ಹುಲ್ಲಹಳ್ಳಿ ಗ್ರಾ.ಪಂ.ಅವ್ಯವಹಾರಗಳ ಸಮಗ್ರ ತೆನಿಖೆಗೆ ಆದೇಶ…ವಿಶೇಷ ತಂಡ ರಚನೆ…ಒಂದು ವರದಲ್ಲಿ ವರದಿ ಸಲ್ಲಿಸುವಂತೆ ಸೂಚನೆ…

ಹುಲ್ಲಹಳ್ಳಿ ಗ್ರಾ.ಪಂ.ಅವ್ಯವಹಾರಗಳ ಸಮಗ್ರ ತೆನಿಖೆಗೆ ಆದೇಶ…ವಿಶೇಷ ತಂಡ ರಚನೆ…ಒಂದು ವರದಲ್ಲಿ ವರದಿ ಸಲ್ಲಿಸುವಂತೆ ಸೂಚನೆ…

ನಂಜನಗೂಡು,ಜ13,Tv10 ಕನ್ನಡ

ಹುಲ್ಲಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ನಡೆದಿರುವ ಭ್ರಷ್ಟಾಚಾರ,ಅವ್ಯವಹಾರಗಳ ಬಗ್ಗೆ ಸಮಗ್ರ ತೆನಿಖೆ ನಡೆಸುವಂತೆ ಕಾರ್ಯನಿರ್ವಾಹಕ ಅಧಿಕಾರಿ ಆದೇಶ ಹೊರಡಿಸಿದ್ದಾರೆ.ಇದಕ್ಕಾಗಿ ವಿಶೇಷ ತಂಡ ರಚಿಸಿ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.ನಂಜನಗೂಡು ತಾಲೂಕು ಪಂಚಾಯ್ತಿಯ ಸಹಾಯಕ ಲೆಕ್ಕಾಧಿಕಾರಿ ಶ್ರೀಕಂಠನಾಯ್ಕ,ದ್ವಿತೀಯ ದರ್ಜೆ ಸಹಾಯಕ ಲೆಕ್ಕಾಧಿಕಾರಿ ಶ್ರೀನಿವಾಸ ಮೂರ್ತಿ ರವರನ್ನೊಳಗೊಂಡ ತಂಡ ರಚಿಸಲಾಗಿದೆ.

ಹುಲ್ಲಹಳ್ಳಿ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ವಿರುದ್ದ ಹಣಕಾಸು ದುರುಪಯೋಗ,ನಿರ್ವಹಣೆಯಲ್ಲಿ ಲೋಪದೋಷಗಳ ಬಗ್ಗೆ ದೂರುಗಳು ಬಂದ ಹಿನ್ನಲೆ ತೆನಿಖೆ ನಡೆಸುವಂತೆ ನಂಜನಗೂಡು ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಆದೇಶ ಹೊರಡಿಸಿದ್ದಾರೆ.

ಗ್ರಾಮಪಂಚಾಯ್ತಿಗೆ ಸೇರಿದ ಆಸ್ತಿಗಳನ್ನ ವಶಕ್ಕೆ ಪಡೆಯದೆ ನಾಮಫಲಕಗಳನ್ನ ಅಳವಡಿಸದೆ ಇರುವುದು,ಮಳಿಗೆಗಳ ಹರಾಜು ಪ್ರಕ್ರಿಯೆ ವಿಳಂಬ ಮಾಡಿರುವುದು,ಶುದ್ದ ಕುಡಿಯುವ ನೀರಿನ ಘಟಕಗಳ ಶುದ್ದೀಕರಣ ಹಾಗೂ ವಿದ್ಯುತ್ ದೀಪಗಳ ವಿಚಾರದಲ್ಲಿ 4 ಲಕ್ಷ ಹಣ ದುರ್ಬಳಕೆ ಮಾಡಿರುವುದು,ಸಂಗಮ ರಸ್ತೆ ಹಾಗೂ ರಾಜ್ಯ ಹೆದ್ದಾರಿಗಳನ್ನ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದರೂ ತೆರುವುಗೊಳಿಸಲು ಕ್ರಮ ಕೈಗೊಳ್ಳದಿರುವುದು,ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯರಿಗೆ ಆಧ್ಯತೆ ನೀಡದೆ ಅನಗತ್ಯವಾಗಿ ಹಣ ಖರ್ಚು ಮಾಡುತ್ತಿರುವುದು,ಸಾಮಾನ್ಯ ಸಭೆ ನಡೆಸದೆ 15 ನೇ ಹಣಕಾಸು ಯೋಜನೆ ಹಣ ದುರ್ಬಳಕೆ ಮಾಡಿರುವುದು,ಮುಖ್ಯ ರಸ್ತೆಗಳಲ್ಲಿ ಒಕ್ಕಣೆ ಮಾಡುತ್ತಿದ್ದರೂ ಕ್ರಮ ವಹಿಸದಿರುವುದು ಸೇರಿದಂತೆ ಇನ್ನಿತರ ಆರೋಪಗಳನ್ನ ಮಾಡಿರುವ ಹಿನ್ನಲೆ ಸಮಗ್ರ ತೆನಿಖೆ ನಡೆಸಿ ವರದಿ ಸಲ್ಲಿಸುವಂತೆ ಖಡಕ್ ಆದೇಶ ಹೊರಡಿಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *