ಸೀಟ್ ಬಾಡಿಗೆ ವಿಚಾರದಲ್ಲಿ ಕಿರಿಕ್…ಆಟೋ ಚಾಲಕನಿಗೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ ಪ್ರಕರಣ ದಾಖಲು…

ಸೀಟ್ ಬಾಡಿಗೆ ವಿಚಾರದಲ್ಲಿ ಕಿರಿಕ್…ಆಟೋ ಚಾಲಕನಿಗೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಜ20,Tv10 ಕನ್ನಡ

ಆಟೋ ಸೀಟ್ ಬಾಡಿಗೆ ಹೊಡೆಯುವ ವಿಚಾರದಲ್ಲಿ ಇಬ್ಬರು ಯುವಕರು ಕಿರಿಕ್ ತೆಗೆದು ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸಾತಗಳ್ಳಿ ನಿವಾಸಿ ನವೀದ್ ಪಾಷಾ (25) ಗಾಯಗೊಂಡವರು.ಓಂಕಾರ್ ಹಾಗೂ ಶೇಖರ ಎಂಬುವರ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ನವೀದ್ ಪಾಷಾ ರವರು ಗ್ರಾಮಾಂತರ ಬಸ್ ನಿಲ್ದಾಣದಿಂದ ಶಾಂತಿನಗರ,ಕೆಸರೆ ಬಡಾವಣೆಗೆ ಸೀಟ್ ಬಾಡಿಗೆ ಹೊಡೆಯುತ್ತಾರೆ.ಈ ವಿಚಾರದಲ್ಲಿ ಓಂಕಾರ್ ವಿರೋಧಿಸಿ ಈ ಜಾಗದಲ್ಲಿ ಸೀಟ್ ಬಾಡಿಗೆ ಹೊಡೆಯಬಾರದೆಂದು ಧಂಕಿ ಹಾಕಿದ್ದಾನೆ.ಓಂಕಾರ್ ಮಾತಿಗೆ ಕ್ಯಾರೆ ಎನ್ನದ ನವೀದ್ ಪಾಷ ಬಾಡಿಗೆ ಹೊಡೆಯಲು ಬಂದಾಗ ಎಷ್ಟು ಸಾರಿ ಹೇಳುವುದೋ ಎಂದು ಕಿರಿಕ್ ತೆಗೆದಿದ್ದಾನೆ.ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದ ವೇಳೆ ಜೊತೆಗೆ ಬಂದಿದ್ದ ಶೇಖರ ಚಾಕುವಿನಿಂದ ಮುಖ,ಬೆನ್ನು,ತಲೆಗೆ ಇರಿದಿದ್ದಾನೆ.ಶೇಖರ್ ಜೊತೆಗೆ ಓಂಕಾರ್ ಸಹ ಚಾಕುವಿನಿಂದ ಇರಿದಿದ್ದಾನೆ.ಗಾಯಗೊಂಡ ನವೀದ್ ಪಾಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ…
ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…

Leave a Reply

Your email address will not be published. Required fields are marked *