ಪ್ರವಾಸಿ ತಾಣಗಳಲ್ಲಿ ದುಪ್ಪಟ್ಟು ಪಾರ್ಕಿಂಗ್ ಶುಲ್ಕ ವಸೂಲಿ ಆರೋಪ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…ಪ್ರವಾಸಿಗರು ಗರಂ…

ಪ್ರವಾಸಿ ತಾಣಗಳಲ್ಲಿ ದುಪ್ಪಟ್ಟು ಪಾರ್ಕಿಂಗ್ ಶುಲ್ಕ ವಸೂಲಿ ಆರೋಪ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…ಪ್ರವಾಸಿಗರು ಗರಂ…

ಶ್ರೀರಂಗಪಟ್ಟಣ,ಜ14,Tv10 ಕನ್ನಡ

ಶ್ರೀರಂಗಪಟ್ಟಣ ಗೋಸಾಯಿಘಾಟ್ ಹಾಗೂ ಸಂಗಮದಲ್ಲಿ ದುಪ್ಪಟ್ಟು ಪಾರ್ಕಿಂಗ್ ಶುಲ್ಕ ವಸೂಲಿ ಮಾಡುತ್ತಿದ್ದಾರೆಂದು ಪ್ರವಾಸಿಗರು ಆರೋಪಿಸಿದ್ದಾರೆ.ಗುತ್ತಿಗೆದಾರರು ಶ್ರೀರಂಗಪಟ್ಟಣ ಗೋಸಾಯಿ ಘಾಟ್ ಹಾಗೂ ಟೌನ್ ಮುನಿಸಿಪಲ್ ಕೌನ್ಸಿಲ್ ಎಂದು ನಕಲಿ ಬಿಲ್ ಸೃಷ್ಟಿಸಿ ರಾಜಾರೋಷವಾಗಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವುದಾಗಿ ಆರೋಪ ಬಂದಿದೆ.ಈ ಬಗ್ಗೆ ಪ್ರವಾಸಿಗರು ಹಲವಾರು ಬಾರಿ ಮೌಖಿಕವಾಗಿ ಪುರಸಭೆ ಹಾಗೂ ಮುಜರಾಯಿ ಇಲಾಖೆಗೆ ಮಾಹಿತಿ ನೀಡಿದ್ದರೂ ಗುತ್ತಿಗೆದಾರರ ವಿರುದ್ದ ಕ್ರಮ ಕೈಗೊಂಡಿಲ್ಲ.ಟೆಂಡರ್ ದಾರರು ನಿಗದಿತ ಶುಲ್ಕಗಳ ನಾಮಫಲಕಗಳನ್ನ ಅಳವಡಿಸದೆ ಪ್ರವಾಸಿಗರನ್ನ ದಾರಿ ತಪ್ಪಿಸುತ್ತಿದ್ದಾರೆ.ನಿಯಮಗಳನ್ನ ಮೀರಿ ಶುಲ್ಕ ವಸೂಲಿ ಮಾಡಿದ್ರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರೂ ಕ್ಯಾರೆ ಎನ್ನದ ಟೆಂಡರ್ ದಾರ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿದ್ದಾನೆ.ಕೆಲವು ನೋಟೀಸ್ ಗಳನ್ನ ನೀಡಿದ್ದರೂ ಟೆಂಡರ್ ದಾರ ತನ್ನ ವರ್ತನೆ ಬದಲಾಯಿಸಿಲ್ಲವೆಂದು ಹೇಳಲಾಗಿದೆ.ಲಿಖಿತ ದೂರೊಂದು ಬಂದ್ರೆ ಮಾತ್ರ ಕ್ರಮ ಕೈಗೊಳ್ಳುವುದಾಗಿ ಪುರಸಭೆ ಮುಖ್ಯಾಧಿಕಾರಿ ರಾಜಣ್ಣ ಹೇಳುತ್ತಿದ್ದಾರೆ.ದುಪ್ಪಟ್ಟು ಶುಲ್ಕ ವಸೂಲಿ ಮಾಡುವುದಕ್ಕೆ ಬ್ರೇಕ್ ಹಾಕಲು ಲಿಖಿತ ದೂರಿಗಾಗಿ ಕಾಯುತ್ತಿರುವುದು ವಿಪರ್ಯಾಸ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *