ಯೂಟ್ಯೂಬ್ ನಲ್ಲಿ ಬಂದ ಲಿಂಕ್ ಎಫೆಕ್ಟ್…ವೈದ್ಯನಿಗೆ 29.70 ಲಕ್ಷ ಉಂಡೆನಾಮ…

ಯೂಟ್ಯೂಬ್ ನಲ್ಲಿ ಬಂದ ಲಿಂಕ್ ಎಫೆಕ್ಟ್…ವೈದ್ಯನಿಗೆ 29.70 ಲಕ್ಷ ಉಂಡೆನಾಮ…

ಮೈಸೂರು,ಜ20,Tv10 ಕನ್ನಡ

ಯೂಟ್ಯೂಬ್ ನಲ್ಲಿ ಬಂದ ಲಿಂಕ್ ಒಂದರ ಮೆಸೇಜ್ ಫಾಲೋ ಮಾಡಿದ ಮೈಸೂರಿನ ವೈದ್ಯರೊಬ್ಬರು 29.71 ಲಕ್ಷ ಹಣ ಕಳೆದುಕೊಂಡಿದ್ದಾರೆ.ಶ್ರೀರಾಂಪುರ ನಿವಾಸಿ ಡಾ.ಪಿ.ಶ್ರೀನಿವಾಸ ಮೂರ್ತಿ ಹಣ ಕಳೆದುಕೊಂಡವರು.ಈ ಕುರಿತಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯೂಟ್ಯೂಬ್ ವೀಕ್ಷಿಸುತ್ತಿದ್ದ ವೇಳೆ ಲಿಂಕ್ ಒಂದು ಬಂದಿದೆ.ಇದನ್ನ ಓಪನ್ ಮಾಡಿದಾಗ ಇಂಟರ್ ನ್ಯಾಷನಲ್ ಕಾಂಪಿಟೇಷನ್ ನಲ್ಲಿ ಭಾಗವಹಿಸಲು ಇಚ್ಛೆ ಇದೆಯಾ ಎಂದು ಕೇಳಿದ್ದಾರೆ.ಇದಕ್ಕೆ ಡಾ.ಶ್ರೀನಿವಾಸ ಮೂರ್ತಿ ಒಪ್ಪಿಕೊಂಡು ಅವರು ಹೇಳಿದಂತೆ ಕೆವೈಸಿ ಅಪಡೇಟ್ ಮಾಡಿಕೊಟ್ಟಿದ್ದಾರೆ.ನಂತರ ಇನ್ವೆಸ್ಟ್ ಮಾಡುವಂತೆ ಸಲಹೆ ನೀಡಿದ್ದಾರೆ.ಇದಕ್ಕಾಗಿ ವಂಚಕ ಹೇಳಿದ್ದ ಆಪ್ ಒಂದನ್ನ ಡೌನ್ ಲೋಡ್ ಮಾಡಿಕೊಂಡಿದ್ದಾರೆ.ನಂತರ IPO ಅಕೌಂಟ್ ಕ್ರಿಯೇಟ್ ಮಾಡಿ ಇನ್ವೆಸ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ.ನಂತರ 26 ಲಕ್ಷ ಮೊತ್ತದ ಟಾಸ್ಕ್ ನೀಡಿ ಕಂಪ್ಲೀಟ್ ಮಾಡುವಂತೆ ತಿಳಿಸಿದ್ದಾರೆ.ತಮ್ಮ ಬಳಿ ಹಣ ಇಲ್ಲವೆಂದು ತಿಳಿಸಿದಾಗ ಖಾತೆಯಲ್ಲಿ 5 ಲಕ್ಷ ಇದೆ ಅಲ್ಲದೆ ಸಪೋರ್ಟಿಂಗ್ ಫಂಡ್ 10 ಲಕ್ಷ ಕಂಪನಿಯಿಂದ ನೀಡಲಾಗುತ್ತದೆ ಎಂದು ನಂಬಿಸಿದ್ದಾರೆ.ಇದನ್ನ ನಂಬಿದ ಶ್ರೀನಿವಾಸ ಮೂರ್ತಿ ರವರು ಹಣ ಹೂಡಲು ಮುಂದಾಗಿದ್ದಾರೆ.ಈ ವೇಳೆ ಖಾತೆಯಲ್ಲಿ ಲಾಭಾಂಶ ತೋರಿಸಿದೆ.ಹಣ ವಿತ್ ಡ್ರಾ ಮಾಡಲು ಮುಂದಾದಾಗ ಸಪೋರ್ಟಿಂಗ್ ಫಂಡ್ ಹಿಂದಿರುಗಿಸುವಂತೆ ಸೂಚನೆ ನೀಡಿದ್ದಾರೆ.ಅಲ್ಲದೆ 3.06 ಲಕ್ಷ ಟ್ಯಾಕ್ಸ್ ಪೇ ಮಾಡುವಂತೆ ಸೂಚನೆ ನೀಡಿದ್ದಾರೆ.ವಂಚಕರ ಮಾತು ನಂಬಿ ಶ್ರೀನಿವಾಸ ಮೂರ್ತಿ ರವರು ಹಂತ ಹಂತಗಳಲ್ಲಿ 29,71.442/- ರೂ ಗಳನ್ನ ವರ್ಗಾಯಿಸಿದ್ದಾರೆ.ನಂತರ ತಾವು ಮೋಸ ಹೋಗಿರುವುದು ಖಚಿತವಾಗಿದೆ.ಡಾ.ಶ್ರೀನಿವಾಸ ಮೂರ್ತಿ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *