ಸಹಕಾರಿ ಸಂಘದ ಹಣ ಗುಳುಂ…ಸಿಇಓ ವಿರುದ್ದ FIR…30.18 ಲಕ್ಷ ದುರುಪಯೋಗ ಆರೋಪ…

ಸಹಕಾರಿ ಸಂಘದ ಹಣ ಗುಳುಂ…ಸಿಇಓ ವಿರುದ್ದ FIR…30.18 ಲಕ್ಷ ದುರುಪಯೋಗ ಆರೋಪ…

ಮೈಸೂರು,ಜ12,Tv10 ಕನ್ನಡ

ಮೈಸೂರಿನ ಜಯನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೇಗಿಲಯೋಗಿ ವಿವಿದೋದ್ದೇಶ ಸಹಕಾರ ಸಂಘದ 30.18 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಿಇಓ ವಿರುದ್ದ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ಸಂಸ್ಥೆಯ ಅಧ್ಯಕ್ಷರಾದ ಪರಮೇಶ್ವರ ರವರು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಎಂಬುವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ.

ಕಳೆದ 10 ವರ್ಷಗಳಿಂದ ವೆಂಕಟೇಶ್ ಸಂಸ್ಥೆಯಲ್ಲಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ನೇಗಿಲಯೋಗಿ ವಿವಿದೋದ್ದೇಶವಸೌಹಾರ್ಧ ಸಹಕಾರಿ ಸಂಸ್ಥೆಯು ಮರುಳೇಶ್ವರ ಸೇವಾ ಟ್ರಸ್ಟ್ ಗೆ ಸೇರಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು.ಕಾರಣಾಂತರದಿಂದ 19-02-2024 ಬೀಗ ಹಾಕಲಾಗಿತ್ತು.ಈ ಹಿನ್ನಲೆ ನೇಗಿಲಯೋಗಿ ಸಂಸ್ಥೆ 27-06-2024 ರಂದು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿತು.ಈ ಅವಧಿಯಲ್ಲಿ ಷೇರುದಾರರು ಹಾಗೂ ಸಾಲಗಾರರು ಪಾವತಿಸಬೇಕಾದ ಹಣವನ್ನ ಸಿಇಓ ವೆಂಕಟೇಶ್ ರವರಿಗೆ ತಲುಪಿಸಿದ್ದಾರೆ.ಹಣಕ್ಕೆ ರಸೀತಿ ಸಹ ನೀಡಿದ್ದಾರೆ.ಆದ್ರೆ ಹಣವನ್ನ ಸಂಸ್ಥೆಯ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಇನ್ನಿತರ ಖಾತೆಗಳಿಗೆ ಜಮಾ ಮಾಡಿದ್ದಾರೆ.ಈ ಬಗ್ಗೆ ವೆಂಕಟೇಶ್ ರವರನ್ನ ಪ್ರಶ್ನಿಸಿದಾಗ 3.06 ಲಕ್ಷ ಬಳಸಿಕೊಂಡಿರುವುದಾಗಿ ತಪ್ಪೊಪ್ಪಿಗೆ ಬರೆದು ಕೊಟ್ಟಿದ್ದಾರೆ.ಆದ್ರೆ ಆಡಿಟ್ ಮಾಡಿಸಿದಾಗ 30.18 ಲಕ್ಷ ಹಣ ದುರುಪಯೋಗವಾಗಿರುವುದಯ ಬೆಳಕಿಗೆ ಬಂದಿದೆ.ಈ ಬಗ್ಗೆ ವೆಂಕಟೇಶ್ ಸೂಕ್ತ ಉತ್ತರ ನೀಡಿಲ್ಲ ಹಾಗೂ ಸಂಸ್ಥೆಯ ಪದಾಧಿಕಾರಿಗಳ ಕೈಗೆ ಸಿಗದೆ ನಾಪತ್ತೆಯಾಗಿದ್ದಾರೆ.ಈ ಹಿನ್ನಲೆ ವೆಂಕಟೇಶ್ ವಿರುದ್ದ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *