ಹುಲ್ಲಹಳ್ಳಿ ಗ್ರಾ.ಪಂ.ಅವ್ಯವಹಾರಗಳ ಸಮಗ್ರ ತೆನಿಖೆಗೆ ಆದೇಶ…ವಿಶೇಷ ತಂಡ ರಚನೆ…ಒಂದು ವರದಲ್ಲಿ ವರದಿ ಸಲ್ಲಿಸುವಂತೆ ಸೂಚನೆ…

ಹುಲ್ಲಹಳ್ಳಿ ಗ್ರಾ.ಪಂ.ಅವ್ಯವಹಾರಗಳ ಸಮಗ್ರ ತೆನಿಖೆಗೆ ಆದೇಶ…ವಿಶೇಷ ತಂಡ ರಚನೆ…ಒಂದು ವರದಲ್ಲಿ ವರದಿ ಸಲ್ಲಿಸುವಂತೆ ಸೂಚನೆ…

ನಂಜನಗೂಡು,ಜ13,Tv10 ಕನ್ನಡ

ಹುಲ್ಲಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ನಡೆದಿರುವ ಭ್ರಷ್ಟಾಚಾರ,ಅವ್ಯವಹಾರಗಳ ಬಗ್ಗೆ ಸಮಗ್ರ ತೆನಿಖೆ ನಡೆಸುವಂತೆ ಕಾರ್ಯನಿರ್ವಾಹಕ ಅಧಿಕಾರಿ ಆದೇಶ ಹೊರಡಿಸಿದ್ದಾರೆ.ಇದಕ್ಕಾಗಿ ವಿಶೇಷ ತಂಡ ರಚಿಸಿ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.ನಂಜನಗೂಡು ತಾಲೂಕು ಪಂಚಾಯ್ತಿಯ ಸಹಾಯಕ ಲೆಕ್ಕಾಧಿಕಾರಿ ಶ್ರೀಕಂಠನಾಯ್ಕ,ದ್ವಿತೀಯ ದರ್ಜೆ ಸಹಾಯಕ ಲೆಕ್ಕಾಧಿಕಾರಿ ಶ್ರೀನಿವಾಸ ಮೂರ್ತಿ ರವರನ್ನೊಳಗೊಂಡ ತಂಡ ರಚಿಸಲಾಗಿದೆ.

ಹುಲ್ಲಹಳ್ಳಿ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ವಿರುದ್ದ ಹಣಕಾಸು ದುರುಪಯೋಗ,ನಿರ್ವಹಣೆಯಲ್ಲಿ ಲೋಪದೋಷಗಳ ಬಗ್ಗೆ ದೂರುಗಳು ಬಂದ ಹಿನ್ನಲೆ ತೆನಿಖೆ ನಡೆಸುವಂತೆ ನಂಜನಗೂಡು ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಆದೇಶ ಹೊರಡಿಸಿದ್ದಾರೆ.

ಗ್ರಾಮಪಂಚಾಯ್ತಿಗೆ ಸೇರಿದ ಆಸ್ತಿಗಳನ್ನ ವಶಕ್ಕೆ ಪಡೆಯದೆ ನಾಮಫಲಕಗಳನ್ನ ಅಳವಡಿಸದೆ ಇರುವುದು,ಮಳಿಗೆಗಳ ಹರಾಜು ಪ್ರಕ್ರಿಯೆ ವಿಳಂಬ ಮಾಡಿರುವುದು,ಶುದ್ದ ಕುಡಿಯುವ ನೀರಿನ ಘಟಕಗಳ ಶುದ್ದೀಕರಣ ಹಾಗೂ ವಿದ್ಯುತ್ ದೀಪಗಳ ವಿಚಾರದಲ್ಲಿ 4 ಲಕ್ಷ ಹಣ ದುರ್ಬಳಕೆ ಮಾಡಿರುವುದು,ಸಂಗಮ ರಸ್ತೆ ಹಾಗೂ ರಾಜ್ಯ ಹೆದ್ದಾರಿಗಳನ್ನ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದರೂ ತೆರುವುಗೊಳಿಸಲು ಕ್ರಮ ಕೈಗೊಳ್ಳದಿರುವುದು,ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯರಿಗೆ ಆಧ್ಯತೆ ನೀಡದೆ ಅನಗತ್ಯವಾಗಿ ಹಣ ಖರ್ಚು ಮಾಡುತ್ತಿರುವುದು,ಸಾಮಾನ್ಯ ಸಭೆ ನಡೆಸದೆ 15 ನೇ ಹಣಕಾಸು ಯೋಜನೆ ಹಣ ದುರ್ಬಳಕೆ ಮಾಡಿರುವುದು,ಮುಖ್ಯ ರಸ್ತೆಗಳಲ್ಲಿ ಒಕ್ಕಣೆ ಮಾಡುತ್ತಿದ್ದರೂ ಕ್ರಮ ವಹಿಸದಿರುವುದು ಸೇರಿದಂತೆ ಇನ್ನಿತರ ಆರೋಪಗಳನ್ನ ಮಾಡಿರುವ ಹಿನ್ನಲೆ ಸಮಗ್ರ ತೆನಿಖೆ ನಡೆಸಿ ವರದಿ ಸಲ್ಲಿಸುವಂತೆ ಖಡಕ್ ಆದೇಶ ಹೊರಡಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *