ಗಾಂಜಾ ಸೇವನೆ ಮಾಡ್ತೀಯ ಎಂದು ಬೆದರಿಸಿ 10 ಸಾವಿರ ಕಿತ್ತ ಖದೀಮರು…ನಾಲ್ವರ ವಿರುದ್ದ FIR ದಾಖಲು…

ಗಾಂಜಾ ಸೇವನೆ ಮಾಡ್ತೀಯ ಎಂದು ಬೆದರಿಸಿ 10 ಸಾವಿರ ಕಿತ್ತ ಖದೀಮರು…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಜ20,Tv10 ಕನ್ನಡ

ಗಾಂಜಾ ಸೇವನೆ ಮಾಡುತ್ತಿದ್ದೀಯ ಪೊಲೀಸರನ್ನ ಕರೆಸ್ತೀನಿ,ಮನೆಯವರನ್ನ ಕರೆಸ್ತೀನಿ ಎಂದು ಬೆದರಿಕೆ ಹಾಕಿದ ನಾಲ್ವರು ಯುವಕರ ತಂಡ ಖಾಸಗಿ ಕಂಪನಿ ಉದ್ಯೋಗಿಯಿಂದ 10 ಸಾವಿರ ಪೀಕಿದ ಘಟನೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ವಿನಾಯಕನಗರದಲ್ಲಿ ನಡೆದಿದೆ.ಪಡುವಾರಹಳ್ಳಿ ನಿವಾಸಿಗಳಾದ ವರುಣ್,ಒಂಟೆ ಹಾಗೂ ಇನ್ನಿಬ್ಬರ ಮೇಲೆ ಪ್ರಕರಣ ದಾಖಲಾಗಿದೆ.ಖಾಸಗಿ ಕಂಪನಿಯೊಂದರ ಟೆಕ್ನಿಕಲ್ ಅಡ್ವೈಸರ್ ಆಗಿರುವ ಚಿರಾಗ್ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿನಾಯಕನಗರದಲ್ಲಿ ಬಾಡಿಗೆ ಪಡೆದಿದ್ದ ಕೊಠಡಿಯಲ್ಲಿ ಒಂಟಿಯಾಗಿ ಕುಳಿತಿದ್ದ ವೇಳೆ ವರುಣ್,ಒಂಟೆ ಹಾಗೂ ಇನ್ನಿಬ್ಬರು ಅಕ್ರಮವಾಗಿ ನುಗ್ಗಿದ್ದಾರೆ.ನೀನು ಗಾಂಜಾ ಸೇವನೆ ಮಾಡ್ತಿದ್ದೀಯ ಪೊಲೀಸರನ್ನ ಕರೆಸ್ತೀನಿ,ನಿಮ್ಮ ಮನೆಯವರನ್ನ ಕರೆಸ್ತೀನಿ ಎಂದು ಬೆದರಿಕೆ ಹಾಕಿದ್ದಾರೆ.ಒಂದು ವಾರದ ಹಿಂದೆ ಕೊಲೆ ಮಾಡಿ ಬಂದಿದ್ದೀನಿ ನನಗೆ ತೊಂದರೆ ಮಾಡಿದ್ರೆ ನನ್ನನ್ನ ಕೊಲೆ ಮಾಡಲು ಬಂದಿದ್ದೀಯ ಎಂದು ಹೇಳ್ತೀನಿ ಎಂದು ಹೆದರಿಸಿದ್ದಾರೆ.ನಂತರ ಬಲವಂತವಾಗಿ ಕೊಠಡಿಯಿಂದ ಹೊರಕ್ಕೆ ಕರೆದೊಯ್ದು ಮಹಾರಾಣಿ ಕಾಲೇಜಿನ ಬಳಿ ಇರುವ ಪೆಟ್ರೋಲ್ ಬಂಕ್ ಬಳಿ ಕರೆದೊಯ್ದು ಸ್ಕ್ಯಾನ್ನಿಂಗ್ ಮೂಲಕ 10 ಸಾವಿರ ಗೂಗಲ್ ಪೇ ಡ್ರಾ ಮಾಡಿಸಿ ನಾಪತ್ತೆಯಾಗಿದ್ದಾರೆ.ಮತ್ತೊಮ್ಮೆ ಕೊಠಡಿಗೆ ಬಂದು ಇದೇ ರೀತಿ ಧಂಕಿ ಹಾಕಿದ್ದಾರೆ.ಆಗ ಚಿರಾಗ್ ರವರ ಸ್ನೇಹಿತರಾದ ಪೂಣಚ್ಚ,ಪೌಲೋಸ್ ಎಂಬುವರನ್ನ ಕರೆಸಿದಾಗ ವರುಣ್ ಹಾಗೂ ತಂಡ ಪರಾರಿಯಾಗಿದೆ.ಅಕ್ರಮವಾಗಿ ಕೊಠಡಿಗೆ ನುಗ್ಗಿ ಹಣ ಕಿತ್ತ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಚಿರಾಗ್ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…
ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…

Leave a Reply

Your email address will not be published. Required fields are marked *