ಎಟಿಎಂ ಗೆ ಹಣ ಹಾಕದೆ ಲಪಟಾಯಿಸಿದ ನೌಕರ…5.80 ಲಕ್ಷ ವಂಚನೆ…ಇಬ್ಬರ ವಿರುದ್ದ FIR ದಾಖಲು…
- TV10 Kannada Exclusive
- January 18, 2025
- No Comment
- 21
ಹುಣಸೂರು,ಜ18,Tv10 ಕನ್ನಡ
ಹಣ ಎಟಿಎಂಗೆ ತುಂಬದೆ ತೆಗೆದುಕೊಂಡ ಹೋದ ಆರೋಪ ಹಿನ್ನಲೆ ಇಬ್ಬರ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಣ ತುಂಬದೆ ತೆಗೆದುಕೊಂಡು ಹೋದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಹಿನ್ನಲೆ ಪ್ರಕರಣ ದಾಖಲಾಗಿದೆ.
ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ಎಂಬುವವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ಎಟಿಎಂಗೆ ಹಣ ತುಂಬವ ಏಜೆನ್ಸಿ ಪಡೆದಿದ್ದ ಟಿ ಎಲ್ ಎಂಟರ್ಪ್ರೈಸಸ್ ನಲ್ಲಿ ಕೆಲಸ ಮಾಡುತ್ತಿದ್ದ ಅಕ್ಷಯ್ ಮೈಸೂರು ಜಿಲ್ಲೆಯ ಒಟ್ಟು 16 ಎಟಿಎಂಗಳಿಗೆ
ಕಂಪನಿ ಪರವಾಗಿ ಹೋಗಿ ಹಣ ತುಂಬುವ ಕೆಲಸ ಮಾಡುತ್ತಿದ್ದ.
ಕಂಪನಿ ಆಡಿಟ್ ಮಾಡಿದಾಗ ಹಣದಲ್ಲಿ ವ್ಯತ್ಯಾಸ ಬಂದಿದೆ.
ಕ್ಯಾಶ್ ಲೋಡಿಂಗ್ ಎಟಿಎಂ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ
ಎಟಿಎಂ ನಲ್ಲಿ ಹಣ ಹಾಕದೆ ಬ್ಯಾಗ್ನಲ್ಲಿ ತುಂಬಿಕೊಂಡು
ಹೋದ ದೃಶ್ಯ ಸೆರೆಯಾಗಿದೆ.
ಗದ್ದಿಗೆ ಗ್ರಾಮದ ಎಟಿಎಂ ನಲ್ಲಿ 5 ಲಕ್ಷದ 80 ಸಾವಿರ ಹಣ ಲೋಡ್ ಮಾಡಿಲ್ಲ.ಈ ಕೃತ್ಯಕ್ಕೆ ಆಕೆಯ ಪರಿಚಯದ ತೇಜಸ್ವಿನಿ ಎಂಬಾಕೆಯ ಕುಮ್ಮಕ್ಕು ಆರೋಪ
ಇಬ್ಬರು ಈ ಹಣದಿಂದ ಚಿನ್ನ ಖರೀದಿಸಿರುವ ಬಗ್ಗೆ ಮಾಹಿತಿ ಬಂದಿದೆ.
ಚಿನ್ನದ ಅಂಗಡಿಯಲ್ಲಿ ಚಿನ್ನ ಖರೀದಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಹಿನ್ನೆಲೆ ಇಬ್ಬರ ವಿರುದ್ದ ಎಫ್ ಐ ಆರ್ ದಾಖಲಾಗಿದೆ…