ಸಹಕಾರಿ ಸಂಘದ ಹಣ ಗುಳುಂ…ಸಿಇಓ ವಿರುದ್ದ FIR…30.18 ಲಕ್ಷ ದುರುಪಯೋಗ ಆರೋಪ…

ಸಹಕಾರಿ ಸಂಘದ ಹಣ ಗುಳುಂ…ಸಿಇಓ ವಿರುದ್ದ FIR…30.18 ಲಕ್ಷ ದುರುಪಯೋಗ ಆರೋಪ…

ಮೈಸೂರು,ಜ12,Tv10 ಕನ್ನಡ

ಮೈಸೂರಿನ ಜಯನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೇಗಿಲಯೋಗಿ ವಿವಿದೋದ್ದೇಶ ಸಹಕಾರ ಸಂಘದ 30.18 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಿಇಓ ವಿರುದ್ದ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ಸಂಸ್ಥೆಯ ಅಧ್ಯಕ್ಷರಾದ ಪರಮೇಶ್ವರ ರವರು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಎಂಬುವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ.

ಕಳೆದ 10 ವರ್ಷಗಳಿಂದ ವೆಂಕಟೇಶ್ ಸಂಸ್ಥೆಯಲ್ಲಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ನೇಗಿಲಯೋಗಿ ವಿವಿದೋದ್ದೇಶವಸೌಹಾರ್ಧ ಸಹಕಾರಿ ಸಂಸ್ಥೆಯು ಮರುಳೇಶ್ವರ ಸೇವಾ ಟ್ರಸ್ಟ್ ಗೆ ಸೇರಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು.ಕಾರಣಾಂತರದಿಂದ 19-02-2024 ಬೀಗ ಹಾಕಲಾಗಿತ್ತು.ಈ ಹಿನ್ನಲೆ ನೇಗಿಲಯೋಗಿ ಸಂಸ್ಥೆ 27-06-2024 ರಂದು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿತು.ಈ ಅವಧಿಯಲ್ಲಿ ಷೇರುದಾರರು ಹಾಗೂ ಸಾಲಗಾರರು ಪಾವತಿಸಬೇಕಾದ ಹಣವನ್ನ ಸಿಇಓ ವೆಂಕಟೇಶ್ ರವರಿಗೆ ತಲುಪಿಸಿದ್ದಾರೆ.ಹಣಕ್ಕೆ ರಸೀತಿ ಸಹ ನೀಡಿದ್ದಾರೆ.ಆದ್ರೆ ಹಣವನ್ನ ಸಂಸ್ಥೆಯ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಇನ್ನಿತರ ಖಾತೆಗಳಿಗೆ ಜಮಾ ಮಾಡಿದ್ದಾರೆ.ಈ ಬಗ್ಗೆ ವೆಂಕಟೇಶ್ ರವರನ್ನ ಪ್ರಶ್ನಿಸಿದಾಗ 3.06 ಲಕ್ಷ ಬಳಸಿಕೊಂಡಿರುವುದಾಗಿ ತಪ್ಪೊಪ್ಪಿಗೆ ಬರೆದು ಕೊಟ್ಟಿದ್ದಾರೆ.ಆದ್ರೆ ಆಡಿಟ್ ಮಾಡಿಸಿದಾಗ 30.18 ಲಕ್ಷ ಹಣ ದುರುಪಯೋಗವಾಗಿರುವುದಯ ಬೆಳಕಿಗೆ ಬಂದಿದೆ.ಈ ಬಗ್ಗೆ ವೆಂಕಟೇಶ್ ಸೂಕ್ತ ಉತ್ತರ ನೀಡಿಲ್ಲ ಹಾಗೂ ಸಂಸ್ಥೆಯ ಪದಾಧಿಕಾರಿಗಳ ಕೈಗೆ ಸಿಗದೆ ನಾಪತ್ತೆಯಾಗಿದ್ದಾರೆ.ಈ ಹಿನ್ನಲೆ ವೆಂಕಟೇಶ್ ವಿರುದ್ದ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *