚರಂಡಿಗೆಸಿದಿರುವುದು ಬೆಳಕಿಗೆ ಬಂದಿದೆ. ಮಗು ಚರಂಡಿಗೆಸೆದು ಖಾಸಗಿ ಆಸ್ಪತ್ರೆ ವೈದ್ಯರಲ್ಲಿ ಹೆರಿಗೆ ಮರೆಮಾಚಿ ಹೊಟ್ಟೆನೋವೆಂದು ಹೇಳಿ ಚಿಕಿತ್ಸೆ ಪಡೆದಿದ್ದಾಳೆ.ಕಳೆದ ವರ್ಷ ಬಾಲಕಿಗೆ ವಿವಾಹ ನೆರವೇರಿಸಲು ಸಿದ್ದತೆ ನಡೆದಿದ್ದು ಸಿಡಿಪಿಒ ಇಲಾಖೆ ಮಧ್ಯ ಪ್ರವೇಶದಿಂದ ತಡೆ ಹಿಡಿಯಲಾಗಿತ್ತು.
ಸಧ್ಯದ ಸ್ಥಿತಿಯಲ್ಲಿ ಎಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಮಗು ತಾಯಿ ಮಡಿಲಿಗೆ ಸೇರಿಸಲು ಅಧಿಕಾರಿಗಳ ಹರಸಾಹಸ ನಡೆಸುತ್ತಿದ್ದಾರೆ.ಮತ್ತೊಂದೆಡೆ ಮಗು ಬೇಡವೇ
ಬೇಡ ಎಂದು ತಾಯಿ ನಿರಾಕರಿಸುತ್ತಿದ್ದಾಳೆ.
ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ಜಿಲ್ಲೆಯಲ್ಲೇ ಬಾಲ್ಯವಿವಾಹದಲ್ಲಿ ಎಚ್.ಡಿ.ಕೋಟೆ ತಾಲೋಕು ಪ್ರಥಮ ಸ್ಥಾನದಲ್ಲಿದ್ದು ಇಂದಿಗೂ ತಾಲೋಕಿನಲ್ಲಿ ಕದ್ದುಮುಚ್ಚಿ ಬಾಲ್ಯವಿವಾಹಗಳು ನಡೆಯುತ್ತಿವೆ.
ಬಾಲ್ಯವಿವಾಹ ಅಪರಾಧ ಎಂದು ಕಾನೂನು ಅರಿವು ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನತೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *