ಸೀಟ್ ಬಾಡಿಗೆ ವಿಚಾರದಲ್ಲಿ ಕಿರಿಕ್…ಆಟೋ ಚಾಲಕನಿಗೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ ಪ್ರಕರಣ ದಾಖಲು…

ಸೀಟ್ ಬಾಡಿಗೆ ವಿಚಾರದಲ್ಲಿ ಕಿರಿಕ್…ಆಟೋ ಚಾಲಕನಿಗೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಜ20,Tv10 ಕನ್ನಡ

ಆಟೋ ಸೀಟ್ ಬಾಡಿಗೆ ಹೊಡೆಯುವ ವಿಚಾರದಲ್ಲಿ ಇಬ್ಬರು ಯುವಕರು ಕಿರಿಕ್ ತೆಗೆದು ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸಾತಗಳ್ಳಿ ನಿವಾಸಿ ನವೀದ್ ಪಾಷಾ (25) ಗಾಯಗೊಂಡವರು.ಓಂಕಾರ್ ಹಾಗೂ ಶೇಖರ ಎಂಬುವರ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ನವೀದ್ ಪಾಷಾ ರವರು ಗ್ರಾಮಾಂತರ ಬಸ್ ನಿಲ್ದಾಣದಿಂದ ಶಾಂತಿನಗರ,ಕೆಸರೆ ಬಡಾವಣೆಗೆ ಸೀಟ್ ಬಾಡಿಗೆ ಹೊಡೆಯುತ್ತಾರೆ.ಈ ವಿಚಾರದಲ್ಲಿ ಓಂಕಾರ್ ವಿರೋಧಿಸಿ ಈ ಜಾಗದಲ್ಲಿ ಸೀಟ್ ಬಾಡಿಗೆ ಹೊಡೆಯಬಾರದೆಂದು ಧಂಕಿ ಹಾಕಿದ್ದಾನೆ.ಓಂಕಾರ್ ಮಾತಿಗೆ ಕ್ಯಾರೆ ಎನ್ನದ ನವೀದ್ ಪಾಷ ಬಾಡಿಗೆ ಹೊಡೆಯಲು ಬಂದಾಗ ಎಷ್ಟು ಸಾರಿ ಹೇಳುವುದೋ ಎಂದು ಕಿರಿಕ್ ತೆಗೆದಿದ್ದಾನೆ.ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದ ವೇಳೆ ಜೊತೆಗೆ ಬಂದಿದ್ದ ಶೇಖರ ಚಾಕುವಿನಿಂದ ಮುಖ,ಬೆನ್ನು,ತಲೆಗೆ ಇರಿದಿದ್ದಾನೆ.ಶೇಖರ್ ಜೊತೆಗೆ ಓಂಕಾರ್ ಸಹ ಚಾಕುವಿನಿಂದ ಇರಿದಿದ್ದಾನೆ.ಗಾಯಗೊಂಡ ನವೀದ್ ಪಾಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *