ಸಹಕಾರಿ ಸಂಘದ ಹಣ ಗುಳುಂ…ಸಿಇಓ ವಿರುದ್ದ FIR…30.18 ಲಕ್ಷ ದುರುಪಯೋಗ ಆರೋಪ…

ಸಹಕಾರಿ ಸಂಘದ ಹಣ ಗುಳುಂ…ಸಿಇಓ ವಿರುದ್ದ FIR…30.18 ಲಕ್ಷ ದುರುಪಯೋಗ ಆರೋಪ…

ಮೈಸೂರು,ಜ12,Tv10 ಕನ್ನಡ

ಮೈಸೂರಿನ ಜಯನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೇಗಿಲಯೋಗಿ ವಿವಿದೋದ್ದೇಶ ಸಹಕಾರ ಸಂಘದ 30.18 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಿಇಓ ವಿರುದ್ದ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ಸಂಸ್ಥೆಯ ಅಧ್ಯಕ್ಷರಾದ ಪರಮೇಶ್ವರ ರವರು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಎಂಬುವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ.

ಕಳೆದ 10 ವರ್ಷಗಳಿಂದ ವೆಂಕಟೇಶ್ ಸಂಸ್ಥೆಯಲ್ಲಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ನೇಗಿಲಯೋಗಿ ವಿವಿದೋದ್ದೇಶವಸೌಹಾರ್ಧ ಸಹಕಾರಿ ಸಂಸ್ಥೆಯು ಮರುಳೇಶ್ವರ ಸೇವಾ ಟ್ರಸ್ಟ್ ಗೆ ಸೇರಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು.ಕಾರಣಾಂತರದಿಂದ 19-02-2024 ಬೀಗ ಹಾಕಲಾಗಿತ್ತು.ಈ ಹಿನ್ನಲೆ ನೇಗಿಲಯೋಗಿ ಸಂಸ್ಥೆ 27-06-2024 ರಂದು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿತು.ಈ ಅವಧಿಯಲ್ಲಿ ಷೇರುದಾರರು ಹಾಗೂ ಸಾಲಗಾರರು ಪಾವತಿಸಬೇಕಾದ ಹಣವನ್ನ ಸಿಇಓ ವೆಂಕಟೇಶ್ ರವರಿಗೆ ತಲುಪಿಸಿದ್ದಾರೆ.ಹಣಕ್ಕೆ ರಸೀತಿ ಸಹ ನೀಡಿದ್ದಾರೆ.ಆದ್ರೆ ಹಣವನ್ನ ಸಂಸ್ಥೆಯ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಇನ್ನಿತರ ಖಾತೆಗಳಿಗೆ ಜಮಾ ಮಾಡಿದ್ದಾರೆ.ಈ ಬಗ್ಗೆ ವೆಂಕಟೇಶ್ ರವರನ್ನ ಪ್ರಶ್ನಿಸಿದಾಗ 3.06 ಲಕ್ಷ ಬಳಸಿಕೊಂಡಿರುವುದಾಗಿ ತಪ್ಪೊಪ್ಪಿಗೆ ಬರೆದು ಕೊಟ್ಟಿದ್ದಾರೆ.ಆದ್ರೆ ಆಡಿಟ್ ಮಾಡಿಸಿದಾಗ 30.18 ಲಕ್ಷ ಹಣ ದುರುಪಯೋಗವಾಗಿರುವುದಯ ಬೆಳಕಿಗೆ ಬಂದಿದೆ.ಈ ಬಗ್ಗೆ ವೆಂಕಟೇಶ್ ಸೂಕ್ತ ಉತ್ತರ ನೀಡಿಲ್ಲ ಹಾಗೂ ಸಂಸ್ಥೆಯ ಪದಾಧಿಕಾರಿಗಳ ಕೈಗೆ ಸಿಗದೆ ನಾಪತ್ತೆಯಾಗಿದ್ದಾರೆ.ಈ ಹಿನ್ನಲೆ ವೆಂಕಟೇಶ್ ವಿರುದ್ದ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *