ಸೀಟ್ ಬಾಡಿಗೆ ವಿಚಾರದಲ್ಲಿ ಕಿರಿಕ್…ಆಟೋ ಚಾಲಕನಿಗೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ ಪ್ರಕರಣ ದಾಖಲು…

ಸೀಟ್ ಬಾಡಿಗೆ ವಿಚಾರದಲ್ಲಿ ಕಿರಿಕ್…ಆಟೋ ಚಾಲಕನಿಗೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಜ20,Tv10 ಕನ್ನಡ

ಆಟೋ ಸೀಟ್ ಬಾಡಿಗೆ ಹೊಡೆಯುವ ವಿಚಾರದಲ್ಲಿ ಇಬ್ಬರು ಯುವಕರು ಕಿರಿಕ್ ತೆಗೆದು ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸಾತಗಳ್ಳಿ ನಿವಾಸಿ ನವೀದ್ ಪಾಷಾ (25) ಗಾಯಗೊಂಡವರು.ಓಂಕಾರ್ ಹಾಗೂ ಶೇಖರ ಎಂಬುವರ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ನವೀದ್ ಪಾಷಾ ರವರು ಗ್ರಾಮಾಂತರ ಬಸ್ ನಿಲ್ದಾಣದಿಂದ ಶಾಂತಿನಗರ,ಕೆಸರೆ ಬಡಾವಣೆಗೆ ಸೀಟ್ ಬಾಡಿಗೆ ಹೊಡೆಯುತ್ತಾರೆ.ಈ ವಿಚಾರದಲ್ಲಿ ಓಂಕಾರ್ ವಿರೋಧಿಸಿ ಈ ಜಾಗದಲ್ಲಿ ಸೀಟ್ ಬಾಡಿಗೆ ಹೊಡೆಯಬಾರದೆಂದು ಧಂಕಿ ಹಾಕಿದ್ದಾನೆ.ಓಂಕಾರ್ ಮಾತಿಗೆ ಕ್ಯಾರೆ ಎನ್ನದ ನವೀದ್ ಪಾಷ ಬಾಡಿಗೆ ಹೊಡೆಯಲು ಬಂದಾಗ ಎಷ್ಟು ಸಾರಿ ಹೇಳುವುದೋ ಎಂದು ಕಿರಿಕ್ ತೆಗೆದಿದ್ದಾನೆ.ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದ ವೇಳೆ ಜೊತೆಗೆ ಬಂದಿದ್ದ ಶೇಖರ ಚಾಕುವಿನಿಂದ ಮುಖ,ಬೆನ್ನು,ತಲೆಗೆ ಇರಿದಿದ್ದಾನೆ.ಶೇಖರ್ ಜೊತೆಗೆ ಓಂಕಾರ್ ಸಹ ಚಾಕುವಿನಿಂದ ಇರಿದಿದ್ದಾನೆ.ಗಾಯಗೊಂಡ ನವೀದ್ ಪಾಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *