ತಂದೆಯಾದ ಸಂಭ್ರಮದಲ್ಲೇ ಕೊನೆ ಉಸಿರೆಳೆದ ತಂದೆ…ಚೆಲುವಾಂಬ ಆಸ್ಪತ್ರೆ ಆವರಣದಲ್ಲಿ ಮನಕಲಕುವ ಘಟನೆ…

ತಂದೆಯಾದ ಸಂಭ್ರಮದಲ್ಲೇ ಕೊನೆ ಉಸಿರೆಳೆದ ತಂದೆ…ಚೆಲುವಾಂಬ ಆಸ್ಪತ್ರೆ ಆವರಣದಲ್ಲಿ ಮನಕಲಕುವ ಘಟನೆ…

ಮೈಸೂರು,ಜ13,Tv10 ಕನ್ನಡ

ತಂದೆಯಾದ ಸಂಭ್ರಮದಲ್ಲಿ ರಾತ್ರಿ ಮಲಗಿದ ತಂದೆ ಚಿರನಿದ್ರೆಗೆ ಜಾರಿದ ಮನಕಲಕುವ ಘಟನೆ ಮೈಸೂರಿನ ಚೆಲುವಾಂಬ ಆಸ್ಪತ್ರೆ ಆವರಣದಲ್ಲಿ ನಡೆದಿದೆ.ಆಸ್ಪತ್ರೆಯಲ್ಲಿ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ರೆ ಇತ್ತ ಪತಿ ರಾತ್ರಿ ಸಂತಸದಿಂದ ಮಲಗಿದವರು ಮುಂಜಾನೆಯ ಸೂರ್ಯನ ಕಿರಣಗಳನ್ನ ನೋಡಿಲ್ಲ.ಜನ್ಮ ನೀಡಿದ ತಾಯಿ ಚೆಲುವಾಂಬ ಆಸ್ಪತ್ರೆಯ ಐಸಿಯೂ ನಲ್ಲಿ ಚೇತರಿಸಿಕೊಳ್ಳುತ್ತಿದ್ದರೆ ಪತಿ ಆಸ್ಪತ್ರೆ ಆವರಣದಲ್ಲಿ ರಾತ್ರಿ ಮಲಗಿದವರು ಸಾವಿಗೆ ಶರಣಾಗಿದ್ದಾರೆ.

ಗುಂಡ್ಲುಪೇಟೆ ತಾಲೂಕು ಚೌಡಳ್ಳಿ ಗ್ರಾಮದ ರಾಜೇಶ್(35) ಮೃತ ದುರ್ದೈವಿ.ಪತ್ನಿ ಅಶ್ವತ್ಥಮ್ಮ ಐಸಿಯೂ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೂರು ದಿನಗಳ ಹಿಂದೆ ಪತ್ನಿಯನ್ನ ರಾಜೇಶ್ ಹೆರಿಗೆ ನೋವಿನ ಹಿನ್ನಲೆ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಿದ್ರು.ಅಶ್ವತ್ಥಮ್ಮರನ್ನ ಐಸಿಯೂ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ರೋಗಿಗಳ ಜೊತೆ ಬರುವ ಸಹಾಯಕರಿಗೆ ತಂಗಲು ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿದೆ.ಆದ್ರೆ ಸದರಿ ಸ್ಥಳದಲ್ಲಿ ನಿಗದಿಗಿಂತ ಹೆಚ್ಚಿನ ಜನ ತಂಗಿದ್ದ ಕಾರಣ ರಾಜೇಶ್ ರಾತ್ರಿ ವೇಳರ ಮಲಗಲು ಸಾಧ್ಯವಾಗದೆ ಆಸ್ಪತ್ರೆಯ ಹೊರ ಆವರಣದಲ್ಲಿ ಮಲಗಿದ್ದಾರೆ.ಮೂರು ದಿನಗಳಿಂದ ಇದೇ ಸ್ಥಳದಲ್ಲಿ ರಾಜೇಶ್ ಮಲಗುತ್ತಿದ್ದರೆಂದು ಹೇಳಲಾಗಿದೆ.ನಿನ್ನೆ ರಾತ್ರಿಯೂ ರಾಜೇಶ್ ಇದೇ ಸ್ಥಳದಲ್ಲಿ ಮಲಗಿದ್ದವರು ಬೆಳಿಗ್ಗೆ ಕೊನೆ ಉಸಿರೆಳೆದಿದ್ದಾರೆ.ರಾಜೇಶ್ ರವರ ಸಾವಿಗೆ ನಿಝರ ಕಾರಣ ತಿಳಿದು ಬಂದಿಲ್ಲವಾದರೂ ರಾತ್ರಿ ವೇಳೆ ಕೊರೆವ ಚಳಿಯಿಂದಾಗಿ ಹೃದಯಾಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.ಒಟ್ಟಾರೆ ರಾಜ್ಯದ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿರುವುದು ವಿಷಾಧನೀಯ.ಸರ್ಕಾರಿ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆಗೆ ಇದೊಂದು ಕಹಿ ಉದಾಹರಣೆ ಎಂದರೂ ತಪ್ಪಿಲ್ಲ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *