ಗಾಂಜಾ ಸೇವನೆ ಮಾಡ್ತೀಯ ಎಂದು ಬೆದರಿಸಿ 10 ಸಾವಿರ ಕಿತ್ತ ಖದೀಮರು…ನಾಲ್ವರ ವಿರುದ್ದ FIR ದಾಖಲು…

ಗಾಂಜಾ ಸೇವನೆ ಮಾಡ್ತೀಯ ಎಂದು ಬೆದರಿಸಿ 10 ಸಾವಿರ ಕಿತ್ತ ಖದೀಮರು…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಜ20,Tv10 ಕನ್ನಡ

ಗಾಂಜಾ ಸೇವನೆ ಮಾಡುತ್ತಿದ್ದೀಯ ಪೊಲೀಸರನ್ನ ಕರೆಸ್ತೀನಿ,ಮನೆಯವರನ್ನ ಕರೆಸ್ತೀನಿ ಎಂದು ಬೆದರಿಕೆ ಹಾಕಿದ ನಾಲ್ವರು ಯುವಕರ ತಂಡ ಖಾಸಗಿ ಕಂಪನಿ ಉದ್ಯೋಗಿಯಿಂದ 10 ಸಾವಿರ ಪೀಕಿದ ಘಟನೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ವಿನಾಯಕನಗರದಲ್ಲಿ ನಡೆದಿದೆ.ಪಡುವಾರಹಳ್ಳಿ ನಿವಾಸಿಗಳಾದ ವರುಣ್,ಒಂಟೆ ಹಾಗೂ ಇನ್ನಿಬ್ಬರ ಮೇಲೆ ಪ್ರಕರಣ ದಾಖಲಾಗಿದೆ.ಖಾಸಗಿ ಕಂಪನಿಯೊಂದರ ಟೆಕ್ನಿಕಲ್ ಅಡ್ವೈಸರ್ ಆಗಿರುವ ಚಿರಾಗ್ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿನಾಯಕನಗರದಲ್ಲಿ ಬಾಡಿಗೆ ಪಡೆದಿದ್ದ ಕೊಠಡಿಯಲ್ಲಿ ಒಂಟಿಯಾಗಿ ಕುಳಿತಿದ್ದ ವೇಳೆ ವರುಣ್,ಒಂಟೆ ಹಾಗೂ ಇನ್ನಿಬ್ಬರು ಅಕ್ರಮವಾಗಿ ನುಗ್ಗಿದ್ದಾರೆ.ನೀನು ಗಾಂಜಾ ಸೇವನೆ ಮಾಡ್ತಿದ್ದೀಯ ಪೊಲೀಸರನ್ನ ಕರೆಸ್ತೀನಿ,ನಿಮ್ಮ ಮನೆಯವರನ್ನ ಕರೆಸ್ತೀನಿ ಎಂದು ಬೆದರಿಕೆ ಹಾಕಿದ್ದಾರೆ.ಒಂದು ವಾರದ ಹಿಂದೆ ಕೊಲೆ ಮಾಡಿ ಬಂದಿದ್ದೀನಿ ನನಗೆ ತೊಂದರೆ ಮಾಡಿದ್ರೆ ನನ್ನನ್ನ ಕೊಲೆ ಮಾಡಲು ಬಂದಿದ್ದೀಯ ಎಂದು ಹೇಳ್ತೀನಿ ಎಂದು ಹೆದರಿಸಿದ್ದಾರೆ.ನಂತರ ಬಲವಂತವಾಗಿ ಕೊಠಡಿಯಿಂದ ಹೊರಕ್ಕೆ ಕರೆದೊಯ್ದು ಮಹಾರಾಣಿ ಕಾಲೇಜಿನ ಬಳಿ ಇರುವ ಪೆಟ್ರೋಲ್ ಬಂಕ್ ಬಳಿ ಕರೆದೊಯ್ದು ಸ್ಕ್ಯಾನ್ನಿಂಗ್ ಮೂಲಕ 10 ಸಾವಿರ ಗೂಗಲ್ ಪೇ ಡ್ರಾ ಮಾಡಿಸಿ ನಾಪತ್ತೆಯಾಗಿದ್ದಾರೆ.ಮತ್ತೊಮ್ಮೆ ಕೊಠಡಿಗೆ ಬಂದು ಇದೇ ರೀತಿ ಧಂಕಿ ಹಾಕಿದ್ದಾರೆ.ಆಗ ಚಿರಾಗ್ ರವರ ಸ್ನೇಹಿತರಾದ ಪೂಣಚ್ಚ,ಪೌಲೋಸ್ ಎಂಬುವರನ್ನ ಕರೆಸಿದಾಗ ವರುಣ್ ಹಾಗೂ ತಂಡ ಪರಾರಿಯಾಗಿದೆ.ಅಕ್ರಮವಾಗಿ ಕೊಠಡಿಗೆ ನುಗ್ಗಿ ಹಣ ಕಿತ್ತ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಚಿರಾಗ್ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *