ಗಾಂಜಾ ಸೇವನೆ ಮಾಡ್ತೀಯ ಎಂದು ಬೆದರಿಸಿ 10 ಸಾವಿರ ಕಿತ್ತ ಖದೀಮರು…ನಾಲ್ವರ ವಿರುದ್ದ FIR ದಾಖಲು…

ಗಾಂಜಾ ಸೇವನೆ ಮಾಡ್ತೀಯ ಎಂದು ಬೆದರಿಸಿ 10 ಸಾವಿರ ಕಿತ್ತ ಖದೀಮರು…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಜ20,Tv10 ಕನ್ನಡ

ಗಾಂಜಾ ಸೇವನೆ ಮಾಡುತ್ತಿದ್ದೀಯ ಪೊಲೀಸರನ್ನ ಕರೆಸ್ತೀನಿ,ಮನೆಯವರನ್ನ ಕರೆಸ್ತೀನಿ ಎಂದು ಬೆದರಿಕೆ ಹಾಕಿದ ನಾಲ್ವರು ಯುವಕರ ತಂಡ ಖಾಸಗಿ ಕಂಪನಿ ಉದ್ಯೋಗಿಯಿಂದ 10 ಸಾವಿರ ಪೀಕಿದ ಘಟನೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ವಿನಾಯಕನಗರದಲ್ಲಿ ನಡೆದಿದೆ.ಪಡುವಾರಹಳ್ಳಿ ನಿವಾಸಿಗಳಾದ ವರುಣ್,ಒಂಟೆ ಹಾಗೂ ಇನ್ನಿಬ್ಬರ ಮೇಲೆ ಪ್ರಕರಣ ದಾಖಲಾಗಿದೆ.ಖಾಸಗಿ ಕಂಪನಿಯೊಂದರ ಟೆಕ್ನಿಕಲ್ ಅಡ್ವೈಸರ್ ಆಗಿರುವ ಚಿರಾಗ್ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿನಾಯಕನಗರದಲ್ಲಿ ಬಾಡಿಗೆ ಪಡೆದಿದ್ದ ಕೊಠಡಿಯಲ್ಲಿ ಒಂಟಿಯಾಗಿ ಕುಳಿತಿದ್ದ ವೇಳೆ ವರುಣ್,ಒಂಟೆ ಹಾಗೂ ಇನ್ನಿಬ್ಬರು ಅಕ್ರಮವಾಗಿ ನುಗ್ಗಿದ್ದಾರೆ.ನೀನು ಗಾಂಜಾ ಸೇವನೆ ಮಾಡ್ತಿದ್ದೀಯ ಪೊಲೀಸರನ್ನ ಕರೆಸ್ತೀನಿ,ನಿಮ್ಮ ಮನೆಯವರನ್ನ ಕರೆಸ್ತೀನಿ ಎಂದು ಬೆದರಿಕೆ ಹಾಕಿದ್ದಾರೆ.ಒಂದು ವಾರದ ಹಿಂದೆ ಕೊಲೆ ಮಾಡಿ ಬಂದಿದ್ದೀನಿ ನನಗೆ ತೊಂದರೆ ಮಾಡಿದ್ರೆ ನನ್ನನ್ನ ಕೊಲೆ ಮಾಡಲು ಬಂದಿದ್ದೀಯ ಎಂದು ಹೇಳ್ತೀನಿ ಎಂದು ಹೆದರಿಸಿದ್ದಾರೆ.ನಂತರ ಬಲವಂತವಾಗಿ ಕೊಠಡಿಯಿಂದ ಹೊರಕ್ಕೆ ಕರೆದೊಯ್ದು ಮಹಾರಾಣಿ ಕಾಲೇಜಿನ ಬಳಿ ಇರುವ ಪೆಟ್ರೋಲ್ ಬಂಕ್ ಬಳಿ ಕರೆದೊಯ್ದು ಸ್ಕ್ಯಾನ್ನಿಂಗ್ ಮೂಲಕ 10 ಸಾವಿರ ಗೂಗಲ್ ಪೇ ಡ್ರಾ ಮಾಡಿಸಿ ನಾಪತ್ತೆಯಾಗಿದ್ದಾರೆ.ಮತ್ತೊಮ್ಮೆ ಕೊಠಡಿಗೆ ಬಂದು ಇದೇ ರೀತಿ ಧಂಕಿ ಹಾಕಿದ್ದಾರೆ.ಆಗ ಚಿರಾಗ್ ರವರ ಸ್ನೇಹಿತರಾದ ಪೂಣಚ್ಚ,ಪೌಲೋಸ್ ಎಂಬುವರನ್ನ ಕರೆಸಿದಾಗ ವರುಣ್ ಹಾಗೂ ತಂಡ ಪರಾರಿಯಾಗಿದೆ.ಅಕ್ರಮವಾಗಿ ಕೊಠಡಿಗೆ ನುಗ್ಗಿ ಹಣ ಕಿತ್ತ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಚಿರಾಗ್ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *