ATM ನಲ್ಲಿ ಕಳ್ಳರ ಕೈಚಳಕ…ವೃದ್ದರೊಬ್ಬರ ಗಮನ ಬೇರೆಡೆ ಸೆಳೆದು ಕಾರ್ಡ್ ಕದ್ದ ಖದೀಮರು…52,000 ಡ್ರಾ ಮಾಡಿ ಎಸ್ಕೇಪ್…ಹೈದರಾಬಾದ್ ನಲ್ಲಿ ಸಿಕ್ಕಿಬಿದ್ದ ಐನಾತಿಗಳು…

ATM ನಲ್ಲಿ ಕಳ್ಳರ ಕೈಚಳಕ…ವೃದ್ದರೊಬ್ಬರ ಗಮನ ಬೇರೆಡೆ ಸೆಳೆದು ಕಾರ್ಡ್ ಕದ್ದ ಖದೀಮರು…52,000 ಡ್ರಾ ಮಾಡಿ ಎಸ್ಕೇಪ್…ಹೈದರಾಬಾದ್ ನಲ್ಲಿ ಸಿಕ್ಕಿಬಿದ್ದ ಐನಾತಿಗಳು…

ಮೈಸೂರು,ಜ12,Tv10 ಕನ್ನಡ

ಎಟಿಎಂ ನಲ್ಲಿ ಹಣ ಡ್ರಾ ಮಾಡಲು ಬಂದ ವೃದ್ದರೊಬ್ಬರ ಗಮನ ಬೇರೆಡೆ ಸೆಳೆದು ಕಾರ್ಡ್ ಲಪಟಾಯಿಸಿ ನಂತರ 52 ಸಾವಿರ ಡ್ರಾ ಮಾಡಿ ಎಸ್ಕೇಪ್ ಆಗಿದ್ದ ವಂಚಕರನ್ನ ಹೈದರಾಬಾದ್ ನಲ್ಲಿ ಪತ್ತೆ ಮಾಡಲಾಗಿದೆ.ಈ ಸಂಭಂಧ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲ್ಯಾಣಗಿರಿ ನಿವಾಸಿ ನೂರ್ ಅಹಮದ್ (75) ಎಂಬುವರು ಹಣ ಡ್ರಾ ಮಾಡಲು ಡಾ.ರಾಜ್ ಕುಮಾರ್ ರಸ್ತೆಯಲ್ಲಿರುವ ಎಟಿಎಂ ಗೆ ಹೋಗಿದ್ದಾರೆ.8 ಸಾವಿರ ಹಣ ಡ್ರಾ ಮಾಡುವ ವೇಳೆ ವ್ಯಕ್ತಿಯೊಬ್ಬ ಬುಜಕ್ಕೆ ತಗುಲಿಸಿ ತಳ್ಳಿದ್ದಾನೆ.ಇತ್ತ ತಿರುಗಿ ನೋಡುವಷ್ಟರಲ್ಲಿ ಹತ್ತಿರದಲ್ಲೇ ಇದ್ದ ಇಬ್ಬರು ಖದೀಮರು ಎಟಿಎಂ ಮೆಷಿನ್ ನಲ್ಲಿ ಹಾಕಿದ್ದ ಕಾರ್ಡ್ ನ್ನ ಬದಲಾಯಿಸಿ ನಕಲಿ ಕಾರ್ಡ್ ಇಟ್ಟಿದ್ದಾರೆ.ನೂರ್ ಅಹಮದ್ ರವರು ನಕಲಿ ಕಾರ್ಡ್ ತೆಗೆದುಕೊಂಡು ತೆರಳಿದ್ದು ನಂತರ ಅನುಮಾನಗೊಂಡು ಬ್ಯಾಂಕ್ ಗೆ ಭೇಟಿ ನೀಡಿ ಪರಿಶೀಲಿಸಿದಾಗ ವಂಚನೆಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ.ಮೆಷಿನ್ ನಿಂದ ಕಾರ್ಡ್ ತೆಗೆಯುವಷ್ಟರಲ್ಲಿ ವಂಚಕರು ನಕಲಿ ಕಾರ್ಡ್ ಇಟ್ಟು ಒರಿಜಿನಲ್ ಲಪಟಾಯಿಸಿದ್ದಾರೆ.ವೃದ್ದರು ಕಾರ್ಡ್ ಬಳಸುವಾಗ ಪಾಸ್ ವರ್ಡ್ ನೋಡಿದ್ದ ವಂಚಕರು ನಂತರ 52,400/- ರೂ ಡ್ರಾ ಮಾಡಿಕೊಂಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಉದಯಗಿರಿ ಠಾಣೆ ಪೊಲೀಸರು ಸಿಸಿ ಕ್ಯಾಮರಾ ಫುಟೇಜ್ ಪರಿಶೀಲಿಸಿ ವಂಚಕರ ಜಾಡನ್ನ ಪತ್ತೆ ಮಾಡಿದ್ದಾರೆ.ನಕಲಿ ಕಾರ್ಡ್ ಇಟ್ಟು ವಂಚನೆ ಮಾಡಿದ ಖದೀಮರನ್ನ ಪತ್ತೆ ಮಾಡುವಲ್ಲಿ ಉದಯಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *